ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಇನ್ಮುಂದೆ ಅನುಮತಿ ಪಡೆದುಕೊಳ್ಳುವುದು ಕಡ್ಡಾಯ

47

ಸರ್ಕಾರಿ ಶಾಲೆಗಳ ಮೈದಾನ ಬಳಕೆ ಸಂಬಂಧ ಸದ್ಬಳಕೆ ಮಾಡುವ ಸಂಬಂಧ ನಿಯಮ ರೂಪಿಸಲು ಸಚಿವ ಸಂಪುಟ ಮಾಡಲು ತೀರ್ಮಾನ ಒತ್ತಡದಿಂದ, ಅತಿಕ್ರಮ ಪ್ರವೇಶ ಮಾಡುವುದನ್ನು ತಡೆಯಲು ಈ ತೀರ್ಮಾನ ಕೇರಳ ಮತ್ತು ತಮಿಳುನಾಡಿನಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಅದೇ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಕೆ ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅನುಮತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಆದ ನಿರ್ಣಯ ಏನು?

ಬೆಂಗಳೂರು: ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಇನ್ಮುಂದೆ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಈ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನುಬದ್ದವಾಗಿ ನಡೆಸಲು ಅನುಮತಿ ನೀಡಲು ಅನುಮೋದನೆ ನೀಡಲಾಗಿದೆ.

ಸಾರ್ವಜನಿಕ ಸ್ಥಳ, ಸರ್ಕಾರಿ ಶಾಲೆಗಳ ಮೈದಾನ ಬಳಕೆ ಸಂಬಂಧ ಸದ್ಬಳಕೆ ಮಾಡುವ ಸಂಬಂಧ ನಿಯಮ ರೂಪಿಸಲು ಸಚಿವ ಸಂಪುಟ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್ ಕೆ ಪಾಟೀಲ್ ಮಾಹಿತಿ ನೀಡಿದರು.

ಬೆಂಗಳೂರಲ್ಲೇ RSS ಮುಖ್ಯಸ್ಥ, ಏನಿದರ ರಹಸ್ಯ? ಈ ಬಗ್ಗೆ ವಿಸ್ತೃತವಾಗಿ ಜಿಒ ಹೊರಡಿಸಲಾಗುವುದು. ಈ ಮುಂಚೆ ಈ ಸಂಬಂಧ ಕಾನೂನಿನಲ್ಲಿ ಗೊಂದಲ ಇತ್ತು.‌ ಈ ಬಗ್ಗೆ ಸ್ಪಷ್ಟತೆ ಕೊಡಲು, ಕೆಲ ನಿಯಮಗಳನ್ನು ಸೇರ್ಪಡಿಸಿ ನೀತಿ ನಿಯಮ ರೂಪಿಸಲಾಗುವುದು. ಒತ್ತಡದಿಂದ, ಅತಿಕ್ರಮ ಪ್ರವೇಶ ಮಾಡುವುದನ್ನು ತಡೆಯಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಆರ್ ಎಸ್ ಎಸ್ ಚಟುವಟಿಕೆಗೆ ಸರ್ಕಾರಿ ಶಾಲಾ ಆವರಣದಲ್ಲಿ ಮೂಗುದಾರ ಹಾಕುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಪ್ರಿಯಾಂಕ್ ಖರ್ಗೆ ಈ ಪತ್ರ ವಿವಾದ ಸೃಷ್ಟಿಸಿತ್ತು. ಇದೇ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಯಿತು. ಕೇರಳ ಮತ್ತು ತಮಿಳುನಾಡಿನಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಅದೇ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಹಾಗೂ ತೀರ್ಮಾನ ಕೈಗೊಳ್ಳಲಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ಪರೀಕ್ಷೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ :: ಹೈಕೋರ್ಟ್ ಆದೇಶ

ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ...

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...