ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ದೇಶಕ್ಕೆ ಕರೆತರುವ ಪ್ರಯತ್ನದಲ್ಲಿ ಭಾರತಕ್ಕೆ ಮಹತ್ವದ ಯಶಸ್ಸು

30

ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ಕೋರ್ಟ್ ಗ್ರೀನ್ ಸಿಗ್ನಲ್ ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ಆದೇಶದ ವಿರುದ್ಧ 15 ದಿನಗಳೊಳಗೆ ಬೆಲ್ಜಿಯಂ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಚೋಕ್ಸಿಗೆ ಅವಕಾಶ 13,000 ಕೋಟಿ ರೂ. ವಂಚನೆ ಆರೋಪ ಎದುರಿಸುತ್ತಿರುವ ಚೋಕ್ಸಿಯನ್ನು ಏಪ್ರಿಲ್ 11 ರಂದು ಬಂಧಿಸಿದ್ದ ಪೊಲೀಸರು ಚೋಕ್ಸಿಯನ್ನು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲು ವ್ಯವಸ್ಥೆ, ಉನ್ನತ ಮಟ್ಟದ ಭದ್ರತೆ ಮತ್ತು ಸೌಲಭ್ಯಗಳ ಭರವಸೆ ಮೆಹುಲ್‌ ಚೋಕ್ಸಿಯನ್ನು ಭಾರತಕ್ಕೆ ವಾಪಸ್‌ ಕರೆತರುವ ಪ್ರಯತ್ನದಲ್ಲಿ ಭಾರತಕ್ಕೆ ಮಹತ್ವದ ಜಯ ಸಿಕ್ಕಿದೆ.

ಹೊಸದಿಲ್ಲಿ: ಸಾವಿರಾರು ಕೋಟಿ ರೂಪಾಯಿಗಳ ಬ್ಯಾಂಕ್ ವಂಚನೆ ಪ್ರಕರಣದ ಪ್ರಮುಖ ಆರೋಪಿ, ಭಾರತದಿಂದ ಪರಾರಿಯಾಗಿರುವ ವಜ್ರದ ಉದ್ಯಮಿ ಮೆಹುಲ್‌ ಚೋಕ್ಸಿಯನ್ನು ಭಾರತಕ್ಕೆ ಕರೆತರುವಲ್ಲಿ ಕೇಂದ್ರ ಸರ್ಕಾರಕ್ಕೆ ದೊಡ್ಡ ರಾಜತಾಂತ್ರಿಕ ಜಯ ಲಭಿಸಿದೆ. ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂನ ಆಂಟ್ವೆರ್ಪ್ ನಗರದ ನ್ಯಾಯಾಲಯ ಶುಕ್ರವಾರ ಸಮ್ಮತಿ ಸೂಚಿಸಿದೆ.

ಭಾರತದ ಮನವಿಯನ್ನು ಆಧರಿಸಿ ಬೆಲ್ಜಿಯಂ ಪೊಲೀಸರು ಚೋಕ್ಸಿಯನ್ನು ಬಂಧಿಸಿದ್ದು ಕಾನೂನುಬದ್ಧವಾಗಿದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಕಳೆದ ಏಪ್ರಿಲ್ 11 ರಂದು ಆಂಟ್ವೆರ್ಪ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ 66 ವರ್ಷದ ಚೋಕ್ಸಿ, ಕಳೆದ ನಾಲ್ಕು ತಿಂಗಳುಗಳಿಂದ ಜೈಲಿನಲ್ಲಿದ್ದಾರೆ. ಈ ಅವಧಿಯಲ್ಲಿ ಆತ ಸಲ್ಲಿಸಿದ್ದ ಹಲವು ಜಾಮೀನು ಅರ್ಜಿಗಳನ್ನು ಬೆಲ್ಜಿಯಂ ನ್ಯಾಯಾಲಯಗಳು ತಿರಸ್ಕರಿಸಿವೆ.  

15 ದಿನಗಳೊಳಗೆ ಬೆಲ್ಜಿಯಂನ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಚೋಕ್ಸಿಗೆ ಅವಕಾಶವಿದೆ. ಹೀಗಿದ್ದೂ ಇದು ಭಾರತದ ಹೋರಾಟದಲ್ಲಿ ಮಹತ್ವದ ಜಯವಾಗಿದೆ. ಭಾರತದ ಪರವಾಗಿ ಬೆಲ್ಜಿಯಂ ಪ್ರಾಸಿಕ್ಯೂಟರ್‌ಗಳು ಮತ್ತು ಚೋಕ್ಸಿ ಪರ ವಕೀಲರ ತಂಡದ ವಾದ-ಪ್ರತಿವಾದವನ್ನು ನ್ಯಾಯಾಲಯ ಆಲಿಸಿತು.

ಚೋಕ್ಸಿ ವಿರುದ್ಧ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 13,000 ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120ಬಿ (ಕ್ರಿಮಿನಲ್ ಪಿತೂರಿ), 420 (ವಂಚನೆ), 201 (ಸಾಕ್ಷ್ಯ ನಾಶ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಅಪರಾಧಗಳು ಬೆಲ್ಜಿಯಂ ಕಾನೂನಿನ ಅಡಿಯಲ್ಲೂ ಶಿಕ್ಷಾರ್ಹವಾಗಿವೆ.

ಇದನ್ನು ‘ದ್ವಂದ್ವ ಅಪರಾಧ’ ಎಂದು ಪರಿಗಣಿಸಿ ಹಸ್ತಾಂತರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರತ ಸರ್ಕಾರವು ತನ್ನ ವಾದವನ್ನು ಸಮರ್ಥಿಸಿಕೊಳ್ಳಲು ವಿಶ್ವಸಂಸ್ಥೆಯ ಭ್ರಷ್ಟಾಚಾರ ವಿರೋಧಿ ಒಡಂಬಡಿಕೆ (ಯುಎನ್‌ಸಿಎಸಿ) ಸೇರಿದಂತೆ ಹಲವು ಅಂತರಾಷ್ಟ್ರೀಯ ಒಪ್ಪಂದಗಳನ್ನು ಉಲ್ಲೇಖಿಸಿತ್ತು. ಸಿಬಿಐ ಅಧಿಕಾರಿಗಳು ಸಾಕ್ಷ್ಯಗಳನ್ನು ಒದಗಿಸಲು ಮೂರು ಬಾರಿ ಬೆಲ್ಜಿಯಂಗೆ ಭೇಟಿಯನ್ನೂ ನೀಡಿದ್ದರು.

ಹಸ್ತಾಂತರದ ನಂತರ ಚೋಕ್ಸಿಯನ್ನು ಮುಂಬೈನ ಆರ್ಥರ್ ರೋಡ್ ಜೈಲಿನ 12ನೇ ಬ್ಯಾರಕ್‌ನಲ್ಲಿ ಇರಿಸಲಾಗುವುದು ಎಂದು ಭಾರತ ಸರ್ಕಾರ ಬೆಲ್ಜಿಯಂ ಅಧಿಕಾರಿಗಳಿಗೆ ಭರವಸೆ ನೀಡಿದೆ. ಈ ಜೈಲಿನಲ್ಲಿ ಯುರೋಪಿಯನ್ ಮಾನದಂಡಗಳಿಗೆ ಸರಿಸಮನಾದ ಸೌಲಭ್ಯಗಳನ್ನು ಒದಗಿಸಲಾಗುವುದು. ಶುದ್ಧ ಕುಡಿಯುವ ನೀರು, ಉತ್ತಮ ಆಹಾರ, ದಿನಪತ್ರಿಕೆ, ಟಿವಿ, ಖಾಸಗಿ ವೈದ್ಯರ ಭೇಟಿಗೆ ಅವಕಾಶ, ದಪ್ಪ ಹತ್ತಿಯ ಹಾಸಿಗೆ, ದಿಂಬು, ಹೊದಿಕೆ, ಹೊರಾಂಗಣ ವ್ಯಾಯಾಮ ಮತ್ತು ಚೆಸ್, ಕ್ಯಾರಮ್‌ನಂತಹ ಆಟಗಳ ಸೌಲಭ್ಯ ನೀಡುವುದಾಗಿ ಭರವಸೆ ಪತ್ರದಲ್ಲಿ ತಿಳಿಸಲಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...