ದುಬೈ ಏರ್ ಶೋ ವೇಳೆ ತೇಜಸ್ ಯುದ್ಧ ವಿಮಾನ ಪತನ

17

ದುಬೈ: ದುಬೈ ಏರೋ ಶೋ ವೇಳೆ ಶುಕ್ರವಾರ ಮಧ್ಯಾಹ್ನ ಭಾರತದ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಹಾರಾಟ ನಡೆಸುತ್ತಿದ್ದ ವಿಮಾನ ನೋಡ ನೋಡುತ್ತಿದ್ದಂತೆಯೇ ಬೆಂಕಿಯುಂಡೆಯಾಗಿ ನೆಲಕ್ಕೆ ಅಪ್ಪಳಿಸಿದೆ. ಸ್ಪೋಟದ ಬಳಿಕ ದಟ್ಟವಾದ ಕಪ್ಪು ಹೊಗೆ ಆವರಿಸಿದೆ.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ ಏಕ ಆಸನದ ಹಗುರ ಯುದ್ಧ ವಿಮಾನ (LCA) ವಿಮಾನವು ಸ್ಥಳೀಯ ಸಮಯ ಮಧ್ಯಾಹ್ನ 2:10 ರ ಸುಮಾರಿಗೆ ಪತನವಾಗಿದೆ. ಪೈಲಟ್‌ನ ಸ್ಥಿತಿ ಅಥವಾ ಸ್ಫೋಟ ಸಂಭವಿಸಿದೆಯೇ ಎಂಬುದರ ಕುರಿತು ಅಧಿಕಾರಿಗಳು ತಕ್ಷಣಕ್ಕೆ ದೃಢಿಕರಿಸಿಲ್ಲ. ಭಾರತೀಯ ವಾಯುಪಡೆಯಿಂದ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.

ವಿಶ್ವದ ಅತಿದೊಡ್ಡ ವಾಯುಯಾನ ಪ್ರದರ್ಶನಗಳಲ್ಲಿ ಒಂದಾದ ದ್ವೈವಾರ್ಷಿಕ ದುಬೈ ಏರ್ ಶೋ ವೇಳೆ ಈ ಅಪಘಾತ ಸಂಭವಿಸಿದೆ. ಎಮಿರೇಟ್ಸ್ ಮತ್ತು ಪ್ಲೈ ದುಬೈನಿಂದ ಬಹು ಬಿಲಿಯನ್ ಡಾಲರ್ ಮೊತ್ತದ ವಿಮಾನ ಖರೀದಿ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಏರ್ ಶೋ ವೇಳೆಯಲ್ಲಿ ಘೋಷಿಸಲಾಗಿದೆ. ಇದು ಎರಡನೇ ತೇಜಸ್ ವಿಮಾನದ ಅಪಘಾತವಾಗಿದೆ. ಮಾರ್ಚ್ 2024ರಲ್ಲಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ತೇಜಸ್ ಯುದ್ಧವಿಮಾನವು ಪತನಗೊಂಡಿತ್ತು.

ಇದು ಹಗುರವಾದ ಮತ್ತು ಚಿಕ್ಕ ಯುದ್ಧವಿಮಾನಗಳಲ್ಲಿ ಒಂದಾಗಿದೆ. ಹೆಚ್ ಎಎಲ್ ನಿರ್ಮಿತ ಲಘು ಯುದ್ಧ ವಿಮಾನ ‘ತೇಜಸ್ Mk1A’ ಯಶಸ್ವಿ ಹಾರಾಟ ಪೈಲಟ್ ಸಾವು ದೃಢ ಅಪಘಾತದಲ್ಲಿ ಪೈಲಟ್ ಸಾವನ್ನಪ್ಪಿರುವುದನ್ನು ಭಾರತೀಯ ವಾಯುಪಡೆ ದೃಢಪಡಿಸಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ ಸಾವನ್ನಪ್ಪಿದ್ದಾರೆ. ಈ ದು:ಖದ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ದೃಢವಾಗಿ ನಿಲ್ಲುವುದಾಗಿ ತಿಳಿಸಿದೆ. ಅಪಘಾತಕ್ಕೆ ಏನು ಕಾರಣ ಎಂಬುದನ್ನು ತಿಳಿಯಲು ವಿಚಾರಣಾ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಭಾರತೀಯ ವಾಯುಪಡೆ ಹೇಳಿದೆ”

ಆದರೆ ಪೈಲಟ್ ಸುರಕ್ಷಿತವಾಗಿ ಜಿಗಿಯುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದರು. ತೇಜಸ್ 4.5 ಪೀಳಿಗೆಯ ಬಹುಪಯೋಗಿ ಯುದ್ಧ ವಿಮಾನವಾಗಿದ್ದು, ವಾಯು-ರಕ್ಷಣಾ ಕಾರ್ಯಾಚರಣೆ, ಆಕ್ರಮಣಕಾರಿ ವಾಯು ಬೆಂಬಲ ಮತ್ತು ಯುದ್ಧ ಕಾರ್ಯಾಚರಣೆಗಳನ್ನು ನಿರ್ವಹಿಸಲು ನಿರ್ಮಿಸಲಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...