ಸೆನ್ಯಾರ್‌ ಅಬ್ಬರದಿಂದ ಇಂಡೋನೆಷ್ಯಾದಲ್ಲಿ ಭೂಕುಸಿತ

22

ಜಕಾರ್ತ : ಇಂಡೋನೇಷ್ಯಾದಲ್ಲಿ ಸೆನ್ಯಾರ್‌ ಚಂಡಮಾರುತದಿಂದಾಗಿ ಪ್ರವಾಹ ಭೂಕುಸಿತ ಉಂಟಾಗಿ 174 ಜನ ಸಾವು ಭೂಕುಸಿತ ಹಾಗೂ ಪ್ರವಾಹಕ್ಕೆ ಸಿಲುಕಿ ನೂರಾರು ಜನ ನಾಪತ್ತೆ, ಸಾವಿರಾರು ಮನೆಗಳಿಗೆ ಹಾನಿ ಸೆನ್ಯಾರ್‌ ಚಂಡಮಾರುತದ ತೀವ್ರತೆ ಹೆಚ್ಚಾಗುವ ಸಾಧ್ಯತೆ ಎಂದು ಎಚ್ಚರಿಕೆ ನೀಡಿದ ಅಧಿಕಾರಿಗಳು 

ಇಂಡೋನೇಷ್ಯಾದಲ್ಲಿ ಸೆನ್ಯಾರ್‌ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಪ್ರವಾಹ ಉಂಟಾಗಿ ಭಾರಿ ವಿನಾಶವನ್ನೇ ಸೃಷ್ಟಿಸುತ್ತಿದೆ. ಸುಮಾತ್ರಾ ದ್ವೀಪದಲ್ಲಿ ಚಂಡಮಾರುತದಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದಾಗಿ 174 ಮಂದಿ ಸಾವನ್ನಪ್ಪಿದ್ದಾರೆ .

ಇನ್ನೂ ನೂರಾರು ಜನ ನಾಪತ್ತೆಯಾಗಿದ್ದಾರೆ. ಇಂಡೋನೇಷ್ಯಾದಲ್ಲಿ ಸೆನ್ಯಾರ್‌ ಚಂಡಮಾರುತ ಇಂಡೋನೇಷ್ಯಾದ ಮಲಕ್ಕಾ ಜಲಸಂಧಿಯಲ್ಲಿ ಸೆನ್ಯಾರ್‌ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಪರಿಣಾಮವಾಗಿ ಭಾರೀ ಮಳೆಯೊಂದಿಗೆ ತೀವ್ರ ಗಾಳಿ ಮತ್ತು ಅಲೆಗಳನ್ನು ಸೃಷ್ಟಿಸಿದೆ.

ಇದರಿಂದ ಉತ್ತರ ಸುಮಾತ್ರಾ ದ್ವೀಪ ಪ್ರಾಂತ್ಯದಲ್ಲಿ ಇಡೀ ವಾರ ಧಾರಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ನದಿಗಳು ಉಕ್ಕಿ ಹರಿದು, ಪರ್ವತ ಪ್ರದೇಶದ ಗ್ರಾಮಗಳಿಗೆ ನೀರು ನುಗ್ಗಿ, ಜನರನ್ನು ಕೊಚ್ಚಿಕೊಂಡು ಹೋಗಿದೆ. ಸುಮಾರು 3,200 ಕ್ಕೂ ಹೆಚ್ಚು ಮನೆಗಳು ಮತ್ತು ಕಟ್ಟಡಗಳು ಜಲಾವೃತಗೊಂಡಿವೆ.

ಭೂಕುಸಿತದಿಂದ 174 ಜನರು ಸಾವು ಇನ್ನು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ಪ್ರಕಾರ, ಸುಮಾರು 3,000 ಕುಟುಂಬಗಳು ನಿರಾಶ್ರಿತರಾಗಿ ಸರ್ಕಾರಿ ಆಶ್ರಯ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಈ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಉತ್ತರ ಸುಮಾತ್ರಾದಲ್ಲಿ 116 ಮಂದಿ, ಪಶ್ಚಿಮ ಸುಮಾತ್ರಾದಲ್ಲಿ 23 ಜನರು, ಅಖೆ ಪ್ರಾಂತ್ಯದಲ್ಲಿ 25 ಮಂದಿ ಮೃತಪಟ್ಟಿದ್ದಾರೆ. ಇದರ ಜೊತೆಗೆ ಅಖೆ ಮತ್ತು ಪಶ್ಚಿಮ ಸುಮಾತ್ರಾ ಪ್ರಾಂತ್ಯಗಳ ಹಲವು ಭಾಗಗಳಲ್ಲಿ ಸಾವಿರಾರು ಮನೆಗಳು ಸಂಪೂರ್ಣವಾಗಿ ಮುಳುಗಿವೆ.

ಕೆಲವು ಮನೆಗಳು ಛಾವಣಿಯವರೆಗೆ ನೀರಿನಲ್ಲಿ ಮುಳುಗಿವೆ ಎಂದು ಸಂಸ್ಥೆ ಹೇಳಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ! ಸೆನ್ಯಾರ್‌ ಬೆನ್ನಲ್ಲೇ ಡಿಟ್ವಾ ಸೈಕ್ಲೋನ್‌, ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌! ಹೊರಜಗತ್ತಿನ ಸಂಪರ್ಕ ಕಡಿತ ಪಶ್ಚಿಮ ಸುಮಾತ್ರಾದ ವಿಪತ್ತು ತಡೆಗಟ್ಟುವಿಕೆ ಸಂಸ್ಥೆಯ ವರದಿಯ ಪ್ರಕಾರ, 17,000 ಕ್ಕೂ ಹೆಚ್ಚು ಮನೆಗಳು ಪ್ರವಾಹಕ್ಕೆ ತುತ್ತಾಗಿವೆ.

ಇದರಿಂದ ಸುಮಾರು 23,000 ನಿವಾಸಿಗಳು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಗೊಂಡಿದ್ದಾರೆ. ಭತ್ತದ ಗದ್ದೆಗಳು, ಜಾನುವಾರುಗಳು ಮತ್ತು ಸಾರ್ವಜನಿಕ ಸೌಲಭ್ಯಗಳು ನಾಶವಾಗಿವೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ಸೇತುವೆಗಳು ಮತ್ತು ರಸ್ತೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿ, ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಳ್ಳುವಂತೆ ಮಾಡಿವೆ.

ಇಂಡೋನೇಷ್ಯಾದ ಹವಾಮಾನ, ಹವಾಮಾನಶಾಸ್ತ್ರ ಮತ್ತು ಭೂಭೌತಶಾಸ್ತ್ರ ಸಂಸ್ಥೆಯ ಅಚಾಡಿ ಸುಬರ್ಕಾ ರಹಾರ್ಜೊ ಅವರ ಪ್ರಕಾರ, ಈ ತೀವ್ರ ಹವಾಮಾನಕ್ಕೆ ಟ್ರಾಪಿಕಲ್ ಸೈಕ್ಲೋನ್ ‘ಸೆನ್ಯಾರ್’ ಕಾರಣವಾಗಿದೆ. ಇದು ಮಲಕ್ಕಾ ಜಲಸಂಧಿಯಲ್ಲಿ ರೂಪುಗೊಂಡಿತ್ತು. ಚಂಡಮಾರುತ ಸಕ್ರಿಯವಾಗಿರುವವರೆಗೆ ತೀವ್ರ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...