ಮೈಸೂರು :’ಕೆಎಸ್ಆರ್ಟಿಸಿ ವತಿಯಿಂದ ಮೈಸೂರು ಜಿಲ್ಲೆಗೆ 100 ವಿದ್ಯುತ್ ಚಾಲಿತ ಬಸ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದರ ನಿರ್ವಹಣೆಗಾಗಿ ಬನ್ನಿಮಂಟಪದ ಡಿಪೋದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ‘120 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಮೈಸೂರು ಹೊಸ ಗ್ರಾಮಾಂತರ ಬಸ್ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ,’ ಪ್ರಾದೇಶಿಕ ಸಾರಿಗೆ ಇಲಾಖೆಯ 31 ಸೇವೆಗಳನ್ನು ಸಕಾಲದಲ್ಲಿಆನ್ಲೈನ್ ಮೂಲಕ ನೀಡಲಾಗುತ್ತಿದೆ. ಸಾರ್ವಜನಿಕರು ಅನಿವಾರ್ಯವಾಗಿ ಕಚೇರಿಗೆ ಅಲೆದಾಡುವುದು ಬೇಕಿಲ್ಲ
ಮೈಸೂರು ನಗರ ಬೆಳೆಯುತ್ತಿದ್ದು, ಹೊರ ವಲಯದ ರಿಂಗ್ ರೋಡ್ಗಳಲ್ಲಿ ಬಸ್ ಹಾಗೂ ಟ್ರಿಪ್ಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಹೊಸ ಬಸ್ ನಿಲ್ದಾಣಕ್ಕೆ ಸ್ಥಳ ಗುರುತಿಸಲು ಯೋಜಿಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ನಗರದ ಮೈಸೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

”ಕೆಎಸ್ಆರ್ಟಿಸಿ ವತಿಯಿಂದ ಮೈಸೂರು ಜಿಲ್ಲೆಗೆ 100 ವಿದ್ಯುತ್ ಚಾಲಿತ ಬಸ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದರ ನಿರ್ವಹಣೆಗಾಗಿ ಬನ್ನಿಮಂಟಪದ ಡಿಪೋದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ತಗಡೂರಿನಲ್ಲಿ ಬಸ್ ನಿಲ್ದಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ,” ಎಂದರು. ”120 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಮೈಸೂರು ಹೊಸ ಗ್ರಾಮಾಂತರ ಬಸ್ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ,” ಎಂದು ಮಾಹಿತಿ ನೀಡಿದರು.
648 ಕೋಟಿ ರೂ. ರಾಜಸ್ವ ಸಂಗ್ರಹ: ಮೈಸೂರು ವಿಭಾಗದ ವ್ಯಾಪ್ತಿಯ ಪ್ರಾದೇಶಿಕ ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ2025 ಏಪ್ರಿಲ್ನಿಂದ ಅಕ್ಟೋಬರ್ವರೆಗೆ 648 ಕೋಟಿ ರೂ. ರಾಜಸ್ವ ಸಂಗ್ರಹಿಸಲಾಗಿರುತ್ತದೆ. ತಪಾಸಣೆ ವೇಳೆ 15.17 ಕೋಟಿ ರೂ. ದಂಡ ವಸೂಲಿ ಮಾಡಲಾಗಿರುತ್ತದೆ. ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ ನಿಲ್ದಾಣಗಳಲ್ಲಿ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಬಸ್ ನಿಲ್ದಾಣಗಳ ಶೌಚಾಲಯಗಳಿಗೆ ಭೇಟಿ ನೀಡಿ ತಪಾಸಣೆ ನಡಸಬೇಕು,” ಎಂದರು.
”ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ವಾಹನ ಚಾಲನಾ ತರಬೇತಿ ಶಾಲೆಯವರು ಬರುವ ಚಾಳಿಯಿದ್ದು, ಇದಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆ ವಹಿಸಿ,” ಎಂದು ಕಿವಿಮಾತು ಹೇಳಿದರು.

”ಪ್ರಾದೇಶಿಕ ಸಾರಿಗೆ ಇಲಾಖೆಯ 31 ಸೇವೆಗಳನ್ನು ಸಕಾಲದಲ್ಲಿಆನ್ಲೈನ್ ಮೂಲಕ ನೀಡಲಾಗುತ್ತಿದೆ. ಸಾರ್ವಜನಿಕರು ಅನಿವಾರ್ಯವಾಗಿ ಕಚೇರಿಗೆ ಅಲೆದಾಡುವುದು ಬೇಕಿಲ್ಲ. ಸಕಾಲ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ,” ಎಂದರು. ಸಭೆಯಲ್ಲಿ ಅಪರ ಸಾರಿಗೆ ಆಯುಕ್ತೆ ಓಂಕಾರೇಶ್ವರಿ ಅವರು ಮೈಸೂರು ವಿಭಾಗದ ಪ್ರಗತಿಯ ಬಗ್ಗೆ ಸಚಿವರಿಗೆ ವಿವರಿಸಿದರು.
ಜಂಟಿ ಸಾರಿಗೆ ಆಯುಕ್ತ ಹಾಗೂ ಮೈಸೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ್ ಚೌಹಣ್, ಮೈಸೂರು ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಚಂದ್ರ, ಮೈಸೂರು ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಶ್ರೀನಿವಾಸ್, ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.”

Leave a comment