ಉಡುಪಿ ಅತ್ಯಾಚಾರ ಕೊಲೆ ಯತ್ನಪ್ರಕರಣದ ಆರೋಪಿಗು ಹಿಂದೂ ಜಾಗರಣ ವೇದಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಚಾಲಕ ರಾಜೇಶ್ ಉಚ್ಚಿಲ

ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ ವಿಚಾರವಾದ ಯುವತಿಯ ಅತ್ಯಾಚಾರಗೈದು ಕೊಲೆ ಯತ್ನ ಆರೋಪದಡಿ ಬಂಧಿತನಾಗಿರುವ ಪೆರ್ಡೂರಿನ ಪ್ರದೀಪ್ ಪೂಜಾರಿಗೂ ಹಿಂದು ಜಾಗರಣ ವೇದಿಕೆಗೂ ಯಾವುದೇ ಸಂಬಂಧವಿರುವುದಿಲ್ಲವೆಂದು ಉಡುಪಿ ಜಿಲ್ಲಾ ಹಿಂದು ಜಾಗರಣ ವೇದಿಕೆ ಸ್ಪಷ್ಟಪಡಿಸುತ್ತದೆ. (ನವೆಂಬರ್ 30ರಂದು ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ)

ಹಿಂದೂ ಸಂಘಟನೆಗಳ ವಿರೋಧಿ ಮನಸ್ಥಿತಿಯುಳ್ಳ ಯಾರೋ ಇದನ್ನು ಉದ್ದೇಶ ಪೂರ್ವಕವಾಗಿಯೇ ಮಾಧ್ಯಮಗಳಲ್ಲಿ ಪ್ರಕಟವಾಗುವ ಹಾಗೆ ಮಾಡಿದ್ದಾರೆ. ಇದು ಅಕ್ಷಮ್ಯ. ಈತ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ ಅಲ್ಲದಿದ್ದರೂ ದುರುದ್ದೇಶ ಪೂರ್ವಕವಾಗಿಯೇ ಇಂತಹ ಹೇಳಿಕೆಗಳನ್ನು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟಿಸಿರುವುದನ್ನು ಹಿಂದು ಜಾಗರಣ ವೇದಿಕೆ ಬಲವಾಗಿ ಖಂಡಿಸುತ್ತದೆ ಅಷ್ಟೇ ಅಲ್ಲದೆ ಇಂತಹ ಹೇಳಿಕೆಗಳನ್ನು ಪ್ರಕಟಿಸದಂತೆ ಆಗ್ರಹಪಡಿಸುತ್ತದೆ. ಎಂದು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕರಾದ ರಾಜೇಶ್ ಉಚ್ಚಿಲರವರು ತಿಳಿಸಿರುತ್ತಾರೆ.
Leave a comment