ತಾಲೂಕಾಡಳಿತದ ಅನುಮತಿಯಂತೆ ಹಲವು ಷರತ್ತುಗಳ ಮಧ್ಯೆ ಆರ್‌ಎಸ್‌ಎಸ್‌ ಪಥ ಸಂಚಲನ

32

ಚಿತ್ತಾಪುರ: ತಾಲೂಕಾಡಳಿತದ ಅನುಮತಿಯಂತೆ ಹಲವು ಷರತ್ತುಗಳ ಮಧ್ಯೆ ಭಾನುವಾರ ಮಧ್ಯಾಹ್ನ 3ರಿಂದ ಸಂಜೆ 5.30 ರವರೆಗೆ ಪಥ ಸಂಚಲನ ನಡೆಯಲಿದೆ ಒಂದು ಕಾರ್ಯಕ್ರಮಕ್ಕೆ ಇಷ್ಟೊಂದು ಪೊಲೀಸ್‌ ಭದ್ರತೆ ನೋಡಿ ಚಿತ್ತಾಪುರದ ಜನತೆ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಪಥಸಂಚಲನದಲ್ಲಿ ಯಾವುದೇ ಆಯುಧಗಳನ್ನು ಬಳಸಲು ಅನುಮತಿ ನೀಡಬಾರದು ಎಂದು ಯಾದಗಿರಿ ಭೀಮ್‌ ಆರ್ಮಿ ಮನವಿ ಆರ್‌ಎಸ್‌ಎಸ್‌ ಪಥ ಸಂಚಲನ 

ಕಳೆದೊಂದು ತಿಂಗಳಿಂದ ವಿವಾದ ಗೂಡಾಗಿದ್ದ ಜಿಲ್ಲಾಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರ ಚಿತ್ತಾಪುರ ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥ ಸಂಚಲನ ಭಾನುವಾರ ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ನಡೆಯಲಿದೆ. ತಾಲೂಕಾಡಳಿತದ ಅನುಮತಿಯಂತೆ ಹಲವು ಷರತ್ತುಗಳ ಮಧ್ಯೆ ಭಾನುವಾರ ಮಧ್ಯಾಹ್ನ 3ರಿಂದ ಸಂಜೆ 5.30 ರವರೆಗೆ ಪಥ ಸಂಚಲನ ನಡೆಯಲಿದ್ದು, ನಂತರ ಬೌದ್ಧಿಕ ಕಾರ್ಯಕ್ರಮ ಸಂಘದ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣ ಜೋಶಿ ನಡೆಸಿಕೊಡಲಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಾದ್ಯಂತ 1200ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಬೀಡು ಬಿಟ್ಟಿದ್ದಾರೆ. ಒಂದು ಕಾರ್ಯಕ್ರಮಕ್ಕೆ ಇಷ್ಟೊಂದು ಪೊಲೀಸ್‌ ಭದ್ರತೆ ನೋಡಿ ಚಿತ್ತಾಪುರದ ಜನತೆ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ತಿಂಗಳ ನಂತರ ಪಥ ಸಂಚಲನ: ಸಂಘದ ಶತಾಬ್ದಿ ಮತ್ತು ವಿಜಯದಶಮಿ ಹಿನ್ನೆಲೆಯಲ್ಲಿ ಕಳೆದ ತಿಂಗಳ 19ರಂದು ಮೊದಲ ಬಾರಿಗೆ ಪಥ ಸಂಚಲನ ನಡೆಯಬೇಕಿತ್ತು. ಆದರೆ, ಹಲವು ಅಡೆ ತಡೆಗಳ ಮಧ್ಯೆ ನ.16ಕ್ಕೆ ಬಂದು ನಿಂತಿದೆ. ಕಾರ್ಯಕ್ರಮಕ್ಕೆ ಸ್ಥಳೀಯ ಪುರಸಭೆಯಿಂದ 200 ಧ್ವಜಗಳು, ಫ್ಲೆಕ್ಸ್‌, ಕಟೌಟ್‌ ಮತ್ತು ಬಂಟಿಂಗ್ಸ್‌ಗಳನ್ನು ಕಟ್ಟಲು ನ.15ರಂದು ಬೆಳಗ್ಗೆ 10 ಗಂಟೆಯಿಂದ ನ.16 ರಂದು ಸಂಜೆ 7 ಗಂಟೆವರಿಗೆ ಅನುಮತಿ ನೀಡಲಾಗಿದೆ.

ಭೀಮ್‌ ಆರ್ಮಿ ಮನವಿ: ಚಿತ್ತಾಪುರದಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ದೊಣ್ಣೆ(ಲಾಠಿ), ಕೋಲು ಮುಂತಾದ ಆಯುಧ ಬಳಸಿ ಸಾರ್ವಜನಿಕ ಮೆರವಣಿಗೆ ಮಾಡುವುದು ಬಿಎನ್‌ಎಸ್‌ಎಸ್‌ 163 ಪ್ರಕಾರ ಕಾನೂನು ಬಾಹಿರವಾಗಿದ್ದು, ಜನರಲ್ಲಿ ಭಯ ಹುಟ್ಟಿಸುವುದರ ಜತೆಗೆ ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುತ್ತದೆ.

ಆದ್ದರಿಂದ ಪಥಸಂಚಲನದಲ್ಲಿ ಯಾವುದೇ ಆಯುಧಗಳನ್ನು ಬಳಸಲು ಅನುಮತಿ ನೀಡಬಾರದು ಎಂದು ಯಾದಗಿರಿ ಭೀಮ್‌ ಆರ್ಮಿ ಜಿಲ್ಲಾಧ್ಯಕ್ಷ ಪ್ರಭು ಎಂ.ಬುಕ್ಕಲ್‌ ಡಿವೈಎಸ್ಪಿ ಮತ್ತು ಸಿಪಿಐ ಅವರಿಗೆ ಮನವಿ ಸಲ್ಲಿಸಿದ್ದಾರೆ.’ ಚಿತ್ತಾಪುರ ಪಟ್ಟಣದಲ್ಲಿ ಭಾನುವಾರದ ಸಂಘದ ಪಥಸಂಚಲನಕ್ಕೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ತಹಸೀಲ್ದಾರ್ ಕಚೇರಿಯಿಂದ ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ ಮಾರ್ಗದರ್ಶನದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಭುವನೇಶ್ವರಿ ವೃತ್ತ, ಜನತಾ ಚೌಕ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ನಂತರ ತಹಸೀಲ್ದಾರ್ ಕಚೇರಿಗೆ ಮರಳಿದರು. ಈ ಪಥಸಂಚಲನಕ್ಕೆ ರಾಜ್ಯದಾದ್ಯಂತ ಗಮನ ಸೆಳೆದಿದ್ದು, ಭದ್ರತೆಗೆ ವಿಶೇಷ ಸಿದ್ಧತೆ ಮಾಡಲಾಗಿದೆ.

ಕಲ್ಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 1 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, 5 ಡಿವೈಎಸ್ಪಿ, 18 ಸಿಪಿಐ, 51 ಪಿಎಸ್ಐ, 110 ಎಎಸ್ಐ, 501 ಕಾನ್ ಸ್ಟೇಬಲ್, 250 ಹೋಮ್ ಗಾರ್ಡ್, 8 ಕೆಎಸ್ಆರ್ಪಿ ತುಕಡಿ, 6 ಡಿಆರ್ ತುಕಡಿ ಮತ್ತು ಇತರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪಥಸಂಚಲನ ಸಾಗುವ ಮಾರ್ಗದಲ್ಲಿ ಪ್ರತಿ ಹೆಜ್ಜೆಯಲ್ಲೂ ಪೊಲೀಸರ ಕಣ್ಗಾವಲು ಇರಲಿದೆ. ಅಲ್ಲದೆ, ಪುರಸಭೆಯಿಂದ 12 ಮತ್ತು ಪೊಲೀಸ್ ಇಲಾಖೆಯಿಂದ 44, ಒಟ್ಟು 56 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪಥಸಂಚಲನ ಮಾರ್ಗದಲ್ಲಿ 10 ಡ್ರೋನ್ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿದೆ ಎಂದು ಎಸ್ಪಿ ಅಡ್ಡೂರು ಶ್ರೀನಿವಾಸಲು ಮಾಹಿತಿ ನೀಡಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...