ಬೆಂಗಳೂರು: ಕೆಎಸ್ಆರ್ ಬೆಂಗಳೂರು ಮತ್ತು ಅಶೋಕಪುರಂ (ಮೈಸೂರು) ನಡುವೆ ಮೀಸಲಾತಿ ರಹಿತ ವಿಶೇಷ ಮೆಮು ರೈಲು ಓಡಾಟ ಈ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಮಧ್ಯಾಹ್ನ 12.15ಕ್ಕೆ ಹೊರಟು, ಮೈಸೂರಿನ ಅಶೋಕಪುರಂ ನಿಲ್ದಾಣಕ್ಕೆ ಸಂಜೆ 3.40ಕ್ಕೆ ತಲುಪಲಿದೆ. ಬ್ಯಾಡರಹಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಮೈಸೂರು ಮತ್ತು ಚಾಮರಾಜಪುರಂ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ.
ವಾರಾಂತ್ಯದ ಪ್ರಯಾಣಿಕರ ದಟ್ಟಣೆ ಹಾಗೂ ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯದಲ್ಲಿ ನಡೆಯಲಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಗಳ ಹಿನ್ನೆಲೆಯಲ್ಲಿ, ನೈಋತ್ಯ ರೈಲ್ವೆ , ಕೆಎಸ್ಆರ್ ಬೆಂಗಳೂರು ಮತ್ತು ಅಶೋಕಪುರಂ (ಮೈಸೂರು) ನಡುವೆ ಮೀಸಲಾತಿ ರಹಿತ ವಿಶೇಷ ಮೆಮು ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳು ನವೆಂಬರ್ 14 ರಿಂದ ಡಿಸೆಂಬರ್ 28 ರವರೆಗೆ ಪ್ರತಿ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಸಂಚರಿಸಲಿವೆ.

ಆದರೆ, ನವೆಂಬರ್ 21, 22 ಮತ್ತು 23 ರಂದು ಈ ರೈಲುಗಳ ಸೇವೆ ಲಭ್ಯವಿರುವುದಿಲ್ಲ ಎಂದು ನೈಋತ್ಯ ರೈಲ್ವೆ ಸ್ಪಷ್ಟಪಡಿಸಿದೆ. ರೈಲಿನ ವೇಳಾಪಟ್ಟಿ ರೈಲು ಸಂಖ್ಯೆ 06213: ಈ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಮಧ್ಯಾಹ್ನ 12.15ಕ್ಕೆ ಹೊರಟು, ಮೈಸೂರಿನ ಅಶೋಕಪುರಂ ನಿಲ್ದಾಣಕ್ಕೆ ಸಂಜೆ 3.40ಕ್ಕೆ ತಲುಪಲಿದೆ. ರೈಲು ಸಂಖ್ಯೆ 06214: ಈ ರೈಲು ಅಶೋಕಪುರಂನಿಂದ ಸಂಜೆ 4.10ಕ್ಕೆ ಹೊರಟು, ಕೆಎಸ್ಆರ್ ಬೆಂಗಳೂರು ನಿಲ್ದಾಣವನ್ನು ರಾತ್ರಿ 8 ಗಂಟೆಗೆ ತಲುಪಲಿದೆ.

ರೈಲಿನ ನಿಲುಗಡೆಗಳು ಈ ವಿಶೇಷ ಮೆಮು ರೈಲುಗಳು ಕೃಷ್ಣದೇವರಾಯ , ನಾಯಂಡಹಳ್ಳಿ, ಜ್ಞಾನಭಾರತಿ , ಕೆಂಗೇರಿ, ಹೆಜ್ಜಾಲ, ಬಿಡದಿ, ಕೇತೋಹಳ್ಳಿ, ರಾಮನಗರ, ಚನ್ನಪಟ್ಟಣ, ಶೆಟ್ಟಿಹಳ್ಳಿ, ನಿಡಘಟ್ಟ , ಮದ್ದೂರು, ಹನಕೆರೆ, ಮಂಡ್ಯ, ಯಲಿಯೂರು, ಬ್ಯಾಡರಹಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಮೈಸೂರು ಮತ್ತು ಚಾಮರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ.”

Leave a comment