ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ : ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ

24

ವಾಷಿಂಗ್ಟನ್: ರಷ್ಯಾದ ತೈಲ ಖರೀದಿಗೆ ಪ್ರತಿಯಾಗಿ ಭಾರತದ ವಸ್ತುಗಳ ಮೇಲೆ ದಂಡನಾತ್ಮಕ ಸುಂಕ ವಿಧಿಸಿದ ತಿಂಗಳುಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ರಷ್ಯಾದಿಂದ ತೈಲ ಇನ್ನು ಮುಂದೆ ಖರೀದಿಸುವುದಿಲ್ಲ ಎಂದು ಅವರು ನನಗೆ ಭರವಸೆ ನೀಡಿದ್ದಾರೆ ಎಂದು ಟ್ರಂಪ್ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಸುಂಕ ಹೇರಿಕೆ ಪ್ರಕ್ರಿಯೆ ತಕ್ಷಣವೇ ನಿಲ್ಲಿಸಲು ಸಾಧ್ಯವಿಲ್ಲ, ಆದರೆ ಪ್ರಕ್ರಿಯೆ ಮುಂದುವರಿದಿದ್ದು ಸದ್ಯದಲ್ಲಿಯೇ ನಿಲ್ಲಲಿದೆ ಎಂದರು. ಟ್ರಂಪ್ ಅವರ ಹೇಳಿಕೆಯನ್ನು ಭಾರತ ತಕ್ಷಣವೇ ದೃಢಪಡಿಸಲಿಲ್ಲ. ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ಹೊರತಾಗಿಯೂ, ಭಾರತ ತನ್ನ ಐತಿಹಾಸಿಕ ಪಾಲುದಾರ ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಿತ್ತು, ಪ್ರಧಾನಿ ಮೋದಿ ಈ ಹಿಂದೆ ಅದನ್ನು ಸಮರ್ಥಿಸಿಕೊಂಡಿದ್ದರು ಕೂಡ.

ಟ್ರಂಪ್‌ರನ್ನು Pak PM ಹೊಗಳುತ್ತಿದ್ದಾಗ ಹಿಂದೆ ನಿಂತಿದ್ದ Italy ಪ್ರಧಾನಿ ಜಾರ್ಜಿಯಾ ಮೆಲೋನಿ ರಿಯಾಕ್ಷನ್; ಆದರೆ ದ್ವಿಪಕ್ಷೀಯ ಸಂಬಂಧ ಸುಧಾರಣೆ ಮಾಡುವ ದೃಷ್ಟಿಯಿಂದ ಮೋದಿ ಅವರು ನೂತನವಾಗಿ ನೇಮಕಗೊಂಡಿರುವ ಯುಎಸ್ ರಾಯಭಾರಿ, ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಸೆರ್ಗಿಯೊ ಗೋರ್ ಅವರನ್ನು ಭೇಟಿ ಮಾಡಿದ್ದಾರೆ.

ಈ ಮೂಲಕ ಟ್ರಂಪ್ ಅವರೊಂದಿಗಿನ ಸಂಬಂಧವನ್ನು ಸರಿಪಡಿಸುವ ಬಯಕೆಯನ್ನು ತೋರಿಸಿದಂತೆ ಕಂಡುಬಂದಿದೆ. ಅಮೆರಿಕಾದಲ್ಲಿ ಟ್ರಂಪ್ ಆಡಳಿತವು ಭಾರತದೊಂದಿಗಿನ ಸಂಬಂಧವನ್ನು ಗೌರವಿಸುತ್ತದೆ. ಟ್ರಂಪ್ ಮತ್ತು ಮೋದಿ ನಡುವಿನ ದೂರವಾಣಿ ಮಾತುಕತೆ ಬಗ್ಗೆ ಆಶಾವಾದಿಗಳಾಗಿದ್ದೇವೆ ಎಂದಿದ್ದಾರೆ. ಮೋದಿ ಅದ್ಭುತ ವ್ಯಕ್ತಿ ಟ್ರಂಪ್ ಶ್ವೇತಭವನದಲ್ಲಿ ನೀಡಿದ ಹೇಳಿಕೆಯಲ್ಲಿ, ಜವಾಹರಲಾಲ್ ನೆಹರೂ ನಂತರ ಭಾರತದ ಎರಡನೇ ಅತಿ ಹೆಚ್ಚು ವರ್ಷ ಪ್ರಧಾನಿಯಾಗಿದ್ದ ಮೋದಿ ಅವರೊಂದಿಗಿನ ಸಂಬಂಧ ಉತ್ತಮವಾಗಿದೆ. ಮೋದಿ ಒಬ್ಬ ಮಹಾನ್ ವ್ಯಕ್ತಿ.

ಅವರು ನನ್ನನ್ನು ಪ್ರೀತಿಸುತ್ತಾರೆ ಎಂದು ಹೇಳಿದ್ದಾರೆ. ನಾನು ಅವರ ರಾಜಕೀಯ ವೃತ್ತಿಜೀವನವನ್ನು ನಾಶಮಾಡಲು ಬಯಸುವುದಿಲ್ಲ. ನಾನು ವರ್ಷಗಳಿಂದ ಭಾರತವನ್ನು ನೋಡುತ್ತಿದ್ದೇನೆ. ಅದು ಅದ್ಭುತ ದೇಶ, ನನ್ನ ಸ್ನೇಹಿತ ಬಹಳ ಸಮಯದಿಂದ ಅಲ್ಲಿದ್ದಾನೆ ಎಂದು ಹೇಳಿದರು. ಆಗಸ್ಟ್‌ನಲ್ಲಿ ಟ್ರಂಪ್ ಅಮೆರಿಕಕ್ಕೆ ಭಾರತೀಯ ರಫ್ತಿನ ಮೇಲಿನ ಸುಂಕವನ್ನು ಶೇಕಡಾ 50 ಕ್ಕೆ ಹೆಚ್ಚಿಸಿದರು, ಟ್ರಂಪ್ ಅವರ ಸಹಾಯಕರು ಭಾರತವು ಉಕ್ರೇನ್‌ನಲ್ಲಿ ರಷ್ಯಾದ ಯುದ್ಧಕ್ಕೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದರು.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...