ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟು ಗಳಿಗೆ ಸರ್ಕಾರಿ ಹುದ್ದೆಗಳಲ್ಲಿ ನೇರ ನೇಮಕಾತಿ

28

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಘೋಷಣೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಹೇಳಿದರು.

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ನೀಡಲಾಗುತ್ತದೆ. ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದ್ದೇವೆ.

ರಾಷ್ಟ್ರಮಟ್ಟದಲ್ಲಿ ರಾಜ್ಯಕ್ಕೆ ಪ್ರಶಸ್ತಿ ತರುವವರಿಗೆ ರಾಜ್ಯ ಸರ್ಕಾರವು ಚಿನ್ನಕ್ಕೆ 7 ಲಕ್ಷ, ಬೆಳ್ಳಿಗೆ 5 ಲಕ್ಷ ಮತ್ತು ಕಂಚಿನ ಪದಕ ವಿಜೇತರಿಗೆ 2 ಲಕ್ಷ ರೂ.ಗಳನ್ನು ನೀಡುತ್ತೇವೆ. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿ ಇರಬೇಕು ಎನ್ನುವುದು ನಮ್ಮ ಬಯಕೆ. ಇದಕ್ಕೆ ಬೇಕಾದ ಎಲ್ಲ ನೆರವನ್ನು ನಾವು ನೀಡಲಿದ್ದೇವೆಂದು ತಿಳಿಸಿದರು.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...