ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಇನ್ಮುಂದೆ ಅನುಮತಿ ಪಡೆದುಕೊಳ್ಳುವುದು ಕಡ್ಡಾಯ

31

ಸರ್ಕಾರಿ ಶಾಲೆಗಳ ಮೈದಾನ ಬಳಕೆ ಸಂಬಂಧ ಸದ್ಬಳಕೆ ಮಾಡುವ ಸಂಬಂಧ ನಿಯಮ ರೂಪಿಸಲು ಸಚಿವ ಸಂಪುಟ ಮಾಡಲು ತೀರ್ಮಾನ ಒತ್ತಡದಿಂದ, ಅತಿಕ್ರಮ ಪ್ರವೇಶ ಮಾಡುವುದನ್ನು ತಡೆಯಲು ಈ ತೀರ್ಮಾನ ಕೇರಳ ಮತ್ತು ತಮಿಳುನಾಡಿನಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಅದೇ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಕೆ ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅನುಮತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಆದ ನಿರ್ಣಯ ಏನು?

ಬೆಂಗಳೂರು: ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಇನ್ಮುಂದೆ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಈ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನುಬದ್ದವಾಗಿ ನಡೆಸಲು ಅನುಮತಿ ನೀಡಲು ಅನುಮೋದನೆ ನೀಡಲಾಗಿದೆ.

ಸಾರ್ವಜನಿಕ ಸ್ಥಳ, ಸರ್ಕಾರಿ ಶಾಲೆಗಳ ಮೈದಾನ ಬಳಕೆ ಸಂಬಂಧ ಸದ್ಬಳಕೆ ಮಾಡುವ ಸಂಬಂಧ ನಿಯಮ ರೂಪಿಸಲು ಸಚಿವ ಸಂಪುಟ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್ ಕೆ ಪಾಟೀಲ್ ಮಾಹಿತಿ ನೀಡಿದರು.

ಬೆಂಗಳೂರಲ್ಲೇ RSS ಮುಖ್ಯಸ್ಥ, ಏನಿದರ ರಹಸ್ಯ? ಈ ಬಗ್ಗೆ ವಿಸ್ತೃತವಾಗಿ ಜಿಒ ಹೊರಡಿಸಲಾಗುವುದು. ಈ ಮುಂಚೆ ಈ ಸಂಬಂಧ ಕಾನೂನಿನಲ್ಲಿ ಗೊಂದಲ ಇತ್ತು.‌ ಈ ಬಗ್ಗೆ ಸ್ಪಷ್ಟತೆ ಕೊಡಲು, ಕೆಲ ನಿಯಮಗಳನ್ನು ಸೇರ್ಪಡಿಸಿ ನೀತಿ ನಿಯಮ ರೂಪಿಸಲಾಗುವುದು. ಒತ್ತಡದಿಂದ, ಅತಿಕ್ರಮ ಪ್ರವೇಶ ಮಾಡುವುದನ್ನು ತಡೆಯಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಆರ್ ಎಸ್ ಎಸ್ ಚಟುವಟಿಕೆಗೆ ಸರ್ಕಾರಿ ಶಾಲಾ ಆವರಣದಲ್ಲಿ ಮೂಗುದಾರ ಹಾಕುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಪ್ರಿಯಾಂಕ್ ಖರ್ಗೆ ಈ ಪತ್ರ ವಿವಾದ ಸೃಷ್ಟಿಸಿತ್ತು. ಇದೇ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಯಿತು. ಕೇರಳ ಮತ್ತು ತಮಿಳುನಾಡಿನಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಅದೇ ಮಾದರಿಯನ್ನು ಕರ್ನಾಟಕದಲ್ಲಿ ಅಳವಡಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಹಾಗೂ ತೀರ್ಮಾನ ಕೈಗೊಳ್ಳಲಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ಮೈಲಾರ ಲಿಂಗೇಶ್ವರನ ಐತಿಹಾಸಿಕ ಕಾರ್ಣಿಕೋತ್ಸವ – 2026 18 ಅಡಿ ಎತ್ತರದ ಬಿಲ್ಲೇರಿ ನುಡಿದ ದೈವವಾಣಿ

“ವಿಜಯನಗರ: ಉತ್ತರ ಕರ್ನಾಟಕದ ಹಾಗೂ ಕೋಟಿ ಕೋಟಿ ಭಕ್ತರ ನಂಬಿಕೆಯ ಕೇಂದ್ರವಾಗಿರುವ ವಿಜಯನಗರ ಜಿಲ್ಲೆಯ ಹೂವಿನ...

ಬೇಲಿಕೇರಿ ಕಬ್ಬಿಣದ ಅದಿರು ಅಕ್ರಮ ಸಾಗಾಟ ಪ್ರಕರಣ ತಂದೆ ಮಗನಿಗೆ ಮೂರು ವರ್ಷ ಜೈಲು ಶಿಕ್ಷೆ, 52.55ಲಕ್ಷ ದಂಡ ವಿಧಿಸಿದ  ನ್ಯಾಯಾಲಯ

“ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು...

ಇಂಧನ ಖಾತೆ ಕೆಲಸಗಳಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ರಾಜೀನಾಮೆಗೆ ಮುಂದಾದರೆ ಇಂಧನ ಸಚಿವ ಕೆ ಜೆ ಜಾರ್ಜ್

“ಇಂಧನ ಸಚಿವ ಕೆ.ಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೇ, ಈ ವಿಚಾರ ಮಾಧ್ಯಮಗಳಲ್ಲಿ...

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ  ಹೈಕೋರ್ಟ್

“ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್...