ದೀಪಾವಳಿಯು ಸಂಭ್ರಮದ ಜೊತೆಗೆ ಪಟಾಕಿ ಅವಘಡಗಳ ಅಪಾಯ : ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ಆಸ್ಪತ್ರೆಗಳು ತುರ್ತು ಚಿಕಿತ್ಸೆಗಾಗಿ ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿವೆ.

37

ಮಿಂಟೋ ಆಸ್ಪತ್ರೆಯಲ್ಲಿ 25 ಹಾಸಿಗೆಗಳು ಮೀಸಲು, 24/7 ತುರ್ತು ಚಿಕಿತ್ಸಾ ಘಟಕ ಮಕ್ಕಳ ಸುರಕ್ಷತೆಗೆ ಆದ್ಯತೆ, ಪೋಷಕರ ಮೇಲ್ವಿಚಾರಣೆ ಕಡ್ಡಾಯವೆಂದು ತಜ್ಞರ ಸಲಹೆ ಕಣ್ಣಿಗೆ ಗಾಯವಾದರೆ ಉಜ್ಜಬೇಡಿ, ತಕ್ಷಣ ವೈದ್ಯರನ್ನು ಸಂಪರ್ಕಿಸಿ ಪಟಾಕಿ ಸಿಡಿಸುವ ವೇಳೆ ಹತ್ತಿ ಬಟ್ಟೆ ಧರಿಸಿ, ಸಮೀಪದಲ್ಲಿ ನೀರು ಇಟ್ಟುಕೊಳ್ಳಿ ದೀಪಾವಳಿ ಸಂಭ್ರಮದ ವೇಳೇ ಪಟಾಕಿ ಅವಘಡಗಳೂ ಸಂಭವಿಸುವುದು ಸಾಮಾನ್ಯ. ಇದಕ್ಕಾಗಿ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ.

ಬೆಂಗಳೂರು: ದೀಪಗಳ ಹಬ್ಬ ದೀಪಾವಳಿಯ ಸಂಭ್ರಮ ಎಲ್ಲೆಡೆ ಮನೆಮಾಡಿದೆ. ಆದರೆ ಈ ಸಂಭ್ರಮದ ನಡುವೆ ಪಟಾಕಿ ಸಿಡಿತದಿಂದ ಉಂಟಾಗಬಹುದಾದ ಅವಘಡಗಳ ಬಗ್ಗೆ ಜಾಗರೂಕರಾಗಿರುವುದು ಅತ್ಯಗತ್ಯ. ಯಾವುದೇ ಅಹಿತಕರ ಘಟನೆ ನಡೆದರೂ ತಕ್ಷಣ ಸ್ಪಂದಿಸಲು ಬೆಂಗಳೂರು ನಗರದ ಪ್ರಮುಖ ಆಸ್ಪತ್ರೆಗಳು ಸನ್ನದ್ಧವಾಗಿದ್ದು, 24/7 ಸೇವೆಗೆ ಸಜ್ಜಾಗಿವೆ.

ಪಟಾಕಿ ಅವಘಡಗಳಲ್ಲಿ ಕಣ್ಣಿನ ಗಾಯಗಳೇ ಹೆಚ್ಚಾಗಿ ಸಂಭವಿಸುವುದರಿಂದ, ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಗಾಯಾಳುಗಳ ಚಿಕಿತ್ಸೆಗಾಗಿ ಒಟ್ಟು 25 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, ಇದರಲ್ಲಿ 10 ಪುರುಷರಿಗೆ, 10 ಮಹಿಳೆಯರಿಗೆ ಮತ್ತು 5 ಮಕ್ಕಳಿಗೆ ಮೀಸಲಿರಿಸಲಾಗಿದೆ. ಹಬ್ಬದ ದಿನಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ನಿರಂತರವಾಗಿ ಕರ್ತವ್ಯದಲ್ಲಿರುತ್ತಾರೆ.”

Leave a comment

Leave a Reply

Your email address will not be published. Required fields are marked *

Related Articles

ಪೊಲೀಸ್ ಠಾಣೆಯಲ್ಲಿ ಲಂಚ ಸ್ವೀಕಾರ ಲೋಕಾಯುಕ್ತ ದಾಳಿ ಪಿಎಸ್ಐ ಹಾಗೂ ಓರ್ವ ಕಾನ್ಸ್ಟೇಬಲ್ ಬಂಧನ

“ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ...

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...