ದೆಹಲಿ : ಸಂಚಾರ್ ಸಾಥಿ ಅಪ್ಲಿಕೇಷನ್ ಕಡ್ಡಾಯವಲ್ಲ ಬೇಡವಾದರೆ ಮೊಬೈಲ್ನಿಂದ ಡಿಲೀಟ್ ಮಾಡಬಹುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದರು. ಇದೀಗ ಸಾರ್ವಜನಿಕ ಸಲಹೆಗಳು ಮತ್ತು ಪ್ರತಿಕ್ರಿಯೆಗಳ ಆಧಾರದ ಮೇಲೆ ಈ ನಿಯಮವನ್ನು ತೆಗೆದು ಹಾಕಲಾಗಿದೆ ಎಂದು ಹೇಳಿದ್ದಾರೆ.
ತೀವ್ರ ವಿರೋಧ ಬೆನ್ನಲ್ಲೇ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ ನಿರ್ಧಾರ ವಾಪಾಸ್ ಪಡೆದ ಕೇಂದ್ರ ಕೇಂದ್ರ ಸರ್ಕಾರವು ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಮೊಬೈಲ್ಗಳಲ್ಲಿ ಪೂರ್ವ-ಸ್ಥಾಪನೆ ಮಾಡುವುದನ್ನು ಕಡ್ಡಾಯಗೊಳಿಸುವ ಆದೇಶವನ್ನು ಹಿಂತೆಗೆದುಕೊಂಡಿದೆ.

ಸಾರ್ವಜನಿಕರ ಸಲಹೆ ಮತ್ತು ಪ್ರತಿಕ್ರಿಯೆಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.
ಕಳೆದುಹೋದ ಫೋನ್ಗಳನ್ನು ಟ್ರ್ಯಾಕ್ ಮಾಡಲು ಮತ್ತು ನೈಜತೆಯನ್ನು ಪರಿಶೀಲಿಸಲು ಈ ಅಪ್ಲಿಕೇಶನ್ ಸಹಾಯಕವಾಗಿತ್ತು. ಇನ್ನು ಮುಂದೆ, ಇದು ಕಡ್ಡಾಯವಲ್ಲ ಮತ್ತು ಬೇಡವಾದರೆ ಡಿಲೀಟ್ ಮಾಡಬಹುದು.

ಮಾರಾಟವಾಗುತ್ತಿರುವ ಫೋನ್ಗಳ ನೈಜತೆ ಹಾಗೂ ಕಳೆದುಹೋಗಿರುವ ಫೋನ್ ಅನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುವಂತೆ ಸರ್ಕಾರ ಈ ಅಪ್ಲಿಕೇಷನ್ ಅನ್ನು ಸಿದ್ಧಪಡಿಸಿತ್ತು.
ಆದರೆ ಇದೀಗ ಸಂಚಾರ್ ಸಾಥಿ ಸೈಬರ್ ಸೆಕ್ಯುರಿಟಿ ಅಪ್ಲಿಕೇಶನ್ನ ಪೂರ್ವ-ಸ್ಥಾಪನೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ಸರ್ಕಾರ ಬುಧವಾರ ಹಿಂತೆಗೆದುಕೊಂಡಿದೆ .

Leave a comment