ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಆಯ್ಕೆಯಾದ ರೋಗಿಗೆ  ಶಸ್ತ್ರ ಚಿಕಿತ್ಸೆ ಮಾಡಿ 16 ಸಾವಿರ ರೂ. ಸುಲಿಗೆ

50

ಗಂಗಾವತಿ: ಆಯುಷ್ಮಾನ್‌ ಯೋಜನೆಯಲ್ಲೂ ಸುಲಿಗೆ ! ಆಯುಷ್ಮಾನ್ ಭಾರತ್‌ ಯೋಜನೆ ಒಂದು ವರ್ಷದ ನಂತರ ಹಣ ವಾಪಸ್‌ ನೀಡಿದ ವೈದ್ಯರು ಆಸ್ಪತ್ರೆಯ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು

ಯೋಜನೆಯಡಿ ಆಯ್ಕೆಯಾದ ರೋಗಿಗಳಿಗೆ ಅಂದಾಜು 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಬೇಕು. ಸಂಪೂರ್ಣ ವೆಚ್ಚವನ್ನು ಖಾಸಗಿ ಆಸ್ಪತ್ರೆಗಳಿಗೆ ಸರಕಾರ ಭರಿಸಲಿದೆ. ಜಿಲ್ಲೆಯ ಖಾಸಗಿ ಆಸ್ಪತ್ರೆಯ ವೈದ್ಯರು ಯೋಜನೆಯಡಿ ಚಿಕಿತ್ಸೆ ನೀಡಿ ಸರಕಾರದಿಂದ ಹಣ ಪಡೆದುಕೊಳ್ಳುವುದರ ಜತೆಗೆ ಜನರಿಂದ ಕೂಡ ಸುಲಿಗೆ ಮಾಡಲು ಮುಂದಾಗುತ್ತಿದ್ದಾರೆ.

ಸರಕಾರಿ ಆಸ್ಪತ್ರೆಯಲ್ಲಿ ತಜ್ಞರ ಕೊರತೆಯಿಂದ ಶಸ್ತ್ರ ಚಿಕಿತ್ಸೆ ಸಾಧ್ಯವಾಗದೆ ಇರುವ ಸಮಯದಲ್ಲಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿ ಮಾಡಲಾಗಿದೆ. ಆದರೆ, ಈ ಯೋಜನೆಯಿಂದ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಯ ವೈದ್ಯರು ಹಣ ಮಾಡಲು ಮುಂದಾಗುತ್ತಿರುವ ಪ್ರಸಂಗಗಳು ನಡೆಯುತ್ತಿವೆ.

ಇಂತಹ ಪ್ರಕರಣ ಸದ್ಯ ಗಂಗಾವತಿ ನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಆಯ್ಕೆಯಾಗಿರುವ ರೋಗಿಗೆ ಕಿಡ್ನಿ ಸ್ಟೋನ್‌ ಶಸ್ತ್ರ ಚಿಕಿತ್ಸೆ ಮಾಡಿ 16 ಸಾವಿರ ರೂ. ಸುಲಿಗೆ.

ಗಂಗಾವತಿ ನಗರದ ಆಶಾ ಕಾರ್ಯಕರ್ತೆ ಲಲಿತಾ ಅವರು ಕಿಡ್ನಿ ಸ್ಟೋನ್‌ ಸಮಸ್ಯೆಯಿಂದ ಬಳಲುತ್ತಿದ್ದರು. ಸರಕಾರಿ ಉಪವಿಭಾಗದ ಆಸ್ಪತ್ರೆಯಲ್ಲಿ ತಜ್ಞರು ಕೊರತೆಯಿಂದ ನಗರದ ಕಂಪ್ಲಿ ರಸ್ತೆಯಲ್ಲಿರುವ ಮಲ್ಲಿಕಾರ್ಜುನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಆಯುಷ್ಮಾನ್‌ ಭಾರತ್‌ ಯೋಜನೆಯಡಿ 2024ರ ಸೆ.7ರಂದು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ರೋಗಿಯ ಕಡೆಯವರಿಂದ ಮೂರು ಹಂತದಲ್ಲಿ 16 ಸಾವಿರ ರೂ. ಪಡೆದುಕೊಂಡಿದ್ದಾರೆ. ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಆದರೂ ರೋಗಿಕಡೆಯವರಿಂದ ಹಣ ಪಡೆದುಕೊಂಡಿರುವುದು ಬೆಳಕಿಗೆ ಬಂದಿದೆ

ತಪ್ಪು ಒಪ್ಪಿಕೊಂಡರು: ಆಯುಷ್ಮಾನ್‌ ಭಾರತ ಯೋಜನೆಯಡಿ ಹಣ ಪಡೆದಿರುವ ಕುರಿತು ರೋಗಿಯ ಸಂಬಂಧಿಕರು ಆಸ್ಪತ್ರೆಯ ವೈದ್ಯ, ಸಿಬ್ಬಂದಿ ಮೇಲೆ ದೂರು ನೀಡಿದ್ದಾರೆ. ಆಗಿನ ಡಿಸಿ ನಳಿನ್‌ ಅತುಲ್‌ ಅವರು ವೈದ್ಯರು ಹಾಗೂ ಸಿಬ್ಬಂದಿ ವಿಚಾರಿಸಿದಾಗ ಸತ್ಯ ಒಪ್ಪಿಕೊಳ್ಳದೆ ಸುಳ್ಳು ಎಂದು ವಾದಿಸಿದ್ದಾರೆ. ಸತತ ಹೀಗೆ 4 ಬಾರಿ ವಿಚಾರಣೆಯಲ್ಲೂ ಸತ್ಯ ಒಪ್ಪಿಕೊಳ್ಳದೆ ಆಶಾ ಕಾರ್ಯಕರ್ತೆ ಹಣ ನೀಡಿಲ್ಲ ಎಂದು ವಾದ ಮಾಡಿ ಹೋಗಿದ್ದಾರೆ.

ಆಶಾ ಕಾರ್ಯಕರ್ತೆ ಹೋರಾಟ ಕೈಬಿಡದೆ ಒಂದು ವರ್ಷಗಳ ಕಾಲ ಹೋರಾಟ ನಡೆಸಿದ್ದಾರೆ. ಕಳೆದ ವಾರ ಡಿಸಿ ಡಾ.ಸುರೇಶ ಇಟ್ನಾಳ ಅವರು ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯನನ್ನು 5ನೇ ಬಾರಿ ವಿಚಾರಣೆಗೆ ಕರೆಸಲಾಗಿದೆ. ಸತ್ಯ ಒಪ್ಪಿಕೊಳ್ಳದೆ ಇದ್ದಾಗ ಪ್ರಕರಣ ದಾಖಲು ಮಾಡಿ, ತನಿಖೆ ನಡೆಯಲು ಪೊಲೀಸರಿಗೆ ಮಾಹಿತಿ ನೀಡಲು ಮುಂದಾಗಿದ್ದಾರೆ. ಭಯಗೊಂಡು ಆಸ್ಪತ್ರೆಯ ಸಿಬ್ಬಂದಿ ಹಣ ಪಡೆದುಕೊಂಡಿರುವುದು ಸತ್ಯ ಎಂದು ಡಿಸಿ ಮುಂದೆ ಒಪ್ಪಿಕೊಂಡಿದ್ದಾರೆ.

ಶಿಸ್ತು ಕ್ರಮಕ್ಕೆ ಡಿಸಿ ಸೂಚನೆ: ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ಪಡೆದ ಅರ್ಹ ರೋಗಿಯಿಂದ ವಸೂಲಿ ಮಾಡಿರುವ 16 ಸಾವಿರ ರೂ. ವಾಪಸ್‌ ನೀಡುವಂತೆ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ ಅವರು ಮಲ್ಲಿಕಾರ್ಜುನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಂಬಂಧಿಸಿದ ವೈದ್ಯರಿಗೆ ನ.27ರಂದು ಸೂಚನೆ ನೀಡಿದ್ದಾರೆ. ಒಂದು ವೇಳೆ ನಿಗದಿತ ಸಮಯದಲ್ಲಿ ಹಣ ಹಿಂತಿರುಗಿಸದಿದ್ದರೆ ಆಸ್ಪತ್ರೆ ವಿರುದ್ಧ ಕೆಪಿಎಂಇ ಕಾಯಿದೆ ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶಿಸಿದ್ದಾರೆ.

ಕಿಡ್ನಿ ಸ್ಟೋನ್‌ ಶಸ್ತ್ರಚಿಕಿತ್ಸೆಗಾಗಿ ಮಲ್ಲಿಕಾರ್ಜುನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋಗಿದ್ದ ಸಮಯದಲ್ಲಿವೈದ್ಯರು ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಶಸ್ತ್ರಚಿಕಿತ್ಸೆ ನೀಡಿದ್ದಾರೆ. ಅಲ್ಲದೇ ಪ್ರತ್ಯೇಕವಾಗಿ 16 ಸಾವಿರ ರೂ. ಕಟ್ಟಿಸಿಕೊಂಡಿದ್ದಾರೆ. ಹಣ ವಾಪಸ್‌ ನೀಡುವಂತೆ ಒಂದು ವರ್ಷದಿಂದ ಹೋರಾಟ ಮಾಡಿದ ಫಲವಾಗಿ ಈಗ ವೈದ್ಯರು ಚೆಕ್‌ ಮೂಲಕ ಹಣ ವಾಪಸ್‌ ನೀಡಿದ್ದಾರೆ ಎಂದಿದ್ದಾರೆ ಲಲಿತಾ, ಆಶಾ ಕಾರ್ಯಕರ್ತೆ, ಗಂಗಾವತಿ.”

Leave a comment

Leave a Reply

Your email address will not be published. Required fields are marked *

Related Articles

ವರ್ಷಾಂತ್ಯದಲ್ಲಿ ಗ್ರಾಮ ಪಂಚಾಯತ್ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ ::ಸಚಿವ ಪ್ರಿಯಾಂಕ ಖರ್ಗೆ

ಕಲಬುರಗಿ: ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಮೂರು ವರ್ಷಗಳ ಬಳಿಕ ಇಂದು ಶೃಂಗೇರಿ ನೂತನ ಶಾಸಕರಾಗಿ ಡಿ ಎನ್ ಜೀವರಾಜ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕೊನೆಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಇಂದು ಡಿ ಎನ್ ಜೀವರಾಜ್ ಪ್ರಮಾಣ ವಚನ...

ಶೃಂಗೇರಿ ಮರುಮತ ಎಣಿಕೆ ಪ್ರಕರಣ ಅಂಚೆ ಮತಗಳಲ್ಲಿ ಅಕ್ರಮ ಆರೋಪ ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ  ಎಫ್ಐಆರ್ ದಾಖಲು

“ಚಿಕ್ಕಮಗಳೂರು ಶೃಂಗೇರಿ ಮತ ಎಣಿಕೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಅಂಚೆ ಮತಗಳಲ್ಲಿ ಅಕ್ರಮ ಆರೋಪದ...