ಮಹಾರಾಷ್ಟ್ರ ಸರ್ಕಾರವು ಅ.31 ರಿಂದ ನ. 7 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಹಾಡು ‘ವಂದೇ ಮಾತರಂ’ ಅನ್ನು ಸಂಪೂರ್ಣವಾಗಿ ಹಾಡುವಂತೆ ನಿರ್ದೇಶಿಸಿದೆ.

47

  ಮುಂಬೈ:  ಎಲ್ಲಾ ಶಾಲೆಗಳಿಗೆ ‘ವಂದೇ ಮಾತರಂ’ ಪೂರ್ಣ ಹಾಡಲು ಸೂಚನೆ ಈ ಕ್ರಮವನ್ನು ಸಮಾಜವಾದಿ ಪಕ್ಷ(ಎಸ್‌ಪಿ)ದ ನಾಯಕ ಅಬು ಅಜ್ಮಿ ವಿರೋಧಿಸಿದ್ದು, ಅವರು ಪ್ರತಿಯೊಬ್ಬರ ಧಾರ್ಮಿಕ ನಂಬಿಕೆ ವಿಭಿನ್ನವಾಗಿರುವುದರಿಂದ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬಾರದು ಎಂದು ಹೇಳಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಅಕ್ಟೋಬರ್ 27 ರಂದು ಈ ಕುರಿತು ಸುತ್ತೋಲೆ ಹೊರಡಿಸಿದೆ. ಈ ಕ್ರಮವನ್ನು ಸಮಾಜವಾದಿ ಪಕ್ಷ(ಎಸ್‌ಪಿ)ದ ನಾಯಕ ಅಬು ಅಜ್ಮಿ ವಿರೋಧಿಸಿದ್ದು, ಅವರು ಪ್ರತಿಯೊಬ್ಬರ ಧಾರ್ಮಿಕ ನಂಬಿಕೆ ವಿಭಿನ್ನವಾಗಿರುವುದರಿಂದ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬಾರದು ಎಂದು ಹೇಳಿದ್ದಾರೆ. ಆದರೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಇದಕ್ಕೆ ಕಟುವಾಗಿ ಪ್ರತಿಕ್ರಿಯೆಸಿದ್ದು, ಎಸ್ ಪಿ ಶಾಸಕರು ರಾಷ್ಟ್ರೀಯ ಹಾಡನ್ನು ಗೌರವಿಸದಿದ್ದರೆ ಪಾಕಿಸ್ತಾನಕ್ಕೆ ಹೋಗಬೇಕು ಎಂದು ತಿರುಗೇಟು ನೀಡಿದೆ.

ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಬರೆದ ವಂದೇ ಮಾತರಂ ಹಾಡು ಅಕ್ಟೋಬರ್ 31ಕ್ಕೆ 150 ವರ್ಷ ಪೂರೈಸುತ್ತಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯಾದ್ಯಂತದ ಶಾಲೆಗಳಲ್ಲಿ, ಈ ರಾಷ್ಟ್ರೀಯ ಹಾಡಿನ ಮೊದಲ ಎರಡು ಚರಣಗಳನ್ನು ಹಾಡಲಾಗುತ್ತಿದೆ. ಆದಾಗ್ಯೂ, ಅದರ 150 ವರ್ಷಗಳ ಸಂದರ್ಭದಲ್ಲಿ, ಅಕ್ಟೋಬರ್ 31 ರಿಂದ ನವೆಂಬರ್ 7 ರವರೆಗೆ ಎಲ್ಲಾ ಮಾಧ್ಯಮ ಶಾಲೆಗಳಲ್ಲಿ ವಂದೇ ಮಾತರಂ ಅನ್ನು ಪೂರ್ಣವಾಗಿ ಹಾಡಬೇಕು ಎಂದು ಸೂಚಿಸಲಾಗಿದೆ.

ಶಾಲೆಗಳು ಹಾಡಿನ ಇತಿಹಾಸವನ್ನು ತಿಳಿಸುವ ಪ್ರದರ್ಶನವನ್ನು ಸಹ ಏರ್ಪಡಿಸಬೇಕು ಎಂದು ಸರ್ಕಾರ ಹೇಳಿದೆ. ಆದರೆ ಪ್ರತಿಯೊಬ್ಬರ ಧಾರ್ಮಿಕ ನಂಬಿಕೆಗಳು ವಿಭಿನ್ನವಾಗಿರುವುದರಿಂದ ವಂದೇ ಮಾತರಂ ಅನ್ನು ಕಡ್ಡಾಯಗೊಳಿಸುವುದು ಸರಿಯಲ್ಲ ಎಂದು ಎಸ್‌ಪಿ ಶಾಸಕ ಅಜ್ಮಿ ಹೇಳಿದ್ದಾರೆ”

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...