ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯುವಂತೆ ನ. 26 ರಂದು 10 ಪ್ರಮುಖ ಕಾರ್ಮಿಕ ಸಂಘಟನೆಗಳಿಂದ ದೇಶಾದ್ಯಂತ ಪ್ರತಿಭಟನೆ

33

ಹೊಸದಿಲ್ಲಿ: ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನ. 26 ರಂದು 10 ಪ್ರಮುಖ ಕಾರ್ಮಿಕ ಸಂಘಟನೆಗಳಿಂದ ದೇಶಾದ್ಯಂತ ಪ್ರತಿಭಟನೆ ಹೊಸ ‘ಕೈಗಾರಿಕಾ ಸಂಬಂಧಗಳ ಸಂಹಿತೆ’, ‘ಒಎಸ್‌ಎಚ್‌ ಕೋಡ್’ ಸಂಪೂರ್ಣವಾಗಿ ಕಾರ್ಮಿಕ ವಿರೋಧಿ, ಕಂಪನಿಗಳ ಪರ ಎಂದು ಆರೋಪ 300ಕ್ಕಿಂತ ಕಡಿಮೆ ಕಾರ್ಮಿಕರಿರುವ ಕಾರ್ಖಾನೆಗಳಿಗೆ ಸರ್ಕಾರದ ಅನುಮತಿಯಿಲ್ಲದೆ ಮುಚ್ಚಲು, ಲೇ-ಆಫ್ ಮಾಡಲು ಅವಕಾಶ ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ನಾಲ್ಕು ಕಾರ್ಮಿಕ ಸಂಹಿತೆಗಳು ಕಂಪನಿಗಳ ಪರವಾಗಿದ್ದು, ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಆರೋಪಿಸಿ ದೇಶದ ಪ್ರಮುಖ 10 ಕಾರ್ಮಿಕ ಸಂಘಟನೆಗಳು ಸರ್ಕಾರದ ವಿರುದ್ಧ ಸಮರ ಸಾರಿವೆ. ವಿವಾದಾತ್ಮಕ ‘ಕೈಗಾರಿಕಾ ಸಂಬಂಧಗಳ ಸಂಹಿತೆ’ಯನ್ನು ಬದಲಾಯಿಸಲೇಬೇಕೆಂದು ಒತ್ತಾಯಿಸಿ ನವೆಂಬರ್ 26 ರಂದು ಬೃಹತ್ ಪ್ರತಿಭಟನೆಗೆ ಕರೆ ನೀಡಿವೆ.

ಹಿಂದ್ ಮಜ್ದೂರ್ ಸಭಾ (ಎಚ್‌ಎಂಎಸ್‌) ಸೇರಿದಂತೆ ಹಲವು ಸಂಘಟನೆಗಳು, ಹೊಸ ಕಾನೂನಿನ ಅಡಿಯಲ್ಲಿ ಕಾರ್ಮಿಕರ ಹಕ್ಕುಗಳ ಕಡಿತದ ಬಗ್ಗೆ ಆತಂಕ ವ್ಯಕ್ತಪಡಿಸಿವೆ. “ಕೈಗಾರಿಕಾ ಸಂಬಂಧಗಳ ಸಂಹಿತೆ-2020 ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ (ಒಎಸ್‌ಎಚ್‌) ಸಂಹಿತೆ-2020 ರ ಕೆಲವು ನಿಯಮಗಳು ಸಂಪೂರ್ಣವಾಗಿ ಕಾರ್ಮಿಕ ವಿರೋಧಿಯಾಗಿವೆ. ಇವುಗಳನ್ನು ರದ್ದುಪಡಿಸಿ, ಮರು ಕರಡು ರಚಿಸಬೇಕಿದೆ,” ಎಂದು ಎಚ್‌ಎಂಎಸ್ ಪ್ರಧಾನ ಕಾರ್ಯದರ್ಶಿ ಹರ್ಭಜನ್ ಸಿಂಗ್ ಆಗ್ರಹಿಸಿದ್ದಾರೆ.

ಹಿಂದಿನ ಕಾನೂನಿನ ಪ್ರಕಾರ, 100ಕ್ಕಿಂತ ಹೆಚ್ಚು ಕೆಲಸಗಾರರಿರುವ ಕಾರ್ಖಾನೆಗಳನ್ನು ಮುಚ್ಚಲು ಅಥವಾ ನೌಕರರನ್ನು ವಜಾ ಮಾಡಲು ಸರ್ಕಾರದ ಪೂರ್ವಾನುಮತಿ ಕಡ್ಡಾಯವಾಗಿತ್ತು. ಆದರೆ, ಹೊಸ ಐಆರ್‌ಸಿ ಅಡಿಯಲ್ಲಿ ಈ ಮಿತಿಯನ್ನು 300 ಕಾರ್ಮಿಕರಿಗೆ ಏರಿಸಲಾಗಿದೆ. ಇದರಿಂದ 300ಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಸಣ್ಣ ಕೈಗಾರಿಕೆಗಳು ಸರ್ಕಾರದ ಅನುಮತಿಯಿಲ್ಲದೆಯೇ ಕಾರ್ಮಿಕರನ್ನು ಕೆಲಸದಿಂದ ತೆಗೆಯುವ ಅಥವಾ ಘಟಕ ಮುಚ್ಚುವ ಅಧಿಕಾರ ಪಡೆದಿವೆ. ಇದು ಕಾರ್ಮಿಕರ ಭದ್ರತೆಗೆ ಧಕ್ಕೆ ತಂದಿದೆ ಎಂಬುದು ಪ್ರತಿಭಟನಾಕಾರರ ಪ್ರಮುಖ ವಾದ.

4 Labour Codes: 40 ಕೋಟಿ ಜನಕ್ಕೆ ಮೋದಿ ಬಂಪರ್‌! 1 ವರ್ಷಕ್ಕೇ ಗ್ರಾಚ್ಯುಟಿ, ಡೆಲಿವರಿ ಬಾಯ್ಸ್‌ಗೂ PF, ESI! ಜೊತೆಗೆ, ಮುಷ್ಕರದ ಹಕ್ಕಿನ ಮೇಲೂ ಕಡಿವಾಣ ಹಾಕಲಾಗಿದ್ದು, ಯಾವುದೇ ಮುಷ್ಕರಕ್ಕೂ ಮುನ್ನ 60 ದಿನಗಳ ನೋಟಿಸ್ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಇದು ಪ್ರತಿಭಟಿಸುವ ಸ್ವಾತಂತ್ರ್ಯವನ್ನೇ ಕಸಿದುಕೊಂಡಂತಾಗಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ರಾಜಕೀಯ ಪ್ರೇರಿತ ಆರೋಪ ಮತ್ತೊಂದೆಡೆ, ಕಾರ್ಮಿಕ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಈ ಪ್ರತಿಭಟನೆಗಳನ್ನು ‘ರಾಜಕೀಯ ಪ್ರೇರಿತ’ ಎಂದು ಕರೆದಿದ್ದಾರೆ. ಭಾರತೀಯ ಮಜ್ದೂರ್ ಸಂಘ ಸೇರಿದಂತೆ ಇತರೆ 14 ಸಂಘಟನೆಗಳು ಈ ಹೊಸ ಸುಧಾರಣೆಗಳನ್ನು ಸ್ವಾಗತಿಸಿದ್ದು, ಇವು ‘ವಿಕಸಿತ್ ಭಾರತ್ 2047’ರ ಕನಸಿಗೆ ಪೂರಕವಾಗಿವೆ ಎಂದು ಬಣ್ಣಿಸಿವೆ.

ಆದರೆ ಎಐಟಿಯುಸಿ, ಸಿಐಟಿಯು, ಐಎನ್‌ಟಿಯುಸಿ ಸೇರಿದಂತೆ ಎಡಪಂಥೀಯ ಮತ್ತು ಕಾಂಗ್ರೆಸ್ ಬೆಂಬಲಿತ ಸಂಘಟನೆಗಳು ಇದನ್ನು ‘ಕಾರ್ಮಿಕರ ಮೇಲಿನ ಯುದ್ಧ’ ಎಂದು ಕರೆದು, ಕಾನೂನು ಹಿಂಪಡೆಯುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿವೆ”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...