ಬೆಂಗಳೂರು:ಕೇಂದ್ರ ಸರಕಾರದ ಸೂಚನೆಯ ಮೇರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ಪಡಿತರ ವಿತರಣೆಯನ್ನು ತಡೆಯಲು ಬರಲಿದೆ ಆಪ್ ‘ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ಸ್’ ಮೊಬೈಲ್ ಅಪ್ಲಿಕೇಶನ್ ಅನ್ನು ಪರಿಚಯಿಸಲಿದೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಯೋಮೆಟ್ರಿಕ್ ಖಾತರಿಗಾಗಿ ತೂಕದ ಯಂತ್ರವನ್ನು ಸಂಯೋಜಿಸುತ್ತದೆ ಈ ಹೊಸ ಆ್ಯಪ್ ಇದರ ಮೂಲಕ ಗ್ರಾಹಕರು ಪಡೆದ ಪಡಿತರ, ತೂಕದ ವ್ಯತ್ಯಾಸವನ್ನು ತಕ್ಷಣವೇ ಗಮನಿಸಲು ಅನುಕೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿನ ಸೋರಿಕೆಯನ್ನು ತಡೆಯಲು ಹೊಸ ಆಪ್ ಬರಲಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿನ ಸೋರಿಕೆಯನ್ನು ತಡೆಯಲು ‘ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ಸ್’ ಎಂಬ ಮೊಬೈಲ್ ಅಪ್ಲಿಕೇಶನ್ ವ್ಯವಸ್ಥೆಯನ್ನು ಪರಿಚಯಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಕೇಂದ್ರ ಸರಕಾರದ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಹಕರಿಗೆ ಪಡಿತರ ವಿತರಿಸುವಾಗ ತೂಕದಲ್ಲಿ ಸಾಕಷ್ಟು ಮೋಸವಾಗುತ್ತಿತ್ತು. ಇದನ್ನು ತಡೆಯಲು ಕೇಂದ್ರ ಸರಕಾರದ ಸೂಚನೆ ಮೇರೆಗೆ ತೂಕದ ಯಂತ್ರವನ್ನು ಬಯೋಮೆಟ್ರಿಕ್ಗೆ ಸಂಯೋಜಿಸಲು ನಿರ್ಧರಿಸಲಾಗಿದೆ. ಇದರಿಂದ ತೂಕದಲ್ಲಿ ವ್ಯತ್ಯಾಸವಾದರೆ ಗ್ರಾಹಕರಿಗೆ ಗೊತ್ತಾಗಲಿದೆ.

ಮೊಬೈಲ್ ಅಪ್ಲಿಕೇಶನ್, ಸರಕಾರದ ಕೇಂದ್ರೀಕೃತ ದತ್ತಾಂಶದೊಂದಿಗೆ ಸಂಪರ್ಕ ಹೊಂದಿರುತ್ತದೆ. ಈ ಕೇಂದ್ರೀಕೃತ ವ್ಯವಸ್ಥೆಯಿಂದ ಫಲಾನುಭವಿಗಳು ರಾಜ್ಯದ ಯಾವುದೇ ಪ್ರದೇಶದಲ್ಲಿ ಪಡಿತರ ಪಡೆಯುವುದನ್ನು ಖಚಿತಪಡಿಸುತ್ತದೆ. ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸದ ಅಥವಾ ಸೂಕ್ತ ಸೇವೆ ಒದಗಿಸದ ನ್ಯಾಯಬೆಲೆ ಅಂಗಡಿ ಮಾಲೀಕರ ಮೇಲೆ ನಿಯಂತ್ರಣ ಸಾಧಿಸಲು ನಿರ್ಧರಿಸಲಾಗಿದೆ. ಇಂತಹ ತಂತ್ರಜ್ಞಾನ ಆಧಾರಿತ ಕ್ರಮಗಳಿಂದಾಗಿ ಇತರ ರಾಜ್ಯಗಳಲ್ಲಿ ಫಲಾನುಭವಿಗಳ ಸಂಖ್ಯೆ ಹೆಚ್ಚಿರುವುದು ಅಧ್ಯಯನಗಳಿಂದ ತಿಳಿದುಬಂದಿದೆ.
ಹೀಗಾಗಿ ಕರ್ನಾಟಕದಲ್ಲಿ ಅಳವಡಿಸಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ನ್ಯಾಯಬೆಲೆ ಅಂಗಡಿ ಮೂಲಕ ಉಚಿತವಾಗಿ ಅಕ್ಕಿ, ರಾಗಿ ನೀಡಲಾಗುತ್ತಿದೆ. ಸದ್ಯ ಕರ್ನಾಟಕ-ದಲ್ಲಿ20 ಸಾವಿರಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿವೆ. ಆದ್ದರಿಂದ ಎಲ್ಲಾಪಡಿತರ ಕಾರ್ಡ್ ಬಳಕೆ-ದಾರರು, ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಅನುಕೂಲವಾಗುವಂತೆ ಸರಕಾರ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಪರಿಚಯಿಸಲು ಮುಂದಾಗಿದೆ.

ಈ ಆ್ಯಪ್ ಆಧಾರಿತ ಸೇವೆ ಜಾರಿಗೆ ಬಂದರೆ, ಈ ಮೊಬೈಲ್ ಅಪ್ಲಿಕೇಶನ್ ಮತ್ತು ಸರಕಾರಿ ದತ್ತಾಂಶದೊಂದಿಗೆ ಸಂಯೋಜನೆಗೊಂಡಿರುವ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ ಯಂತ್ರವು ಯೋಜನೆಯ ಫಲಾನುಭವಿಗಳ ಆಧಾರ್ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತದೆ. ನಂತರ ಈ ಆ್ಯಪ್ ವಿತರಿಸಿದ ಆಹಾರ ಧಾನ್ಯದ ತೂಕವನ್ನು ದಾಖಲಿಸಿಕೊಂಡು ಕೇಂದ್ರದ ಸರ್ವರ್ ಜತೆ ಅಪ್ಡೇಟ್ ಮಾಡುತ್ತದೆ.
ಈ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಾಗುತ್ತಿರುವ ಅಕ್ರಮ, ವಂಚನೆಯನ್ನು ತಡೆದು ಪಾರದರ್ಶಕತೆ ಹೆಚ್ಚಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇ-ಪಾಯಿಂಟ್ ಆಫ್ ಸೇಲ್ ವ್ಯವಸ್ಥೆಯ ವಿಸ್ತರಣೆ ಇದಾಗಿದ್ದು, ಮೊಬೈಲ್ ಆ್ಯಪ್ ಮೂಲಕ ಕಾರ್ಯ ನಿರ್ವಹಿಸಲಿದೆ. ಈ ಆ್ಯಪ್ನಲ್ಲಿ ಆಧಾರ್ ಸಂಬಂಧಿಸಿದ ಬಯೋಮೆಟ್ರಿಕ್, ಸ್ಕ್ಯಾನಿಂಗ್, ಬಾರ್ಕೋಡ್ ಸ್ಕ್ಯಾನರ್ ಮತ್ತು ಜಿಪಿಎಸ್ನಂತಹ ಟ್ರ್ಯಾಕಿಂಗ್ ಸೌಲಭ್ಯಗಳಿವೆ. ಆದ್ದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ನೀಡಲಾಗುವ ಪ್ರತಿ ವಸ್ತುವನ್ನು ಆ್ಯಪ್ ಮೂಲಕ ವರದಿ ಮಾಡಲಾಗುತ್ತದೆ.
ಈ ಆ್ಯಪ್ ಹಿಂದಿನ ಉದ್ದೇಶವೇನು? ನ್ಯಾಯಬೆಲೆ ಮಳಿಗೆಗಳಲ್ಲಿನೀಡಲಾಗುವ ಆಹಾರ ಧಾನ್ಯಗಳ ಮಾರಾಟವನ್ನು ಸಂಪೂರ್ಣವಾಗಿ ಟ್ರ್ಯಾಕ್ ಮಾಡುತ್ತದೆ. ಅಕ್ರಮ, ಸ್ಟಾಕ್ ಕೊರತೆ ಅಥವಾ ಅತಿಯಾದ ಮಾರಾಟಕ್ಕೆ ಬ್ರೇಕ್ ಬೀಳಲಿದೆ. ಗ್ರಾಹಕರಿಗೆ ತಮ್ಮ ಅರ್ಹತೆ ಮತ್ತು ಉಳಿದ ಸ್ಟಾಕ್ ಬಗ್ಗೆ ನಿರಂತರ ಅಪ್ಡೇಟ್ ಸಿಗಲಿದೆ. ಇಲಾಖಾ ಅಧಿಕಾರಿಗಳು ಡ್ಯಾಶ್ಬೋರ್ಡ್ ಮೂಲಕ ರಾಜ್ಯಾದ್ಯಂತ ಡೇಟಾವನ್ನು ಸಂಗ್ರಹಿಸಿಟ್ಟುಕೊಳ್ಳಬಹುದು.”

Leave a comment