ಇಸ್ರೋ, ಸಿಪಿಸಿಆರ್‌ಐ ಅಡಕೆಗೆ ಹಳದಿ ರೋಗ ಸಂಬಂಧ ಡ್ರೋನ್‌ ಸಮೀಕ್ಷೆ ಆರಂಭ

42

ಸುಳ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದೆ ಹಳದಿ ರೋಗ, ಅಡಕೆ ಬೆಳೆಗಾರರು ಕಂಗಾಲು ರೋಗದ ಲಕ್ಷಣ, ಪ್ರಸರಣ ಹಾಗೂ ವ್ಯಾಪ್ತಿ ಬಗ್ಗೆ ವೈಜ್ಞಾನಿಕ ಅಧ್ಯಯನ ಆರಂಭ ಡೋನ್ ಆಧರಿತವೈಮಾನಿಕ ಸಮೀಕ್ಷೆ ಆರಂಭಿಸಿವೆ ಇಸ್ರೋ, ಸಿಪಿಸಿಆರ್‌ಐ ಹಳದಿ ರೋಗ ಸಂಬಂಧ ಡ್ರೋನ್‌ ಸಮೀಕ್ಷೆ ಆರಂಭವಾಗಿದೆ. ಸುಳ್ಯ (ದಕ್ಷಿಣ ಕನ್ನಡ): ತಾಲೂಕಿನಾದ್ಯಂತ ಅಡಕೆಗೆ ಹಳದಿ ರೋಗ ವ್ಯಾಪಕವಾಗಿ ಹರಡುತ್ತಿದೆ.

ಈ ರೋಗದ ಲಕ್ಷಣ, ಪ್ರಸರಣ ಹಾಗೂ ವ್ಯಾಪ್ತಿ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ಮಾಡುವುದಕ್ಕೆ ಇಸ್ರೋ, ಸಿಪಿಸಿಆರ್‌ಐ ಡೋನ್ ಆಧರಿತ ವೈಮಾನಿಕ ಸಮೀಕ್ಷೆ ಆರಂಭಿಸಿವೆ. ತಾಲೂಕಿನ ಆರಂತೋಡು ಮತ್ತು ಪೆರಾಜೆ ಗ್ರಾಮದ ಎರಡು ಪ್ರದೇಶಗಳ ಒಟ್ಟು ಎರಡೂವರೆ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಯುತ್ತಿದೆ. ಸುಧಾರಿತ ಡೋನ್ ಮೂಲಕ ಅಡಕೆ ಮರಗಳ ಎಲೆಗಳ ಫೋಟೋ ಮತ್ತು ವಿಡಿಯೋ ಸೆರೆಹಿಡಿದು ಸೂಕ್ಷ್ಮವಾಗಿ ವಿಶ್ಲೇಷಿಸಲಾಗುತ್ತದೆ.

ಅಡಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಕೇಂದ್ರ ಸರಕಾರ ಸಮಗ್ರ ಅಧ್ಯಯನಕ್ಕೆ ವೈಜ್ಞಾನಿಕ ಸಮೀಕ್ಷೆ ಆರಂಭಿಸಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಕರ್ನಾಟಕದ ಅಡಕೆ ಬೆಳೆಯುವ ಜಿಲ್ಲೆಗಳ ಸಂಸದರು, ರಾಜ್ಯದ ಸಚಿವರು, ಅಡಕೆ ಬೆಳೆಗಾರರ ಸಂಸ್ಥೆಗಳನ್ನು ಒಳಗೊಂಡ ಜಂಟಿ ನಿಯೋಗವು ದಿಲ್ಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಾಣ್ ಅವರನ್ನು ಭೇಟಿ ಮಾಡಿ, ಅಡಕೆ ಹಳದಿ ಎಲೆ ಶಿಲೀಂದ್ರ ಮತ್ತು ಇತರ ರೋಗಗಳ ಬಗ್ಗೆ ದೀರ್ಘಾವಧಿಯ ಅಧ್ಯಯನ ಮಾಡಲು ಮತ್ತು ಪರಿಹಾರ ಕಂಡುಹಿಡಿಯಲು ಪ್ರತಿಷ್ಠಿತ ಸಂಶೋಧನಾ ಸಂಸ್ಥೆಯಿಂದ ಸಮಗ್ರ ಅಧ್ಯಯನ ನಡೆಸಬೇಕೆಂದು ಬೇಡಿಕೆ ಮುಂದಿಟ್ಟಿತ್ತು.

‘ಕಾಸರಗೋಡಿನಲ್ಲಿರುವ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (ಸಿಪಿಸಿಆರ್‌ಐ), ಬೆಂಗಳೂರು ಮತ್ತು ಹೈದರಾಬಾದ್‌ನ ಇಸ್ರೋ ವಿಭಾಗಗಳು ಜಂಟಿಯಾಗಿ ಸರ್ವೆ ಕಾರ್ಯ ಕೈಗೆತ್ತಿಕೊಂಡಿವೆ. ಇದರಿಂದ ವೈಜ್ಞಾನಿಕ ಹಾಗೂ ನಿಖರ ಅಂಕಿಅಂಶಗಳು ದೊರೆಯಲಿದೆ,” ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಎಲೆಚುಕ್ಕಿ ರೋಗಕ್ಕೆ ಔಷಧ ಕಂಡು ಹಿಡಿಯದಿದ್ದರೆ ಕೃಷಿ ವಿವಿಗೆ ಮುತ್ತಿಗೆ ಜೋಗ್‌ ಫಾಲ್ಸ್‌: ಕಳೆದ ಹಲವಾರು ವರ್ಷಗಳಿಂದ ಮಲೆನಾಡಿನಲ್ಲಿ ಅಡಕೆಗೆ ಎಲೆ ಚುಕ್ಕಿ ರೋಗ ವ್ಯಾಪಕವಾಗಿ ಕಂಡುಬಂದಿದ್ದು, ಶೀಘ್ರ ಔಷಧ ಕಂಡು ಹಿಡಿಯದಿದ್ದರೆ ಕೃಷಿ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಮುಖಂಡ ದಿನೇಶ್‌ ಶಿರವಾಳ ಎಚ್ಚರಿಸಿದರು. ಭಾನುಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವಾರು ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ, ಎಲೆ ಚುಕ್ಕಿ ರೋಗದಿಂದ ಬಾಧಿತವಾದ ತೋಟಗಳ ವೀಕ್ಷಣೆ ಮಾಡಿ ಅವರು ಮಾತನಾಡಿದರು.

ಎಲೆಚುಕ್ಕಿ ರೋಗ ಸಾಂಕ್ರಾಮಿಕವಾಗಿದ್ದು, ಮರವನ್ನೇ ಆಹುತಿ ತೆಗೆದುಕೊಳ್ಳುತ್ತಿರುವುದು ತೀವ್ರ ಕಳವಳಕಾರಿ. ಈ ಬಗ್ಗೆ ಹಲವಾರು ಬಾರಿ ಕೃಷಿ ವಿಶ್ವವಿದ್ಯಾಲಯದ ತಜ್ಞರೊಂದಿಗೆ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಮಲೆನಾಡಿನ ಕೃಷಿಕರು ಎಲೆ ಚುಕ್ಕಿ ರೋಗದಿಂದ ಸಾಮೂಹಿಕವಾಗಿ ತೋಟಗಳನ್ನೇ ಕಳೆದುಕೊಳ್ಳುವ ಸ್ಥಿತಿಗೆ ಬಂದಿದ್ದಾರೆ. ತಕ್ಷಣ ಈ ರೋಗದ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಇದಕ್ಕೆ ಪರಿಣಾಮಕಾರಿ ಔಷಧ ಕಂಡುಹಿಡಿಯಬೇಕು ಎಂದು ಒತ್ತಾಯಿಸಿದರು. ”

Leave a comment

Leave a Reply

Your email address will not be published. Required fields are marked *

Related Articles

ಗ್ಯಾರೆಂಟಿ ಯೋಜನೆ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು...

ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆಲುವಿನ ನಗೆ

“ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್...

ಕೊಲ್ಲೂರು ಮೂಕಾಂಬಿಕಾ ತಾಯಿಯ ದರ್ಶನ ಪಡೆದ ಉದ್ಯಮಿ ಅನಂತ ಅಂಬಾನಿ

“ಉಡುಪಿ: ಸದ್ದು ಗದ್ದಲವಿಲ್ಲದೆ ದೇಶದ ಪ್ರತಿಷ್ಠಿತ ಉದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಂಬಾನಿ ಕುಟುಂಬದ ಅನಂತ ಅಂಬಾನಿ...

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ

“ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...