ಪ್ರಧಾನಮಂತ್ರಿ ಕಚೇರಿಯ ಉನ್ನತ ಅಧಿಕಾರಿ ಎಂದು ಹೇಳಿಕೊಂಡು 2.7 ವಂಚಿಸಿದ ಆರೋಪಿ ಬಂಧನ

27

ಬೆಂಗಳೂರು (ನ.24): ತಾನು ಪ್ರಧಾನಮಂತ್ರಿ ಕಚೇರಿ (PMO)ಯಲ್ಲಿ ಕೆಲಸ ಮಾಡುವ ಉನ್ನತ ಅಧಿಕಾರಿ ಎಂದು ಹೇಳಿಕೊಂಡು, ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದತ್ತು ಪುತ್ರ ಎಂದು ಬಿಂಬಿಸಿಕೊಂಡು ವೈದ್ಯರೊಬ್ಬರಿಗೆ ಬರೋಬ್ಬರಿ 2.7 ಕೋಟಿ ರೂಪಾಯಿಗಳಷ್ಟು ಪಂಗನಾಮ ಹಾಕಿದ ವಂಚಕನನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ವಿಜಯನಗರದ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ. ಈತ ಜಮ್ಮು ಕಾಶ್ಮೀರ ಮೂಲದ ವೈದ್ಯರೊಬ್ಬರನ್ನು ಸಂಪರ್ಕಿಸಿ ತಾನು ಪ್ರಧಾನಮಂತ್ರಿ ಕಚೇರಿಯ ಅಧಿಕಾರಿಯಾಗಿರುವುದಾಗಿ ನಂಬಿಸಿದ್ದಾನೆ. ಮಾತ್ರವಲ್ಲದೆ, ಉಡುಪಿ ಪುತ್ತಿಗೆ ಮಠದ ಸ್ವಾಮೀಜಿ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಸ್ಟೇಜ್ ಹಂಚಿಕೊಂಡಿರುವುದಾಗಿ ಫೋಟೋಗಳನ್ನು ತೋರಿಸಿ ವಿಶ್ವಾಸ ಗಳಿಸಿ ವಂಚಿಸಿದ್ದಾನೆ.

ದೇವನಹಳ್ಳಿ ಬಳಿ ವಿಲ್ಲಾ ಆಸ್ಪತ್ರೆ ಆಮಿಷ: ದೇವನಹಳ್ಳಿ ಬಳಿ ಅತ್ಯಾಧುನಿಕ ವಿಲ್ಲಾ ಮಾದರಿಯಲ್ಲಿ ಆಯುರ್ವೇದ ಆಸ್ಪತ್ರೆಯನ್ನು ತೆರೆಯಲು ಸರ್ಕಾರದಿಂದ ಅವಕಾಶ ಮಾಡಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದ ಸುಜಯೇಂದ್ರ, ಈ ನೆಪದಲ್ಲಿ ವೈದ್ಯರಿಂದ ಹಂತ ಹಂತವಾಗಿ 2.7 ಕೋಟಿ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾನೆ.

ಕಳ್ಳಾಟ ಬಯಲಾಗಿದ್ದು ಹೇಗೆ?

ವಂಚನೆಗೊಳಗಾದ ವೈದ್ಯರು ದೂರು ನೀಡಿದ ಬಳಿಕ ತನಿಖೆ ಕೈಗೊಂಡ ವಿಜಯನಗರ ಪೊಲೀಸರು ಸುಜಯೇಂದ್ರ ಕಳ್ಳಾಟ ನಡೆಸಿರುವುದು ಗೊತ್ತಾಗಿದೆ. ಸುಜಯೇಂದ್ರನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತನ ವಂಚನೆಯ ಅಸಲಿಯತ್ತು ಬಯಲಾಗಿದೆ.

ಎರಡು ಬಾರಿ ಜೈಲು ವಂಚಕ: ಆರೋಪಿ ಸುಜಯೇಂದ್ರ ಎಂಥ ಖರ್ನಾಕ್ ಎಂದರೆ ಈಗಾಗಲೇ ಎರಡು ಬಾರಿ ಜೈಲು ಪಾಲಾಗಿದ್ದ ಹಳೇ ಅಪರಾಧಿಯಾಗಿದ್ದಾನೆ. ಅವನ ವಿರುದ್ಧ ಈಗಾಗಲೇ 4 ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ ಎಂಬ ಅಂಶ ತನಿಖೆಯಲ್ಲಿ ಬಯಲಾಗಿದೆ. ಇಷ್ಟೇಲ್ಲವಂಚನೆಪ್ರಕರಣಗಳಿದ್ದರೂಉಪಮುಖ್ಯಮಂತ್ರಿಯವರೊಂದಿಗೆ ಸ್ಟೇಜ್‌ ಹಂಚಿಕೊಂಡಿರುವದು ಅಚ್ಚರಿ. ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಮೈಲಾರ ಲಿಂಗೇಶ್ವರನ ಐತಿಹಾಸಿಕ ಕಾರ್ಣಿಕೋತ್ಸವ – 2026 18 ಅಡಿ ಎತ್ತರದ ಬಿಲ್ಲೇರಿ ನುಡಿದ ದೈವವಾಣಿ

“ವಿಜಯನಗರ: ಉತ್ತರ ಕರ್ನಾಟಕದ ಹಾಗೂ ಕೋಟಿ ಕೋಟಿ ಭಕ್ತರ ನಂಬಿಕೆಯ ಕೇಂದ್ರವಾಗಿರುವ ವಿಜಯನಗರ ಜಿಲ್ಲೆಯ ಹೂವಿನ...

ಬೇಲಿಕೇರಿ ಕಬ್ಬಿಣದ ಅದಿರು ಅಕ್ರಮ ಸಾಗಾಟ ಪ್ರಕರಣ ತಂದೆ ಮಗನಿಗೆ ಮೂರು ವರ್ಷ ಜೈಲು ಶಿಕ್ಷೆ, 52.55ಲಕ್ಷ ದಂಡ ವಿಧಿಸಿದ  ನ್ಯಾಯಾಲಯ

“ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು...

ಇಂಧನ ಖಾತೆ ಕೆಲಸಗಳಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ರಾಜೀನಾಮೆಗೆ ಮುಂದಾದರೆ ಇಂಧನ ಸಚಿವ ಕೆ ಜೆ ಜಾರ್ಜ್

“ಇಂಧನ ಸಚಿವ ಕೆ.ಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೇ, ಈ ವಿಚಾರ ಮಾಧ್ಯಮಗಳಲ್ಲಿ...

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ  ಹೈಕೋರ್ಟ್

“ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್...