ಮಹಾರಾಷ್ಟ್ರ ಸರ್ಕಾರವು ಅ.31 ರಿಂದ ನ. 7 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಾಡು ‘ವಂದೇ ಮಾತರಂ’ ಅನ್ನು ಸಂಪೂರ್ಣವಾಗಿ ಹಾಡುವಂತೆ ನಿರ್ದೇಶಿಸಿದೆ.

30

  ಮುಂಬೈ:  ಎಲ್ಲಾ ಶಾಲೆಗಳಿಗೆ ‘ವಂದೇ ಮಾತರಂ’ ಪೂರ್ಣ ಹಾಡಲು ಸೂಚನೆ ಈ ಕ್ರಮವನ್ನು ಸಮಾಜವಾದಿ ಪಕ್ಷ(ಎಸ್‌ಪಿ)ದ ನಾಯಕ ಅಬು ಅಜ್ಮಿ ವಿರೋಧಿಸಿದ್ದು, ಅವರು ಪ್ರತಿಯೊಬ್ಬರ ಧಾರ್ಮಿಕ ನಂಬಿಕೆ ವಿಭಿನ್ನವಾಗಿರುವುದರಿಂದ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬಾರದು ಎಂದು ಹೇಳಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಅಕ್ಟೋಬರ್ 27 ರಂದು ಈ ಕುರಿತು ಸುತ್ತೋಲೆ ಹೊರಡಿಸಿದೆ. ಈ ಕ್ರಮವನ್ನು ಸಮಾಜವಾದಿ ಪಕ್ಷ(ಎಸ್‌ಪಿ)ದ ನಾಯಕ ಅಬು ಅಜ್ಮಿ ವಿರೋಧಿಸಿದ್ದು, ಅವರು ಪ್ರತಿಯೊಬ್ಬರ ಧಾರ್ಮಿಕ ನಂಬಿಕೆ ವಿಭಿನ್ನವಾಗಿರುವುದರಿಂದ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬಾರದು ಎಂದು ಹೇಳಿದ್ದಾರೆ. ಆದರೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಇದಕ್ಕೆ ಕಟುವಾಗಿ ಪ್ರತಿಕ್ರಿಯೆಸಿದ್ದು, ಎಸ್ ಪಿ ಶಾಸಕರು ರಾಷ್ಟ್ರೀಯ ಹಾಡನ್ನು ಗೌರವಿಸದಿದ್ದರೆ ಪಾಕಿಸ್ತಾನಕ್ಕೆ ಹೋಗಬೇಕು ಎಂದು ತಿರುಗೇಟು ನೀಡಿದೆ.

ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಬರೆದ ವಂದೇ ಮಾತರಂ ಹಾಡು ಅಕ್ಟೋಬರ್ 31ಕ್ಕೆ 150 ವರ್ಷ ಪೂರೈಸುತ್ತಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯಾದ್ಯಂತದ ಶಾಲೆಗಳಲ್ಲಿ, ಈ ರಾಷ್ಟ್ರೀಯ ಹಾಡಿನ ಮೊದಲ ಎರಡು ಚರಣಗಳನ್ನು ಹಾಡಲಾಗುತ್ತಿದೆ. ಆದಾಗ್ಯೂ, ಅದರ 150 ವರ್ಷಗಳ ಸಂದರ್ಭದಲ್ಲಿ, ಅಕ್ಟೋಬರ್ 31 ರಿಂದ ನವೆಂಬರ್ 7 ರವರೆಗೆ ಎಲ್ಲಾ ಮಾಧ್ಯಮ ಶಾಲೆಗಳಲ್ಲಿ ವಂದೇ ಮಾತರಂ ಅನ್ನು ಪೂರ್ಣವಾಗಿ ಹಾಡಬೇಕು ಎಂದು ಸೂಚಿಸಲಾಗಿದೆ.

ಶಾಲೆಗಳು ಹಾಡಿನ ಇತಿಹಾಸವನ್ನು ತಿಳಿಸುವ ಪ್ರದರ್ಶನವನ್ನು ಸಹ ಏರ್ಪಡಿಸಬೇಕು ಎಂದು ಸರ್ಕಾರ ಹೇಳಿದೆ. ಆದರೆ ಪ್ರತಿಯೊಬ್ಬರ ಧಾರ್ಮಿಕ ನಂಬಿಕೆಗಳು ವಿಭಿನ್ನವಾಗಿರುವುದರಿಂದ ವಂದೇ ಮಾತರಂ ಅನ್ನು ಕಡ್ಡಾಯಗೊಳಿಸುವುದು ಸರಿಯಲ್ಲ ಎಂದು ಎಸ್‌ಪಿ ಶಾಸಕ ಅಜ್ಮಿ ಹೇಳಿದ್ದಾರೆ”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...