ಆನ್‌ಲೈನ್‌ ಮೂಲಕ ಭಾವಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ತೀರ್ಮಾನ

30

ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಬೇಕಾಗಿದೆ ಬಿ.ಎಡ್‌ ಪದವೀಧರರು ಆನ್‌ಲೈನ್‌ ಪರೀಕ್ಷಾ ವಿಧಾನದಿಂದ ಪಾರದರ್ಶಕತೆ, ತ್ವರಿತವಾಗಿ ಫಲಿತಾಂಶ ಪ್ರಕಟಿಸಲು ಅನುಕೂಲ ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳ ಮೇಳೆ ಪರಿಣಾಂ ಬೀರಲಿದೆ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಬಿ.ಎಡ್‌ ಪದವೀಧರರು ಇನ್ಮುಂದೆ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕಿದೆ.

ಆಫ್‌ಲೈನ್‌ ಪರೀಕ್ಷೆಗೆ ವಿದಾಯ ಹೇಳುವ ಮೂಲಕ ಮೊದಲ ಬಾರಿ ಆನ್‌ಲೈನ್‌ನಲ್ಲೇ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಕಂಪ್ಯೂಟರ್‌ ಆಧರಿತ ಪರೀಕ್ಷೆ ನಡೆಸಲು ಸರಕಾರದಿಂದ ಅಗತ್ಯ ಒಪ್ಪಿಗೆ ಸಿಕ್ಕಿದ್ದು, ಟೆಂಡರ್‌ ಪ್ರಕ್ರಿಯೆ ಇನ್ನಷ್ಟೇ ಆರಂಭವಾಗಬೇಕಿದೆ. ಯಾಕೆ ಆನ್‌ಲೈನ್‌ ಪರೀಕ್ಷೆ? ಆಫ್‌ಲೈನ್‌ ಪರೀಕ್ಷೆಯಲ್ಲಿ ಮೇಲಿಂದ ಮೇಲೆ ಅಕ್ರಮಗಳು ನುಸುಳುತ್ತಿದ್ದು, ಪರೀಕ್ಷೆಯಲ್ಲಿ ಪಾರದರ್ಶಕತೆ ತರುವುದು ಮತ್ತು ಹೊಣೆಗಾರಿಕೆಯಿಂದ ಪರೀಕ್ಷೆ ನಡೆಸುವುದು ಆನ್‌ಲೈನ್‌ ಪರೀಕ್ಷೆ ಉದ್ದೇಶವಾಗಿದೆ. ಮತ್ತೊಂದೆಡೆ ಪರೀಕ್ಷೆ ನಂತರ ಬೇಗ ಫಲಿತಾಂಶ ಪ್ರಕಟಿಸಲು ಆನ್‌ಲೈನ್‌ ಪರೀಕ್ಷಾ ಪದ್ಧತಿ ಹೆಚ್ಚು ಅನುಕೂಲವಾಗಿದೆ.

ಅಕ್ರಮದಿಂದ ಮುಕ್ತವಾದ ಪರೀಕ್ಷೆಗಳಲ್ಲಿ ಅರ್ಹರು, ಪ್ರತಿಭಾವಂತರು ಆಯ್ಕೆಯಾಗಲು ಸಹಕಾರಿ ಆಗಲಿದ್ದು ಪರೀಕ್ಷೆ ಬಗ್ಗೆ ಅಭ್ಯರ್ಥಿಗಳಿಗೂ ನಂಬಿಕೆ ಬರಲಿದೆ. ಇಲಾಖೆಯ ಉಸ್ತುವಾರಿ ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಸಬೇಕಿರುವ ಹಿನ್ನೆಲೆಯಲ್ಲಿ, ಟಿಇಟಿ ಹೊಣೆಯನ್ನು ಏಜೆನ್ಸಿಗೆ ನೀಡಲು ಯೋಜಿಸಲಾಗಿದೆ. ಪರೀಕ್ಷೆ ನಡೆಸಲು ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡ ನಂತರ ಕಾರ್ಯಚಟುವಟಿಕೆಗಳು ಶುರುವಾಗಲಿವೆ. ಟಿಇಟಿ ಪರೀಕ್ಷೆಯನ್ನು ಏಜೆನ್ಸಿ ನಡೆಸಿದರೂ ನೇತೃತ್ವ, ನೋಂದಣಿ, ಪರೀಕ್ಷಾ ಪ್ರಕ್ರಿಯೆ ಹಾಗೂ ಫಲಿತಾಂಶ, ಅಂಕ ಪರಿಗಣನೆ ಪ್ರಕ್ರಿಯೆಯನ್ನು ಇಲಾಖೆಯ ಕೇಂದ್ರಿಕೃತ ದಾಖಲಾತಿ ಘಟಕವೇ ನಿರ್ವಹಿಸಲಿದೆ.

ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವುದು ಇಲಾಖೆಗೆ ಸವಾಲಾಗಿದ್ದಿ, ಆನ್‌ಲೈನ್‌ ವಂಚನೆ ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ ಪ್ರತಿಯೊಂದು ಹಂತದ ಮೇಲೆ ನಿಗಾವಹಿಸಬೇಕಿದೆ. ಪ್ರಸ್ತಾವನೆ ಸಲ್ಲಿಕೆ ಆನ್‌ಲೈನ್‌ ಪರೀಕ್ಷೆ ನಡೆಸುವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರಿಕೃತ ದಾಖಲಾತಿ ಘಟಕ ಸಲ್ಲಿಸಿದ ಪ್ರಸ್ತಾವನೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಈಗಾಗಲೇ ಅನುಮತಿ ನೀಡಿದ್ದಾರೆ. ಪ್ರತಿ ವರ್ಷ 2.50 ಲಕ್ಷದಿಂದ 3 ಲಕ್ಷ ಅಭ್ಯರ್ಥಿಗಳು ಹಾಗೂ ಆಕಾಂಕ್ಷಿಗಳು ಟಿಇಟಿ ಪರೀಕ್ಷೆ ಬರೆಯುತ್ತಾರೆ.

ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಕ್ಕೆ ಟಿಇಟಿ ಅರ್ಹತೆ ಕಡ್ಡಾಯವಾಗಿದ್ದು, ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರಲಿದ್ದಾರೆ. 2023ರಲ್ಲಿ ಪತ್ರಿಕೆ 1ಕ್ಕೆ 1,27,130 ಹಾಗೂ ಪತ್ರಿಕೆ 2ಕ್ಕೆ 1,74,834 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಅದೇ ರೀತಿ 2024ರಲ್ಲಿ ಎರಡೂ ಪತ್ರಿಕೆಗಳಿಂದ 2,70,514 ಜನರು ನೋಂದಣಿ ಮಾಡಿಕೊಂಡು 2,45,466 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ರಾಜ್ಯದಲ್ಲಿ ಒಟ್ಟು 405 ಬಿ.ಎಡ್‌ ಕಾಲೇಜುಗಳಲ್ಲಿ 13 ಸರಕಾರಿ ಸ್ವಾಮ್ಯದ ಕಾಲೇಜುಗಳಿದ್ದು, ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಬಿ.ಎಡ್‌ ಪದವಿ ಪೂರೈಸುತ್ತಾರೆ. ಒಟ್ಟಾರೆ ಪರೀಕ್ಷೆ ಸುಸೂತ್ರವಾಗಿ ನಡೆದು, ಅಭ್ಯರ್ಥಿಗಳಿಗೆ ಅನುಕೂಲವಾದರೆ ಸಾಕು ಎಂಬ ಮಾತುಗಳು ಎಲ್ಲೆಡೆ ಕೇಳಿಬಂದಿವೆ.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...