ಹೆಮರೈಜಿಕ್ ಸೆಪ್ಟೀಸಿಮಿಯಾ– ಹೆಚ್‌.ಎಸ್‌ : ಕೃಷ್ಣಮೃಗಗಳ ಸಾವಿಗೆ ಕಾರಣ ಪ್ರಯೋಗಾಲಯ ವರದಿ

42

ಬೆಳಗಾವಿ: ಬೆಳಗಾವಿಯ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗ (ಹೆಮರೈಜಿಕ್ ಸೆಪ್ಟೀಸಿಮಿಯಾ– ಹೆಚ್‌.ಎಸ್‌) ಕಾರಣ ಎಂದು ಪ್ರಯೋಗಾಲಯದ ವರದಿ ಖಚಿತಪಡಿಸಿದೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್‌ ಮತ್ತು ಹಿರಿಯ ವನ್ಯಜೀವಿ ಪಶುವೈದ್ಯ ಡಾ. ಪ್ರಯಾಗ್ ನೇತೃತ್ವದ ಉನ್ನತ ಮಟ್ಟದ ತಜ್ಞರ ಸಮಿತಿಯು ಮಂಗಳವಾರ ಮೃಗಾಲಯವನ್ನು ಪರಿಶೀಲಿಸಿತು.

ಆವರಣದ ಪರಿಸ್ಥಿತಿಗಳು, ಸಾವಿನ ಮಾದರಿಗಳು ಮತ್ತು ಪ್ರಯೋಗಾಲಯ ಸೂಚಕಗಳನ್ನು ಪರಿಶೀಲಿಸಿದ ನಂತರ ಸೋಂಕು ಕುರಿತು ದೃಢೀಕರಣವನ್ನು ನೀಡಿತು. ಇದೇ ವೇಳೆ ಕಟ್ಟುನಿಟ್ಟಾದ ಜೈವಿಕ ಸುರಕ್ಷತಾ ನಿಯಂತ್ರಣಗಳು, ನೈರ್ಮಲ್ಯ ಅಭಿಯಾನ, ಉಳಿದ ಪ್ರಾಣಿಗಳ ಮೇಲೆ ಕಣ್ಗಾವಲು ಇಡುವಂತೆ ಮೃಗಾಲಯದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಈ ನಡುವೆ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಮೃಗಾಲಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಳಗಾವಿ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು: ಸಂಖ್ಯೆ 31ಕ್ಕೆ ಏರಿಕೆ; ಆತಂಕದ ವಾತಾವರಣ!

ಕೃಷ್ಣ ಮೃಗಗಳ ಮಾರಣಹೋಮ ಸಹಿಸಲು ಸಾಧ್ಯವಿಲ್ಲ. ಅಧಿಕಾರಿಗಳು ಸೋಂಕು ತಡೆಗಟ್ಟುವ ಕಾರ್ಯವಿಧಾನಗಳನ್ನು ಬಿಗಿಗೊಳಿಸಬೇಕು. ಎಲ್ಲಾ ಪ್ರಾಣಿಗಳಿಗೆ – ವಿಶೇಷವಾಗಿ ಅಳಿವಿನಂಚಿನಲ್ಲಿರುವ ಮತ್ತು ಹೆಚ್ಚಿನ ಒತ್ತಡದ ಪ್ರಭೇದಗಳಿಗೆ 24/7 ಪಶುವೈದ್ಯಕೀಯ ಮೇಲ್ವಿಚಾರಣೆಯನ್ನು ಖಚಿತಪಡಿಸಿಕೊಳ್ಳಬೇಕು.

ಹುಲಿಗಳು, ಸಿಂಹಗಳು, ಚಿರತೆಗಳು, ಜಿಂಕೆ ಪ್ರಭೇದಗಳು ಮತ್ತು ಪಕ್ಷಿಗಳ ಮೇಲೆ ತೀವ್ರ ಕಣ್ಗಾವಲಿಡಬೇಕು ಎಂದು ಮೃಗಾಲಯ ಆಡಳಿತಕ್ಕೆ ನಿರ್ದೇಶನ ನೀಡಿದರು. ಈ ವೇಳೆ ಸೋಂಕು ಪ್ರಸ್ತುತ ಕೃಷ್ಣಮೃಗಗಳಿಗೆ ಸೀಮಿತವಾಗಿದೆ ಎಂದು ಮೃಗಾಲಯದ ಅಧಿಕಾರಿಗಳು ಸಚಿವರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಾರಕಿಹೊಳಿಯವರು, ಸೋಂಕು ಮರುಕಳಿಸುವಿಕೆಯನ್ನು ತಡೆಗಟ್ಟಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಕರಪತ್ರ ಹಂಚಿಕೆ ಆರೋಪ ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ...