ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಕಾರ್ಯ ಆರಂಭ

45

ಮೈಸೂರು:ಇದೀಗ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ತಾಲೂಕಿನ ಇಲವಾಲ ಹೋಬಳಿಯ ಹುಯಿಲಾಳು ಬಳಿ ಜಾಗ ಗುರುತು ಜಾಗವನ್ನು ಮಾರುಕಟ್ಟೆ ದರಕ್ಕೆ ಬದಲಾಗಿ ಸಾಂಕೇತಿಕ ವೆಚ್ಚದಲ್ಲಿ ನೀಡಬೇಕು ಎಂಬುದಾಗಿ ಸರಕಾರದ ಹಂತದಲ್ಲಿ ಚರ್ಚಿಸಲಾಗುತ್ತಿದೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ಜಾಗ ಹಸ್ತಾಂತರ ಆಗಲಿದೆ. ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಿಸುವ ಯೋಜನೆ ಜಾಗ ಸಿಗದೆ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಆದರೆ, ಇದೀಗ ಜಾಗ ದೊರೆತು ಸರಕಾರದ ಕ್ಯಾಬಿನೆಟ್‌ ಸಭೆ ಒಪ್ಪಿಗೆ ಸೂಚಿಸಿದೆ. ಆದರೆ ಯೋಜನೆ ವೆಚ್ಚ ಹೆಚ್ಚಾಗುವುದರಿಂದ ಮಾರುಕಟ್ಟೆ ದರಕ್ಕಿಂತ ಸಾಂಕೇತಿಕ ದರದಲ್ಲಿ ಜಾಗ ನೀಡಬೇಕು ಎಂಬ ಚರ್ಚೆ ನಡೆಯುತ್ತಿದೆ. ಇದಕ್ಕೆ ಸರಕಾರ ಸಮ್ಮತಿಸಿದಲ್ಲಿ ಮಾತ್ರವೇ ಕ್ರೀಡಾಂಗಣ ನಿರ್ಮಾಣ ಕಾರ್ಯ ಆರಂಭವಾಗಲಿದೆ.

ರಾಜ್ಯದ ಎರಡನೇ ದೊಡ್ಡ ನಗರಿ ಎನಿಸಿರುವ ಮೈಸೂರಿನಲ್ಲಿಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳು ನಡೆಯಲು ಅನುವಾಗುವಂತೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಆಗಬೇಕು ಎನ್ನುವುದು ದಶಕಗಳ ಬೇಡಿಕೆ. ಇದಕ್ಕಾಗಿ ನಾಲ್ಕಾರು ಕಡೆಗಳಲ್ಲಿ ಸ್ಥಳ ಗುರುತಿಸುವ ಕಾರ್ಯ ನಡೆದಿದ್ದರೂ ಯಾವುದೂ ಅಂತಿಮಗೊಂಡಿರಲಿಲ್ಲ. ನಗರದ ಹೊರವರ್ತುಲ ರಸ್ತೆಗೆ ಹೊಂದಿಕೊಂಡಂತೆ ಇರುವ ಹಂಚ್ಯಾ ಸಾತಗಳ್ಳಿ ಬಳಿ ಈ ಹಿಂದೆ 20 ಎಕರೆಯಷ್ಟು ಜಮೀನು ಗುರುತಿಸಲಾಗಿತ್ತಾದರೂ ಇದರ ಮಧ್ಯೆ ಕೆರೆ ಇದ್ದ ಕಾರಣಕ್ಕೆ ಯೋಜನೆಯನ್ನು ಅಲ್ಲಿಗೆ ಕೈಬಿಡಲಾಗಿತ್ತು.

ನಂತರದಲ್ಲಿ ವರುಣ ಸುತ್ತಮುತ್ತಲೂ ಜಮೀನಿಗಾಗಿ ಹುಡುಕಾಟ ನಡೆದಿತ್ತು. ಅಂತಿಮವಾಗಿ ಇದೀಗ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ತಾಲೂಕಿನ ಇಲವಾಲ ಹೋಬಳಿಯ ಹುಯಿಲಾಳು ಬಳಿ ಸದ್ಯದ ಮಾರುಕಟ್ಟೆ ದರದಲ್ಲಿಅಗತ್ಯ ಜಮೀನು ನೀಡಲು ಕ್ಯಾಬಿನೆಟ್‌ ಸಭೆ ಸಮ್ಮತಿಸಿದೆ. ಆದರೆ, ಜಾಗವನ್ನು ಮಾರುಕಟ್ಟೆ ದರಕ್ಕೆ ಬದಲಾಗಿ ಸಾಂಕೇತಿಕ ವೆಚ್ಚದಲ್ಲಿ ನೀಡಬೇಕು ಎಂಬುದಾಗಿ ಸರಕಾರದ ಹಂತದಲ್ಲಿ ಚರ್ಚಿಸಲಾಗುತ್ತಿದೆ. ಸದ್ಯದಲ್ಲಿಯೇ ನಡೆಯುವ ಅಧಿವೇಶನದಲ್ಲಿ ಇದಕ್ಕೆ ಅನುಮೋದನೆ ದೊರೆತಲ್ಲಿ, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ಜಾಗ ಹಸ್ತಾಂತರ ಆಗಲಿದೆ.

ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ. ಎಷ್ಟು ಜಾಗದಲ್ಲಿ ಕ್ರೀಡಾಂಗಣ?: ನಗರ ಕೇಂದ್ರದಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಹುಯಿಲಾಳು ಗ್ರಾಮದ ಸರ್ವೆ ಸಂಖ್ಯೆ 312ರಲ್ಲಿ 19 ಎಕರೆ ಹಾಗೂ ಸರ್ವೆ ಸಂಖ್ಯೆ 313ರಲ್ಲಿ 7.31 ಎಕರೆ ಸೇರಿದಂತೆ ಒಟ್ಟು 26.31 ಎಕರೆ ಜಮೀನನ್ನು ನೂತನ ಕ್ರೀಡಾಂಗಣಕ್ಕಾಗಿ ಗುರುತಿಸಲಾಗಿದೆ. ಇದನ್ನು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ಮಂಜೂರು ನೀಡಲು ಜಿಲಾಡಳಿತವು 2023ರ ಮಾರ್ಚ್ನಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಉದ್ದೇಶಿತ ಜಮೀನನ್ನು ಈ ಹಿಂದೆ ಸಂಸ್ಥೆಯೊಂದಕ್ಕೆ 30 ವರ್ಷಕ್ಕೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಅವಧಿ ಮುಗಿದಿದ್ದು, ಸದ್ಯ ಸರಕಾರದ ವಶದಲ್ಲಿದೆ.

ಸದ್ಯದ ಪರಿಸ್ಥಿತಿ ಏನು?: ಮಾನಸಗಂಗೋತ್ರಿ ಆವರಣದಲ್ಲಿರುವ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಕ್ರೀಡಾಂಗಣದಲ್ಲಿ (ಗಂಗೋತ್ರಿ ಗ್ಲೇಡ್ಸ್‌) ಎ ದರ್ಜೆಯ ಕ್ರಿಕೆಟ್‌ ಪಂದ್ಯಗಳನ್ನು ಮಾತ್ರ ಆಯೋಜಿಸಲಾಗುತ್ತಿದೆ. ಹಲವು ರಣಜಿ ಪಂದ್ಯಗಳು ಕರ್ನಾಟಕ ಪ್ರಿಮಿಯರ್‌ ಲೀಗ್‌(ಕೆಪಿಎಲ್‌), ಸೆಲೆಬ್ರೆಟಿ ಕ್ರಿಕೆಟ್‌ ಲೀಗ್‌(ಸಿಸಿಎಲ್‌) ನಂತಹ ದೇಸಿ ಲೀಗ್‌ ಟೂರ್ನಿಗಳು ಇಲ್ಲಿ ನಡೆದಿವೆ. ಆದರೆ, ಮೈದಾನ ಚಿಕ್ಕದಾಗಿದ್ದು, ವಿಸ್ತರಣೆಗೆ ಸ್ಥಳಾವಕಾಶದ ಕೊರತೆ ಇದೆ. ಹೀಗಾಗಿ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ.”

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...