ಗ್ರೇಟರ್‌ ಮೈಸೂರು ಪ್ರಸ್ತಾವದ ಬೆನ್ನಲ್ಲೇ ಮೈಸೂರು ಮಹಾನಗರ ಪಾಲಿಕೆ ಮತ್ತೆ ಇ-ಖಾತೆ ಅಭಿಯಾನ ಆರಂಭ

20

ಮೈಸೂರು:ಮೈಸೂರು ಮಹಾ ನಗರ ಪಾಲಿಕೆ ಈಗಾಗಲೇ ಇ-ಖಾತೆ ನೀಡುವಲ್ಲಿ ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿದ್ದು, ಶೇ.100ರಷ್ಟು ಗುರಿಯ ಸಾಧನೆಕ್ಕಾಗಿ ಮುಂದಿನ ವಾರದಿಂದ ವಲಯವಾರು ಅಭಿಯಾನವನ್ನು ಆರಂಭಿಸಲು ಉದ್ದೇಶಿಸಿದೆ. ಸಭೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ನೇತೃತ್ವದಲ್ಲಿ ಜಾಗೃತಿ ಮೂಡಿಸುವ ಮೂಲಕ ಇ-ಖಾತೆ ಕೊಡುವ ಪ್ರಮಾಣ ಹೆಚ್ಚಿಸುವ ಪ್ರಯತ್ನಗಳು ನಡೆಯುತ್ತವೆ. ಮೈಸೂರು ನಗರದ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2,27,893 ಆಸ್ತಿಗಳನ್ನು ಹೊಂದಿದ್ದು, ಶಾಸನಾರೂಪದಲ್ಲಿ ನೀಡುತ್ತಿರುವ ಇ-ಖಾತೆಗಳ ಸಂಖ್ಯೆಯನ್ನು ಹೆಚ್ಚಿಸಲು ಕಾರ್ಯಾಚರಣೆ ಆರಂಭಿಸಲಾಗಿದೆ.

   ಗ್ರೇಟರ್‌ ಮೈಸೂರು ಪ್ರಸ್ತಾವನೆಯ ಬೆನ್ನ ಹಿಂದೆಯೇ ಮೈಸೂರು ಮಹಾ ನಗರ ಪಾಲಿಕೆ ಮತ್ತೆ ಇ-ಖಾತೆ ಅಭಿಯಾನವನ್ನು ಆರಂಭಿಸಿದೆ. ಈಗಾಗಲೇ ಇ-ಖಾತೆ ನೀಡುವಲ್ಲಿ ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿರುವ ಪಾಲಿಕೆಯೂ ಶೇ.100ರಷ್ಟು ಗುರಿ ಸಾಧಿಸಲು ಮುಂದಿನ ವಾರದಿಂದ ವಲಯವಾರು ಅಭಿಯಾನ ನಡೆಸಲು ನಿರ್ಧರಿಸಿದೆ.

ಪಾಲಿಕೆ ವ್ಯಾಪ್ತಿಯ ಪ್ರತಿ ವಾರ್ಡ್‌ಗಳಲ್ಲಿಯೂ ಚುನಾಯಿತ ಪ್ರತಿನಿಧಿಗಳ ನೇತೃತ್ವದಲ್ಲಿ ಜಾಗೃತಿ ಸಭೆಗಳನ್ನು ನಡೆಸಿ, ಈ ಮೂಲಕ ಶೇ.100ರಷ್ಟು ಗುರಿ ಸಾಧಿಸಲು ಕ್ರಮ ವಹಿಸಲಾಗಿದೆ ಎನ್ನುತ್ತಾರೆ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತ ಸೋಮಶೇಖರ್‌ ಜಿಗಣಿ.

ಮೈಸೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2,27,893 ಆಸ್ತಿಗಳಿದ್ದು, ಅದರಲ್ಲಿ ಅತಿ ಹೆಚ್ಚು ಎ-ಖಾತೆ ನೀಡುವ ಪಟ್ಟಿಯಲ್ಲಿದ್ದರೆ, ರೆವಿನ್ಯೂ ಬಡಾವಣೆಗಳಲ್ಲಿ ಇರುವ ಆಸ್ತಿಯೂ ಬಿ ಖಾತೆ ನೀಡುವ ಪಟ್ಟಿಯಲ್ಲಿವೆ. ಸರಕಾರದ ಆದೇಶದಂತೆ ಮೈಸೂರು ನಗರದ ಇ-ಖಾತೆ ನೀಡಲು ವಿಶೇಷ ಅಭಿಯಾನದೊಂದಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದ ಪಾಲಿಕೆ ಅಧಿಕಾರಿಗಳು, ಅತಿ ಹೆಚ್ಚು ಇ-ಖಾತೆಯನ್ನು ನೀಡುವ ಮೂಲಕ ಮೈಸೂರನ್ನು ರಾಜ್ಯದ ಮೊದಲನೇ ಸ್ಥಾನಕ್ಕೆ ತಂದಿದ್ದರು.

ಜಾತಿ ಸಮೀಕ್ಷೆಯಿಂದಾಗಿ ಇಡೀ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರಿಂದ ಅಭಿಯಾನ ನಡೆಸಲು ಸಾಧ್ಯವಾಗಿರಲಿಲ್ಲ. ಈಗ ಮತ್ತೇ ಇ-ಖಾತೆ ಸಂಬಂಧ ಅಭಿಯಾನ ನಡೆಸಲು ನಿರ್ಧರಿಸಿರುವ ಪಾಲಿಕೆ ಉಪ ಆಯುಕ್ತ ಸೋಮಶೇಖರ್‌ ಜಿಗಣಿ ಅವರು, ಮುಂದಿನ ಶುಕ್ರವಾರದಿಂದ ಪ್ರತಿ ವಲಯವಾರು ಅಭಿಯಾನ ನಡೆಸಲು ನಿರ್ಧರಿಸಿದ್ದು, ಪ್ರತಿಯೊಂದು ವಲಯಕ್ಕೂ ಸಹ ಒಬ್ಬರು ಅಧಿಕಾರಿಯನ್ನು ನಿಯೋಜಿಸಿದ್ದಾರೆ.

ಅಭಿಯಾನ ಆಯಾ ವಲಯ ಕಚೇರಿಯಲ್ಲಿಯೇ ನಡೆಯಲಿದೆ. ಇ-ಖಾತೆ ನೀಡುವ ಸಂಬಂಧ ಎಲ್ಲಅಧಿಕಾರಿಗಳು ಮತ್ತು ಸಿಬ್ಬಂದಿ ವಲಯ ಕಚೇರಿಯಲ್ಲಿಯೇ ಇದ್ದು, ಸಾರ್ವಜನಿಕರಿಂದ ಬರುವ ಇ-ಖಾತೆ ಅರ್ಜಿಗಳನ್ನು ಸ್ವೀಕರಿಸಿ, ಮೂರ್ನಾಲ್ಕು ದಿನಗಳಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...