ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಬಲಪಡಿಸಲು 3,837 ಹೊಸ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭ

16

ಚಿತ್ರದುರ್ಗ: ರಾಜ್ಯದ ಪ್ರಾಥಮಿಕ ಶಾಲೆಗಳನ್ನು ಬಲಪಡಿಸಲು 3,837 ಹೊಸ ಪೂರ್ವ ಪ್ರಾಥಮಿಕ ಶಾಲೆಗಳ ಆರಂಭ ರಾಜ್ಯದಲ್ಲಿ ಈಗಾಗಲೇ ಇದೆ 2,619 ಪೂರ್ವ ಪ್ರಾಥಮಿಕ ಶಾಲೆಗಳು, 90,195 ವಿದ್ಯಾರ್ಥಿಗಳು ದಾಖಲು ಚಿತ್ರದುರ್ಗ ಜಿಲ್ಲೆಗೆ ಒಟ್ಟು 89 ಹೊಸ ಪೂರ್ವ ಪ್ರಾಥಮಿಕ ಶಾಲೆಗಳ ಅನುಮೋದನೆ ರಾಜ್ಯದಲ್ಲಿ ಈಗಾಗಲೇ 2,619 ಪೂರ್ವ ಪ್ರಾಥಮಿಕ ಶಾಲೆಗಳನ್ನು ಸರಕಾರ ಆರಂಭಿಸಿದ್ದು, ಮುಂದಿನ ವರ್ಷದ ವೇಳೆಗೆ ಈ ಸಂಖ್ಯೆ 6 ಸಾವಿರ ದಾಟಲಿದೆ.

ರಾಜ್ಯದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಬಲಪಡಿಸಲು 3,837 ಪೂರ್ವ ಪ್ರಾಥಮಿಕ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಈಗಾಗಲೇ 2,619 ಪೂರ್ವ ಪ್ರಾಥಮಿಕ ಶಾಲೆಗಳನ್ನು ಸರಕಾರ ಆರಂಭಿಸಿದೆ. ಇವುಗಳಲ್ಲಿ 90,195 ವಿದ್ಯಾರ್ಥಿಗಳು ದಾಖಲಾಗಿದ್ದು, ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

2025-26ನೇ ಸಾಲಿನ ಬಜೆಟ್‌ ಭಾಷಣದ 111(1) ಖಂಡಿಕೆಯಲ್ಲಿ ರಾಜ್ಯದಲ್ಲಿ 5 ಸಾವಿರ ಪೂರ್ವ ಪ್ರಾಥಮಿಕ ಶಾಲೆಗಳ ಆರಂಭಿಸಲಾಗುವುದು ಎಂದು ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎರಡನೇ ಹಂತದಲ್ಲಿ 3,837 ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಹೊಂದಿರುವ ಪೂರ್ವ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಆದೇಶ ನೀಡಿದೆ.

ಸಮಗ್ರ ಶಿಕ್ಷಣ ಯೋಜನೆಯಡಿಯಲ್ಲಿ 1,496 ಶಾಲೆಗಳು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ 1,119 ಶಾಲೆಗಳು, ಮ್ಯಾಗ್ನೆಟ್‌ ಶಾಲೆಗಳಲ್ಲಿ 1,706 ಸೇರಿದಂತೆ ಒಟ್ಟಾರೆ 3,837 ಪೂರ್ವ ಪ್ರಾಥಮಿಕ ಶಾಲೆಗಳು ಹೊಸ ಯೋಜನೆಯಲ್ಲಿ ಆರಂಭವಾಗಲಿವೆ. ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿದೆ. ಇದನ್ನು ತಡೆಯಲು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗುತ್ತಿದೆ.

ಪ್ರಾಯೋಗಿಕವಾಗಿ ಆರಂಭಿಸಲಾದ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಪೋಷಕರಿಂದ ಮತ್ತು ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜತೆಗೆ ಈ ಶಾಲೆಗಳು ಕನ್ನಡ ಮತ್ತು ಇಂಗ್ಲಿಷ್‌ ಸೇರಿದಂತೆ ದ್ವಿಭಾಷಾ ತರಗತಿಗಳಾಗಿವೆ. ಶಿಕ್ಷಣ ಇಲಾಖೆ ಈ ಶಾಲೆಯ ಶಿಕ್ಷಕರಿಗೆ ಅಗತ್ಯವಾದ ಪಠ್ಯವಸ್ತು ಮತ್ತು ಪಾಠೋಪಕರಣ ಸಿದ್ಧಪಡಿಸಿದೆ. ಬಿಸಿಯೂಟ ಸೌಲಭ್ಯ ವಿಸ್ತರಣೆ ಹೊಸದಾಗಿ ಆರಂಭವಾಗುವ ಈ ಎಲ್ಲ ಶಾಲೆಗಳಲ್ಲಿ ಸರಕಾರಿ ಶಾಲೆಗಳಂತೆ ಬಿಸಿಯೂಟ, ಹಾಲು, ಮೊಟ್ಟೆ, ಬಾಳೆಹಣ್ಣು ಒದಗಿಸಲಾಗುವುದು.

ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಪ್ರತಿ ಮಗುವಿಗೆ 418 ಕ್ಯಾಲೋರಿ ಶಕ್ತಿ ಮತ್ತು 8.7 ಗ್ರಾಂ ಪ್ರೊಟೀನ್‌ ಭರಿತ ಆಹಾರ ನೀಡಲಾಗುವುದು. ವಾರದ ಐದು ದಿನ ಹಾಲು ಮತ್ತು 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲಿದೆ. ಶಿಕ್ಷಕರು ಮತ್ತು ಆಯಾ ನೇಮಕ ಸರಕಾರ ಆರಂಭಿಸಲಿರುವ ಈ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಎಲ್‌ಕೆಜಿ ತರಗತಿ ಮಾತ್ರ ಆರಂಭಿಸಲು ಅವಕಾಶ .

ಕನಿಷ್ಟ 20 ವಿದ್ಯಾರ್ಥಿಗಳು ದೊರೆಯದೇ ಇದ್ದಲ್ಲಿ ಮುಂದಿನ ವರ್ಷದಲ್ಲಿ ತರಗತಿ ಆರಂಭಿಸಬಹುದಾಗಿದೆ. ಪ್ರತಿ ತರಗತಿಗೆ ಗರಿಷ್ಟ 40 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಶಾಲೆಗೆ ಒಬ್ಬ ಶಿಕ್ಷಕಿ ಮತ್ತು ಒಬ್ಬ ಆಯಾ ನೇಮಿಸಲು ಅವಕಾಶ ಕಲ್ಪಿಸಲಾಗಿದೆ. ಶಿಕ್ಷಕರ ನೇಮಕಾತಿಗೆ ಮಾರ್ಗಸೂಚಿ ನೀಡಲಾಗಿದೆ. ಡಿಇಡಿ ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಶಿಕ್ಷಕಿಗೆ 12 ಸಾವಿರ ಮತ್ತು ಆಯಾಗೆ 6,250 ರೂ. ಗೌರವಧನ ನಿಗದಿಗೊಳಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಗೆ 89 ಶಾಲೆಗಳು ಚಿತ್ರದುರ್ಗ ಜಿಲ್ಲೆಗೆ 89 ಪೂರ್ವ ಪ್ರಾಥಮಿಕ ಶಾಲೆಗಳನ್ನು ಮಂಜೂರು ಮಾಡಲಾಗಿದೆ. ಕೆಲವು ಕೆಪಿಎಸ್‌ ಶಾಲೆಗಳಲ್ಲಿ ಈಗಾಗಲೇ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಲಾಗಿದೆ.ಉಳಿದಂತೆ ಚಳ್ಳಕೆರೆ – 21, ಮೊಳಕಾಲ್ಮುರು – 14, ಚಿತ್ರದುರ್ಗ – 16, ಹೊಸದುರ್ಗ – 4 , ಹಿರಿಯೂರು – 18, ಹೊಳಲ್ಕೆರೆ – 15 ಶಾಲೆಗಳಿಗೆ ಅನುಮತಿ ನೀಡಲಾಗಿದೆ. ಈ ಎಲ್ಲ ಶಾಲೆಗಳು ಕಟ್ಟಡ, ನಿವೇಶನ ಮತ್ತು ಮೂಲ ಸೌಲಭ್ಯ ಹೊಂದಿದ್ದು, ಇಲ್ಲಿ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲಾಗುತ್ತಿದೆ. ಎಲ್‌ಕೆಜಿ ದಾಖಲಾಗುವ ಮಗು ಯುಕೆಜಿ ನಂತರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಂದುವರಿಯುತ್ತಾರೆ. ಹೀಗಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಬಲವರ್ಧನೆಯಾಗುವ ನಿರೀಕ್ಷೆಯಿದೆ. “

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...