ಮುಂಗಾರು ಬೆಳೆ ನಷ್ಟದಿಂದ ಕಂಗಾಲಾಗಿದ್ದ ರೈತರಿಗೆ ಹಿಂಗಾರು ಬೆಳೆ ಆಶಾಕಿರಣ

24

ಗಜೇಂದ್ರಗಡ ತಾಲೂಕಿನ ಕಡಲೆ ಬೆಳೆ ಉತ್ತಮವಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಕೀಟ ಬಾಧೆ ತಡೆಯಲು ರಾಸಾಯನಿಕ ಸಿಂಪಡಣೆ ಮಾಡಲಾಗಿದೆ. ಉತ್ತಮ ಮಳೆ ಮತ್ತು ಹವಾಮಾನದಿಂದ ಬೆಳೆ ಚೆನ್ನಾಗಿ ಬೆಳೆದಿದೆ. ಈ ಕಡಲೆಗೆ ವಿದೇಶದಲ್ಲೂ ಬೇಡಿಕೆ ಇದೆ.

ಮುಂಗಾರು ಬೆಳೆ ಲಭಿಸದೇ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದ ಅನ್ನದಾತನಿಗೆ ಹಿಂಗಾರು ಬೆಳೆ ನಿರೀಕ್ಷೆ ಕೈಗೂಡಿದೆ ಮಳೆಯಾಶ್ರಿತ ಕಪ್ಪು ಮಣ್ಣಿನ ಯರಿಭೂಮಿಯಲ್ಲಿಬೆಳೆದ ಅಣ್ಣಿಗೇರಿ ತಳಿಯ ಕಡಲೆ ಕಾಳುಗಳಿಗೆ ವಿದೇಶದಲ್ಲೂ ಭಾರಿ ಬೇಡಿಕೆ ಇದೆ ಗದಗ ಕೃಷಿ ಮಾರುಕಟ್ಟೆ ವಹಿವಾಟು ಮೇಲೆ ಭಾಗಶಃ ಅವಲಂಬಿತವಾಗಿರುವ ಈ ಕಡಲೆ ವಿದೇಶಕ್ಕೂ ರಫ್ತು ಆಗುತ್ತಿದೆ.

ಗಜೇಂದ್ರಗಡ: ಹಿಂಗಾರು ಹಂಗಾಮಿನ ಹೆಸರು ಬೆಳೆ ಧಾರಾಕಾರ ಮಳೆಯಿಂದ ಕೈಗೆ ತುತ್ತು ಬಾಯಿಗೆ ಬರದಂತಾಗಿದ್ದು, ಹಿಂಗಾರು ಹಂಗಾಮಿನ ಪ್ರಮುಖ ವಾಣಿಜ್ಯ ಬೆಳೆ ಕಡಲೆ, ಜೋಳದತ್ತ ಅನ್ನದಾತರ ಚಿತ್ತ ಹರಿದಿದೆ. ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದ್ದರಿಂದ ಮುಂಗಾರಿನ ಹೆಸರು, ಉಳ್ಳಾಗಡ್ಡಿ ಬೆಳೆ ರೈತರನ್ನು ನಷ್ಟಕ್ಕೆ ದೂಡಿದೆ.

ಹೀಗಾಗಿ, ಹಿಂಗಾರು ಬೆಳೆ ಮೇಲೆ ನಿರೀಕ್ಷೆ ಇಟ್ಟು ಕೊಂಡಿದ್ದಾರೆ. ತಿಂಗಳ ಹಿಂದೆ ಬಿತ್ತನೆ ಮಾಡಿರುವ ಜೋಳ, ಕಡಲೆ, ಶೇಂಗಾ, ಸೂರ್ಯಕಾಂತಿಗೆ ಕೀಟ ಬಾಧೆ ತಪ್ಪಿಸಲು ರೈತರು ರಾಸಾಯನಿಕ ಸಿಂಪರಣೆ ಕಡೆ ದೃಷ್ಟಿ ಹರಿಸಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....

ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್, ನಗದು ಜಪ್ತಿ ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು...

ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇದೆ ವಾಯು ಮಾಲಿನ್ಯ ಸಮಸ್ಯೆ ಅಂತರ್ಜಾಲ ಹಾಗೂ ಪತ್ರಿಕಾ...