ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ಮಾತನಾಡುವಂತೆ ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೋ ವೈರಲ್ ವಂಚಕರ ವಿರುದ್ಧ ದೂರು

16

ಬೆಂಗಳೂರು:  ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವಿಡಿಯೋ ವೈರಲ್ ವಂಚಕರ ವಿರುದ್ಧ ದೂರು ಮಲ್ಲೇಶ್ವರಂ ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು ನಿರ್ಮಲಾ ಅವರು ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ಮಾತನಾಡುವಂತೆ ಎಐ ಬಳಸಿ ನಕಲಿ ವಿಡಿಯೋ ಇನ್ಫೋಸಿಸ್ ಸ್ಥಾಪಕ ನಾರಾಯಣಮೂರ್ತಿ ಅವರ ಹೆಸರಿನಲ್ಲೂ ಈ ಹಿಂದೆ ವಂಚನೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಸೈಬರ್‌ ಕ್ರಿಮಿಗಳ ಆಟಾಟೋಪ ಮುಂದುವರಿದಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಡೀಪ್‌ಫೇಕ್‌ ವಿಡಿಯೊ ಸೃಷ್ಟಿಸಿ ವಂಚನೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಲ್ಲೇಶ್ವರಂ ಠಾಣೆ ಪೊಲೀಸರು ಅಪರಿಚಿತರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

”ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾತನಾಡುತ್ತಿರುವ ವಿಡಿಯೊ ಫೇಸ್‌ಬುಕ್‌ನಲ್ಲಿಹರಿದಾಡುತ್ತಿತ್ತು. ಈ ವಿಡಿಯೊ ಪರಿಶೀಲಿಸಿದಾಗ ಕೃತಕ ಬುದ್ಧಿಮತ್ತೆ (ಎಐ) ಬಳಸಿ ನಿರ್ಮಲಾ ಸೀತಾರಾಮನ್‌ ಅವರ ಡೀಪ್‌ಫೇಕ್‌ ವಿಡಿಯೊ ರಚಿಸಲಾಗಿದೆ. ವಿಡಿಯೊದಲ್ಲಿಹಣ ಹೂಡಿಕೆ ಬಗ್ಗೆ ಮಾತನಾಡುತ್ತಿರುವಂತೆ ಬಿಂಬಿಸಲಾಗಿತ್ತು.

ಹೀಗಾಗಿ, ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ,’ಎಂದು ಪೊಲೀಸರು ತಿಳಿಸಿದ್ದಾರೆ. ನ್ಯೂಜಿಲೆಂಡ್‌ ಸಂಸತ್ತಿನಲ್ಲಿ ತನ್ನದೇ ನಗ್ನ ಫೋಟೋ ತೋರಿಸಿದ ಸಂಸದೆ, ಡೀಪ್‌ಫೇಕ್‌ ಸುಳಿಯಿಂದ ಪಾರಾಗಲು ಬರುತ್ತಾ ಕಾನೂನು? ಹೂಡಿಕೆದಾರರೇ ಎಚ್ಚರ ಎಚ್ಚರ ‘ಸೈಬರ್‌ ವಂಚಕರು ಷೇರು ಮಾರುಕಟ್ಟೆ ಹೂಡಿಕೆ ನೆಪದಲ್ಲಿಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ.

ಹಣ ಹೂಡಿಕೆ ಕುರಿತು ಗಣ್ಯರು ಸಲಹೆ ನೀಡುವಂತೆ ನಕಲಿ ವಿಡಿಯೊಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿಹರಿಬಿಡುತ್ತಿದ್ದಾರೆ. ಈ ಹಿಂದೆ ಇನ್ಫೋಸಿಸ್‌ ಸ್ಥಾಪಕ ನಾರಾಯಣಮೂರ್ತಿ ಸೇರಿದಂತೆ ಹಲವರ ಹೆಸರಿನಲ್ಲಿಡೀಪ್‌ಫೇಕ್‌ ವಿಡಿಯೊಗಳು ವೈರಲ್‌ ಆಗಿದ್ದವು. ಇಂತಹ ನಕಲಿ ವಿಡಿಯೊಗಳನ್ನು ಸಾರ್ವಜನಿಕರು ನಂಬಬಾರದು,’ ಎಂದು ಪೊಲೀಸರು ತಿಳಿಸಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...

ಅಲ್ಪಸಂಖ್ಯಾತರ ಸಾಲದ ಬಡ್ಡಿ ಮನ್ನಾ ತುಷ್ಟಿಕರಣದಲ್ಲಿ ತೊಡಗಿಕೊಂಡ ಸರಕಾರದ ವಿರುದ್ಧ:: ಸಿಟಿ ರವಿ ವಾಗ್ದಾಳಿ

“ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಸಿದ್ದರಾಮಯ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು, ಹಿಂದುಳಿದ...