ರಾಮ ಮಂದಿರ ನಿರ್ಮಾಣದ ಇತಿಹಾಸವು ಶತಮಾನಗಳಷ್ಟು ಹಿಂದಿನದು. ಮೊಘಲ್ ಚಕ್ರವರ್ತಿ ಬಾಬರ್ನ ಸೇನಾಧಿಪತಿಯಾಗಿದ್ದ ಮೀರ್ ಬಾಕಿ ಹಳೆಯ ದೇವಾಲಯವನ್ನು ಕೆಡವಿ ಬಾಬರಿ ಮಸೀದಿಯನ್ನು ನಿರ್ಮಿಸಿದ್ದ ಎಂದು ಹೇಳಲಾಗುತ್ತದೆ.
ಅಯೋಧ್ಯೆ, ನವೆಂಬರ್ 25: ಅಯೋಧ್ಯೆ(Ayodhya)ಯಲ್ಲಿ ಭವ್ಯ ರಾಮ ಮಂದಿರ(Ram Mandir)ದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಂದು ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ರಾಮ ಮಂದಿರ ನಿರ್ಮಾಣದ ಇತಿಹಾಸವು ಶತಮಾನಗಳಷ್ಟು ಹಿಂದಿನದು.

ಮೊಘಲ್ ಚಕ್ರವರ್ತಿ ಬಾಬರ್ನ ಸೇನಾಧಿಪತಿಯಾಗಿದ್ದ ಮೀರ್ ಬಾಕಿ ಹಳೆಯ ದೇವಾಲಯವನ್ನು ಕೆಡವಿ ಬಾಬರಿ ಮಸೀದಿಯನ್ನು ನಿರ್ಮಿಸಿದ್ದ ಎಂದು ಹೇಳಲಾಗುತ್ತದೆ. ಅಂದಿನಿಂದ ಈ ಸ್ಥಳವು ವಿವಾದದಲ್ಲೇ ಇತ್ತು. ಬರೋಬ್ಬರಿ 500 ವರ್ಷಗಳ ಹೋರಾಟ, ಬಲಿದಾನಗಳ ನಂತರ ಆಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಗೊಂಡು 2024ರಲ್ಲಿ ಉದ್ಘಾಟನೆಗೊಂಡಿತ್ತು.
ಉದ್ಘಾಟನೆ ವೇಳೆ ರಾಮ ಮಂದಿರದ ಕಾಮಗಾರಿ ಸಂಪೂರ್ಣವಾಗಿರಲಿಲ್ಲ. ಇದೀಗ ಸರಿಸುಮಾರು ಒಂದು ವರ್ಷದ ಬಳಿಕ ರಾಮಮಂದಿರದ ಕಾಮಗಾರಿ ಸಂಪೂರ್ಣಗೊಂಡಿದೆ. ಅಯೋಧ್ಯೆ ರಾಮ ಮಂದಿರ ವೈಶಿಷ್ಟ್ಯ ರಾಮ ಮಂದಿರ ನಿರ್ಮಾಣ ಪ್ರದೇಶವು ಸುಮಾರು 57,000 ಚದರ ಅಡಿ ಆಗಿದ್ದು, ಕಟ್ಟಡವು ಮೂರು ಅಂತಸ್ತಿನ ರಚನೆಯಾಗಿದೆ. ಇದು ಕುತುಬ್ ಮಿನಾರ್ಗಿಂತಲೂ ಶೇಕಡ 70 ಹೆಚ್ಚು ಎತ್ತರದ್ದಾಗಿದೆ.

ರಾಮ ಮಂದಿರವು ಬೃಹತ್ ಕಂಬಳ ಮೇಲೆ ನಿಂತಿದ್ದು, ಶ್ರೀ ರಾಮ ದೇವರು ಇರುವ ಅತ್ಯಂತ ಪವಿತ್ರ ಭಾಗವನ್ನು ಗರ್ಭ ಗೃಹ ಅಥವಾ ಗರ್ಭ ಗುಡಿ ಎಂದು ಹೇಳಲಾಗುತ್ತದೆ. ಮಂದಿರದ ಮೂರನೇ ಮಹಡಿಯಲ್ಲಿ ಅತಿ ಎತ್ತರದ ಶಿಖರ ರೂಪದ ಗೋಪುರವಿದೆ. ಐದು ಮಂಟಪಗಳ ಮೇಲೆ ಐದು ಶಿಖರಗಳಿದ್ದು, ಒಟ್ಟು 300 ಕಂಬಗಳು ಮತ್ತು 44 ತೇಗದ ಬಾಗಿಲುಗಳನ್ನು ಹೊಂದಿದೆ.”

Leave a comment