ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ :   ಕಾಡಿನಲ್ಲಿ ಐದು ತಿಂಗಳಿನಿಂದ ಅನಾಥವಾದ ಅರ್ಜುನನ ಪುತ್ಥಳಿ ಶೀಘ್ರ ಲೋಕಾರ್ಪಣೆಗೆ ಸ್ಥಳೀಯರ ಒತ್ತಾಯ

46

ಹಾಸನ :  2023ರ ಡಿಸೆಂಬರ್ 4ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕಾದಾಡಿ ಮಡಿದ  ದಸರಾ ಆನೆ ಕ್ಯಾಪ್ಟನ್ ಅರ್ಜುನನಿಗೆ ಸ್ಮಾರಕ ನಿರ್ಮಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಪ್ರಾಜೆಕ್ಟ್‌ಗೆ ಅನುಮೋದನೆ ನೀಡಿತ್ತು. ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆಯ ಅರಣ್ಯದಲ್ಲಿ ಹುತಾತ್ಮ ಕಾಡಾನೆ ಅರ್ಜುನನ ಸ್ಮಾರಕ ನಿರ್ಮಾಣ ಪೂರ್ಣಗೊಂಡಿದ್ದು, ಈಗ ಉದ್ಘಾಟನೆಗಾಗಿ ಸ್ಥಳೀಯರು ಸರ್ಕಾರಕ್ಕೆ  ಒತ್ತಾಯಿಸಿದ್ದಾರೆ.

ಅರ್ಜುನನ ಸ್ಮಾರಕದಲ್ಲಿ ಮೂಲ ಸೌಕರ್ಯಗಳ ಕೊರತೆ ಸ್ಥಳೀಯರು 5 ಕೋಟಿ ರೂ. ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಿಸಬೇಕೆಂದು ಆಗ್ರಹಿಸಿದ್ದರು. ಸರ್ಕಾರ ಮೊದಲ ಹಂತದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಶುರುಮಾಡಿತ್ತು.

ಇದೀಗ ಮೂಲ ಸೌಲಭ್ಯಗಳ ಕೊರತೆ ಇದ್ದರೂ ಸ್ಮಾರಕ ಉದ್ಘಾಟನೆಗೆ ಸಿದ್ದವಾಗಿದೆ. ಡಿಸೆಂಬರ್ 6 ರಂದು ಹಾಸನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸ್ಮಾರಕ ಲೋಕಾರ್ಪಣೆ ಮಾಡಬೇಕೆಂಬ ಆಗ್ರಹ ಹೊರಹೊಮ್ಮಿದೆ.

ಅರ್ಜುನ ಹುತಾತ್ಮನಾಗಿ ಎರಡು ವರ್ಷ ಪೂರ್ತಿಯಾಗುತ್ತಿರುವುದರಿಂದ ಪುತ್ಥಳಿಯ ಉದ್ಘಾಟನೆ ವಿಳಂಬವಾಗಬಾರದೆಂದು ಸ್ಥಳೀಯರು ಹೇಳುತ್ತಿದ್ದಾರೆ. 10 ತಿಂಗಳ ಹಿಂದೆಯೇ ತಯಾರಾಗಿರುವ ಪುತ್ಥಳಿ ದಕ್ಷಿಣ ಕನ್ನಡ ಮೂಲದ ಶಿಲ್ಪಿ ಧನಂಜಯ್ ಪಡು ಅವರ ತಂಡ 10 ತಿಂಗಳ ಹಿಂದೆಯೇ 9.8 ಅಡಿ ಎತ್ತರ, 12.4 ಅಡಿ ಉದ್ದದ ಅರ್ಜುನನ ಪುತ್ಥಳಿ ನಿರ್ಮಾಣ ಪೂರ್ಣಗೊಳಿಸಿದೆ.

ಅರ್ಜುನನ ಸಮಾದಿ ಮೇಲೆಯೇ ಮೂರ್ತಿಯನ್ನು ನಿಲ್ಲಿಸಲಾಗಿದೆ. ಸರ್ಕಾರ ಇದುವರೆಗೆ 50 ಲಕ್ಷ ರೂ. ವೆಚ್ಚದಲ್ಲಿ ಸ್ಮಾರಕದ ಪ್ರಮುಖ ಭಾಗಗಳನ್ನು ನಿರ್ಮಿಸಿದ್ದು, ಇನ್ನೂ ಶೌಚಾಲಯ, ವಿಶ್ರಾಂತಿ ಗೃಹ, ಭದ್ರತಾ ಸಿಬ್ಬಂದಿ ಕೊಠಡಿ ಸೇರಿದಂತೆ ಹಲವಾರು ಮೂಲ ಸೌಲಭ್ಯಗಳು ಬಾಕಿ ಇವೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾತನಾಡಿರುವ ಶಾಸಕ ಸಿಮೆಂಟ್ ಮಂಜು, ಅರ್ಜುನ ಈ ದೇಶದ ಆಸ್ತಿ. ಅದಕ್ಕೆ ಗೌರವ ಇದ್ದರೆ ಸರ್ಕಾರ ಶೀಘ್ರ ಸ್ಮಾರಕ ಉದ್ಘಾಟನೆ ಮಾಡಬೇಕು. ಕಂಚಿನ ಪ್ರತಿಮೆ ಬೇಡಿಕೆ ಇದ್ದರೂ ಫೈಬರ್ ಮೂರ್ತಿ ನಿರ್ಮಾಣವಾಗಿದೆ. ಈ ವಿಷಯವನ್ನು ಅರಣ್ಯ ಸಚಿವರ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.”

Leave a comment

Leave a Reply

Your email address will not be published. Required fields are marked *

Related Articles

ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಬಸನಗೌಡ ಪಾಟೀಲ್ ಯತ್ನಾಳ್

“ಬೆಂಗಳೂರು: ಕರ್ನಾಟಕದಲ್ಲಿ ಜನರ ಭಾವನೆಗಳನ್ನು ಗುರುತಿಸಲಾಗದಷ್ಟು ಬಿಜೆಪಿ ಹೈಕಮಾಂಡ್ ದುರ್ಬಲವಾಗಿದೆ ಎಂದು ನನಗನ್ನಿಸುತ್ತದೆ ಎಂದು ಬಸನಗೌಡ...

ಮೂರು ವರ್ಷಗಳ ಬಳಿಕ ಇಂದು ಶೃಂಗೇರಿ ನೂತನ ಶಾಸಕರಾಗಿ ಡಿ ಎನ್ ಜೀವರಾಜ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕೊನೆಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಇಂದು ಡಿ ಎನ್ ಜೀವರಾಜ್ ಪ್ರಮಾಣ ವಚನ...

ಶೃಂಗೇರಿ ಮರುಮತ ಎಣಿಕೆ ಪ್ರಕರಣ ಅಂಚೆ ಮತಗಳಲ್ಲಿ ಅಕ್ರಮ ಆರೋಪ ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ  ಎಫ್ಐಆರ್ ದಾಖಲು

“ಚಿಕ್ಕಮಗಳೂರು ಶೃಂಗೇರಿ ಮತ ಎಣಿಕೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಅಂಚೆ ಮತಗಳಲ್ಲಿ ಅಕ್ರಮ ಆರೋಪದ...

52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು, ನೂತನ ಶಾಸಕರಾಗಿ ಘೋಷಣೆ..

ಬೆಂಗಳೂರು: ಹೈಕೋರ್ಟ್‌ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ...