ಉಡುಪಿಯಲ್ಲಿ ಭಾರತೀಯ ನೌಕಾ ದಳದ ಹಡಗುಗಳ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ ಇಬ್ಬರ ಬಂಧನ

15

ಉಡುಪಿ : ಭಾರತೀಯ ನೌಕಾ ದಳಕ್ಕೆ ಸಂಬಂಧಿಸಿದ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನೆ ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿಯನ್ನು ಬಂಧಿಸಿದ ಉಡುಪಿ ಪೊಲೀಸರು ಭಾರತೀಯ ನೌಕಾ ಸೇನೆಯ ಹಡಗುಗಳ ನಂಬರ್‌ಗಳ ಗೌಪ್ಯಪಟ್ಟಿ ವಾಟ್ಸಾಪ್ ಮೂಲಕ ರವಾನೆ ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನಿಸುತ್ತಿದ್ದ ರೋಹಿತ್‌ ಹಾಗೂ ಸಂತ್ರಿ

ಭಾರತೀಯ ನೌಕಾ ದಳ (ಸೇನೆ)ಕ್ಕೆ ಸಂಬಂಧಿಸಿದ ಹಡಗುಗಳ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪದಲ್ಲಿ ಉತ್ತರ ಪ್ರದೇಶ ಮೂಲದ ಆರೋಪಿಗಳಿಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ಅನಂತರಾಮ್ ಭಟ್‌ಪುರದ ರೋಹಿತ್ (29) ಹಾಗೂ ಹಂಜಾಬಾದ್ ಮೈಂದಾನ್ ನಿವಾಸಿ ಸಂತ್ರಿ (37) ಬಂಧಿತರು.

ಆರೋಪಿಗಳಿಬ್ಬರು ಕೊಚ್ಚಿನ್ ಶಿಪ್‌ಯಾರ್ಡ್‌ನ ಸಿಬ್ಬಂದಿ. ಪಾಕಿಸ್ತಾನಕ್ಕೆ ಇಲ್ಲಿನ ಗೌಪ್ಯ ಮಾಹಿತಿಯನ್ನು ರವಾನಿಸಿ ಭಾರತದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಗೆ ಅಪಾಯವನ್ನುಂಟು ಮಾಡುವ ಮತ್ತು ಅಂತರಿಕ ಭದ್ರತೆ ಧಕ್ಕೆ ತರುವ ಕೃತ್ಯ ಎಸಗಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಶನಿವಾರ ಬನ್ನಂಜೆ ಎಸ್ಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ, ರೋಹಿತ್ ಪ್ರಕರಣದ ಪ್ರಮುಖ ಆರೋಪಿ.

ಈತ ಮಲ್ಪೆಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಹಾಗೂ ಸಂತ್ರಿ ಕೇರಳದ ಕೊಚ್ಚಿಯಲ್ಲಿ ಇನ್ಸೂಲೇಟರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಈ ಇಬ್ಬರು ಡಿಪ್ಲೋಮಾ ಪದವೀಧರರಾಗಿದ್ದು, ರೋಹಿತ್ ಕಳೆದ ಆರು ತಿಂಗಳ ಹಿಂದಷ್ಟೇ ಮಲ್ಪೆಗೆ ವರ್ಗಾವಣೆಯಾಗಿದ್ದ. ಆರೋಪಿಗಳಿಬ್ಬರು ಒಂದೂವರೆ ವರ್ಷದಿಂದ ಈ ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಮಾಹಿತಿ ನೀಡಿದರು.

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನ ಸಿಇಒ ಪ್ರಕರಣಕ್ಕೆ ಸಂಬಂಧಿಸಿ ದೂರು ನೀಡಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ತನಿಖೆಯನ್ನು ಕಾರ್ಕಳದ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ ನೇತೃತ್ವದಲ್ಲಿ ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ ಡಿ., ಎಎಸ್‌ಐ ಹರೀಶ್, ಸಿಬ್ಬಂದಿ ರವಿ ಜಾಧವ್ ತಂಡ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಡಿ. 3ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ವಾಟ್ಸ್ಯಾಪ್‌ನಲ್ಲಿ ರವಾನೆ: ಹಣಕಾಸು ವಹಿವಾಟು ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಕೇಂದ್ರ ಸರಕಾರ ಸ್ವಾಮ್ಯದ ಬಂದರು, ಹಡಗು ಮತ್ತು ಜಲಸಾರಿಗೆ ಇಲಾಖೆಯ ಅಡಿಯಲ್ಲಿರುವ ಸಂಸ್ಥೆಯಾಗಿದ್ದು, ಇದು ಸುಷ್ಮಾ ಮರೇನಾ ಪ್ರೈ.ಲಿ. ಸಂಸ್ಥೆಯ ಸಬ್ ಕಾಂಟ್ರಾಕ್ಟ್ ಹೊಂದಿದೆ. ಬಂಧಿತ ರೋಹಿತ್ ಇಲ್ಲಿ ಇನ್ಸೂಲೇಟರ್ ಆಗಿದ್ದ. ಈತ ಈ ಹಿಂದೆ ಕೇರಳದ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, ಕೇರಳದ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಭಾರತದ ನೌಕಾ ಸೇನೆಗೆ ಸಂಬಂಧಿಸಿ ಹಡಗುಗಳನ್ನು ನಿರ್ಮಾಣ ಮಾಡಲಾಗುತ್ತಿತ್ತು.

ರೋಹಿತ್ ಕೇರಳದಲ್ಲಿ ಕೆಲಸ ಮಾಡುತ್ತಿದ್ದಾಗ ಭಾರತದ ನೌಕಾ ಸೇನೆಗೆ ಸಂಬಂಧಿಸಿದ ಹಡಗುಗಳ ನಂಬರ್‌ಗಳ ಗೌಪ್ಯಪಟ್ಟಿ, ಇತರೆ ಗೌಪ್ಯ ಮಾಹಿತಿಯನ್ನು ವಾಟ್ಸ್ಯಾಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ ಅಕ್ರಮ ಲಾಭ ಪಡೆದಿದ್ದ. ಪ್ರಕರಣಕ್ಕೆ ಸಂಬಂಧಿಸಿ ಬ್ಯಾಂಕ್ ವಹಿವಾಟಿನ ಪೂರಕ ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಎಸ್ಪಿ ತಿಳಿಸಿದರು.

ಮಲ್ಪೆಯಲ್ಲೂ ಕೃತ್ಯದಲ್ಲಿ ಸಕ್ರಿಯ! ರೋಹಿತ್ ಕಳೆದ ಆರು ತಿಂಗಳ ಹಿಂದಷ್ಟೇ ಕೇರಳದಿಂದ ಮಲ್ಪೆಯ ಕೊಚ್ಚಿನ್ ಶಿಪ್‌ಯಾರ್ಡ್‌ಗೆ ವರ್ಗಾವಣೆಗೊಂಡಿದ್ದ. ಕೇರಳದ ಕೊಚ್ಚಿಯಲ್ಲಿರುವ ಆತನ ಸ್ನೇಹಿತನ ಮೂಲಕ ಗೌಪ್ಯ ಮಾಹಿತಿ ಪಡೆದು ವಾಟ್ಸ್ಯಾಪ್ ಮೂಲಕ ಅನಧಿಕೃತ ವ್ಯಕ್ತಿಗೆ ಶೇರ್ ಮಾಡುತ್ತಿದ್ದ. ಈ ಮೂಲಕ ಭಾರತದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಗೆ ಅಪಾಯವನ್ನುಂಟು ಮಾಡುವ ಮತ್ತು ಅಂತರಿಕ ಭದ್ರತೆ ಧಕ್ಕೆ ತರುವ ಕೆಲಸ ಎಸಗಿರುವುದಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...