ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಪ್ರಬಲ ಭೂಕಂಪದ ಅಲೆಗಳು ಭಾರತದ ಪೂರ್ವ ಭಾಗದಲ್ಲಿಯೂ ಆತಂಕ ಸೃಷ್ಟಿ

31

ಢಾಕಾ/ಕೋಲ್ಕತ್ತಾ:   ಬಾಂಗ್ಲಾದೇಶದ ನರಸಿಂಗ್ಡಿ ಬಳಿ 10 ಕಿ.ಮೀ ಆಳದಲ್ಲಿತ್ತು ಭೂಕಂಪದ ಕೇಂದ್ರ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆ ದಾಖಲು, ಬೆಳಿಗ್ಗೆ 10:08 ಕ್ಕೆ ಸಂಭವಿಸಿದ ಕಂಪನ ಪಶ್ಚಿಮ ಬಂಗಾಳ, ಮೇಘಾಲಯ, ತ್ರಿಪುರಾ ಮತ್ತು ಮಿಜೋರಾಂನಲ್ಲೂ ಕಂಪಿಸಿದ ಭೂಮಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ ಬಾಂಗ್ಲಾದೇಶದಲ್ಲಿ ಭೂಕಂಪಕ್ಕೆ ಕುಸಿದಿರುವ ಕಟ್ಟಡಗಳು

ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ (ಎನ್‌ಸಿಎಸ್‌) ಮಾಹಿತಿಯ ಪ್ರಕಾರ, ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಕೇಂದ್ರ ಬಿಂದು ಬಾಂಗ್ಲಾದೇಶದ ನರಸಿಂಗ್ಡಿ ಬಳಿ ಪತ್ತೆಯಾಗಿದೆ. ಬೆಚ್ಚಿಬಿದ್ದ ಕೋಲ್ಕತ್ತಾ ನಿವಾಸಿಗಳು ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 10:08 ರ ಸುಮಾರಿಗೆ ಈ ಘಟನೆ ನಡೆದಿದೆ. ಭೂಕಂಪದ ಕೇಂದ್ರ ಬಿಂದು ಢಾಕಾದಿಂದ ಆಗ್ನೇಯಕ್ಕೆ 10 ಕಿ.ಮೀ ದೂರದಲ್ಲಿ ಮತ್ತು ಭೂಮಿಯ 10 ಕಿ.ಮೀ ಆಳದಲ್ಲಿ ದಾಖಲಾಗಿದೆ.

ಇದರ ತೀವ್ರತೆಗೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ಕೂಚ್ ಬೆಹಾರ್, ದಕ್ಷಿಣ ಮತ್ತು ಉತ್ತರ ದಿನಾಜ್‌ಪುರ ಜಿಲ್ಲೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಕಂಪನದ ತೀವ್ರತೆಗೆ ಮನೆಯಲ್ಲಿನ ಫ್ಯಾನುಗಳು ಮತ್ತು ಗೋಡೆಗೆ ಹಾಕಿದ್ದ ವಸ್ತುಗಳು ಅಲುಗಾಡಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಭೂಕಂಪನವಾಗುತ್ತಿದ್ದಂತೆಯೇ ಕೋಲ್ಕತ್ತಾದಲ್ಲಿ ಜನ ತಮ್ಮ ಮನೆ ಮತ್ತು ಕಚೇರಿಗಳಿಂದ ಹೊರಬಂದು ರಸ್ತೆಯಲ್ಲಿ ಜಮಾಯಿಸಿದ್ದಾರೆ. ಹಲವರು ತಮ್ಮ ಅನುಭವಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, “ಸುಮಾರು 30 ಸೆಕೆಂಡುಗಳ ಕಾಲ ಕಟ್ಟಡ ಜೋರಾಗಿ ಅಲುಗಾಡಿದ ಅನುಭವವಾಯಿತು, ಇದು ನನ್ನ ಜೀವನದಲ್ಲೇ ಅತ್ಯಂತ ಭಯಾನಕ ಅನುಭವ,” ಎಂದು ಎಕ್ಸ್ (ಟ್ವಿಟರ್) ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ.

ಅದೃಷ್ಟವಶಾತ್, ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಈಶಾನ್ಯ ರಾಜ್ಯಗಳಲ್ಲೂ ಕಂಪನ ಕೇವಲ ಪಶ್ಚಿಮ ಬಂಗಾಳ ಮಾತ್ರವಲ್ಲದೆ, ಬಾಂಗ್ಲಾದೇಶದ ಜೊತೆ ಗಡಿಯನ್ನು ಹಂಚಿಕೊಂಡಿರುವ ಈಶಾನ್ಯ ಭಾರತದ ರಾಜ್ಯಗಳಾದ ಮೇಘಾಲಯದ ಶಿಲ್ಲಾಂಗ್, ತ್ರಿಪುರಾ ಮತ್ತು ಮಿಜೋರಾಂನ ಐಜ್ವಾಲ್‌ನಲ್ಲೂ ಭೂಕಂಪದ ಅನುಭವವಾಗಿದೆ ಎಂದು ವರದಿಗಳು ತಿಳಿಸಿವೆ. ಪಾಕಿಸ್ತಾನದಲ್ಲೂ ಕಂಪಿಸಿದ ಭೂಮಿ ಇನ್ನೊಂದೆಡೆ, ಗುರುವಾರ ಮತ್ತು ಶುಕ್ರವಾರದಂದು ಪಾಕಿಸ್ತಾನದಲ್ಲೂ ಭೂಕಂಪ ಸಂಭವಿಸಿದೆ.

ಗುರುವಾರ 3.9 ತೀವ್ರತೆಯ ಭೂಕಂಪ ನೆರೆಯ ರಾಷ್ಟ್ರದಲ್ಲಿ ಸಂಭವಿಸಿದ್ದರೆ, ಶುಕ್ರವಾರ 5.2 ತೀವ್ರತೆಯ ಕಂಪನ ದಾಖಲಾಗಿದೆ ಎಂದು ಎನ್‌ಸಿಎಸ್ ತಿಳಿಸಿದೆ. ಭಾರತ ಮತ್ತು ಯುರೇಷಿಯನ್ ಟೆಕ್ಟೋನಿಕ್ ಪ್ಲೇಟ್‌ಗಳ ಸಂಗಮದ ವಲಯದಲ್ಲಿ ಈ ಪ್ರದೇಶಗಳು ಬರುವುದರಿಂದ ಇಲ್ಲಿ ಭೂಕಂಪಗಳು ಸಂಭವಿಸುವುದು ಸರ್ವೇ ಸಾಮಾನ್ಯವಾಗಿದೆ.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...