ಡಿಸೆಂಬರ್ 24 – 25 ರಂದು  ವಿ ಶೇಷ ರೈಲು ಸಂಚಾರ : ಬೆಂಗಳೂರು – ಬೀದರ್

30

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬದ ಸಂದರ್ಭದಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು – ಬೀದರ್ ನಡುವೆ ವಿಶೇಷ ರೈಲು ಓಡಿಸಲಾಗುತ್ತಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಿಂದ ಮಾಹಿತಿ ನೀಡಲಾಗಿದೆ. “ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಾಗುತ್ತಿದೆ ” ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಕ್ರಿಸ್‌ಮಸ್‌ ಹಬ್ಬದ ಸಂದರ್ಭದಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ವಿಶೇಷ ರೈಲು. ಬೆಂಗಳೂರು – ಬೀದರ್ ನಡುವೆ ವಿಶೇಷ ರೈಲು ಓಡಿಸಲಾಗುತ್ತಿದೆ. ಡಿಸೆಂಬರ್ 24 ಹಾಗೂ 25 ರಂದು ಈ ವಿಶೇಷ ರೈಲು ಸಂಚಾರ.

ಬೆಂಗಳೂರು – ಬೀದರ್ ರೈಲಿನ ವೇಳಾಪಟ್ಟಿ ಏನು? ಡಿಸೆಂಬರ್ 24 ಬುಧವಾರ ರೈಲು ಸಂಖ್ಯೆ 06291 ಬೆಂಗಳೂರು ಕಂಟೋನ್ಮೆಂಟ್‌ – ಬೀದರ್ ವಿಶೇಷ ಎಕ್ಸ್ ಪ್ರೆಸ್ ಬೆಂಗಳೂರಿನಿಂದ ರಾತ್ರಿ 9:15ಕ್ಕೆ ಹೊರಟು, ಮರುದಿನ ಬೆಳಿಗ್ಗೆ 11:30ಕ್ಕೆ ಬೀದರ್ ತಲುಪಲಿದೆ.

ಮತ್ತೊಂದೆಡೆ, ಮರಳಿ ಸಂಚರಿಸುವ 06292 ಬೀದರ್ – ಬೆಂಗಳೂರು ಕ್ಯಾಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 25 ಗುರುವಾರ ಬೀದರ್‌ನಿಂದ ಮಧ್ಯಾಹ್ನ 1:00ಕ್ಕೆ ಹೊರಟು, ಮರುದಿನ ಬೆಳಗಿನ ಜಾವ 4:00ಕ್ಕೆ ಬೆಂಗಳೂರು ಕ್ಯಾಂಟ್ ತಲುಪಲಿದೆ.

ಕರ್ನಾಟಕದ ಬುಲೆಟ್‌ ರೈಲಿಗೆ ಮತ್ತಷ್ಟು ವೇಗ! ನನಸಿನತ್ತ ಮೈಸೂರು – ಚೆನ್ನೈ ನಡುವೆ ಅತಿ ವೇಗದ ರೈಲು ಯೋಜನೆ! ಎರಡೂವರೆ ತಾಸು ಪ್ರಯಾಣ! ಎಲ್ಲೆಲ್ಲಿ ನಿಲುಗಡೆ? ಮಾರ್ಗ ಮಧ್ಯದಲ್ಲಿ, ಈ ವಿಶೇಷ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಈ ವಿಶೇಷ ರೈಲು 22 ಬೋಗಿಗಳನ್ನು ಒಳಗೊಂಡಿರಲಿದೆ, ಇದರಲ್ಲಿ ಒಂದು ಎಸಿ 2-ಟೈರ್, ಎರಡು ಎಸಿ 3-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ಆರು ಜನರಲ್ ಸೆಕೆಂಡ್ ಕ್ಲಾಸ್, ಮತ್ತು ಎರಡು ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ”

Leave a comment

Leave a Reply

Your email address will not be published. Required fields are marked *

Related Articles

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು....

ಆರು ವರ್ಷಗಳಲ್ಲಿ ಖಾಸಗಿ ಬಸ್ ಅಪಘಾತ ಹೆಚ್ಚುತ್ತಿರುವ ಪ್ರಕರಣ  ಖಾಸಗಿ ಬಸ್‌ಗಳಿಂದ ಒಟ್ಟು 3,823 ಅಪಘಾತ

“ಮೈಸೂರು: ಕಳೆದ ಆರು ವರ್ಷಗಳಲ್ಲಿ ಖಾಸಗಿ ಬಸ್ ಅಪಘಾತಗಳ ಪ್ರಮಾಣ ಹೆಚ್ಚುತ್ತಿರುವುದು ಕರ್ನಾಟಕದಲ್ಲಿ ರಸ್ತೆ ಸುರಕ್ಷತೆ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...