ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಗುರುವಾರ ಬೆಳಗ್ಗೆ ರೈಲು ಸಂಚಾರದಲ್ಲಿ ವ್ಯತ್ಯಯ : ಪ್ರಯಾಣಿಕರ ಪರದಾಟ

24

ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಅಡಚಣೆ ದೀಪಾಂಜಲಿನಗರ ನಿಲ್ದಾಣದಲ್ಲಿ 10 ನಿಮಿಷಕ್ಕೂ ಹೆಚ್ಚು ಕಾಲ ನಿಂತ ರೈಲು ವಿಜಯನಗರದಲ್ಲೂ ಮತ್ತೊಂದು ರೈಲು ಸ್ಥಗಿತ, ಪ್ರಯಾಣಿಕರ ಪರದಾಟ ಸಂಚಾರ ಸುಗಮಗೊಳ್ಳಲು ಮತ್ತಷ್ಟು ಸಮಯ ಬೇಕೆಂದು ಮೆಟ್ರೋ ಸಿಬ್ಬಂದಿ ಮಾಹಿತಿ ಬೆಳಗ್ಗಿನ ಅವಧಿಯಲ್ಲಿ ಕಚೇರಿಗೆ ತೆರಳುವವರಿಗೆ ತೀವ್ರ ತೊಂದರೆ ನಮ್ಮ ಮೆಟ್ರೋ ನೇರಳ ಮಾರ್ಗದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ನಿಲ್ದಾಣಗಳಲ್ಲಿ ಜನಜಂಗುಳಿ ಉಂಟಾಗಿದೆ.

ಅಕ್ಟೋಬರ್ 30: ನಗರದ ಜೀವನಾಡಿ ಎನಿಸಿರುವ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ಗುರುವಾರ ಬೆಳಗ್ಗೆ ವ್ಯತ್ಯಯ ಉಂಟಾಗಿದ್ದು, ನೇರಳೆ ಮಾರ್ಗದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಬೆಳಗ್ಗೆ ಕಚೇರಿ ಹಾಗೂ ಇತರೆ ಕೆಲಸಗಳಿಗೆ ತೆರಳುವ ಅವಸರದಲ್ಲಿದ್ದ ಜನರಿಗೆ ಮೆಟ್ರೋ ಸೇವೆ ಕೈಕೊಟ್ಟಿದೆ.

ಸುಮಾರು 9 ಗಂಟೆ ಹೊತ್ತಿಗೆ ದೀಪಾಂಜಲಿನಗರ ಮೆಟ್ರೋ ನಿಲ್ದಾಣದಲ್ಲಿ ರೈಲೊಂದು ಸುಮಾರು 10 ನಿಮಿಷಗಳ ಕಾಲ ನಿಂತಿದೆ. ಇದರಿಂದಾಗಿ ಹಿಂದಿನ ಹಾಗೂ ಮುಂದಿನ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿ, ಪ್ಲಾಟ್‌ಫಾರ್ಮ್‌ಗಳು ಜನರಿಂದ ತುಂಬಿ ತುಳುಕಿದವು.

ಇದಾದ ಕೆಲವೇ ನಿಮಿಷಗಳಲ್ಲಿ, ಅಂದರೆ ಒಂಬತ್ತು ಕಾಲು ಸುಮಾರಿಗೆ ವಿಜಯನಗರ ನಿಲ್ದಾಣದಲ್ಲೂ ಮತ್ತೊಂದು ರೈಲು ತಾಂತ್ರಿಕ ಕಾರಣಗಳಿಂದ ನಿಂತಿದೆ. ಸಂಚಾರವನ್ನು ಸುಗಮಗೊಳಿಸಲು ಇನ್ನೂ 10 ನಿಮಿಷಗಳು ಬೇಕಾಗಬಹುದು ಎಂದು ಮೆಟ್ರೋ ಸಿಬ್ಬಂದಿ ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾರೆ. ಆದರೆ, ಅರ್ಧ ಗಂಟೆಯಾದರೂ ಸಮಸ್ಯೆ ಬಗೆಹರಿದಿಲ್ಲ.

ಬೆಳಗ್ಗಿನ ಪೀಕ್ ಅವರ್‌ನಲ್ಲಿ ಉಂಟಾದ ಈ ಸಮಸ್ಯೆಯಿಂದಾಗಿ ಸಾವಿರಾರು ಪ್ರಯಾಣಿಕರು ನಿಲ್ದಾಣಗಳಲ್ಲೇ ಕಾದು ನಿಲ್ಲುವಂತಾಯಿತು. ಸಮಸ್ಯೆಗೆ ನಿಜವಾದ ಕಾರಣ ಏನು? ಸಮಸ್ಯೆ ಯಾವಾಗ ಬಗೆಹರಿಯಲಿದೆ ಎನ್ನುವುದರ ಬಗ್ಗೆ ಬಿಎಂಆರ್‌ಸಿಎಲ್‌ ಇದುವರೆಗೆ ಯಾವುದೇ ಅಪ್ಡೇಟ್‌ ನೀಡಿಲ್ಲ.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...