ಡಿ.15 ಬೆಳಗಾವಿ : ರಾಜ್ಯದಾದ್ಯಂತ ಕುರುಬರನ್ನು ಪರಿಶಿಷ್ಟ ಪಂಗಡ ಎಂದು ವರ್ಗೀಕರಿಸಲು ಬೃಹತ್ ಪ್ರತಿಭಟನೆ

28

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರದೇಶ ಕುರುಬ ಎಸ್‌ಟಿ ಹೋರಾಟ ಸಮಿತಿ ಸೇರಿದಂತೆ ಇದರೆ ಹಲವಾರು ಕುರುಬ ಸಮುದಾಯದ ಸಂಘಟನೆಗಳು ತಿಳಿಸಿವೆ.

ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಅವರು ಮಾತನಾಡಿ, ರಾಜ್ಯದ ಎಲ್ಲಾ 30 ಜಿಲ್ಲೆಗಳಿಂದ ಸುಮಾರು 20,000 ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗಾವಿಯೊಂದರಲ್ಲೇ 5 ಲಕ್ಷಕ್ಕೂ ಹೆಚ್ಚು ಕುರುಬರು ಇದ್ದಾರೆ.

ರಾಜ್ಯದಾದ್ಯಂತ ಕುರುಬರನ್ನು ಪರಿಶಿಷ್ಟ ಪಂಗಡ ಎಂದು ವರ್ಗೀಕರಿಸಬೇಕೆಂಬುದು ನಮ್ಮ ಏಕೈಕ ಬೇಡಿಕೆಯಾಗಿದೆ” ಎಂದು ಹೇಳಿದರು. ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ.

ಕೊಡಗು ಮತ್ತು ಬೀದರ್ ಜಿಲ್ಲೆಗಳಲ್ಲಿ, ಕುರುಬರು ಎಸ್‌ಟಿ ಸ್ಥಾನಮಾನ ಮತ್ತು ಮೀಸಲಾತಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ, ಆದರೆ ಉಳಿದ ಭಾಗಗಳಲ್ಲಿ 2A, ಒಬಿಸಿ ವರ್ಗದಲ್ಲಿಯೇ ಉಳಿದಿದ್ದೇವೆ.

ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಸಮುದಾಯವನ್ನು ಎಸ್‌ಟಿ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಎಸ್‌ಸಿ ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.”

Leave a comment

Leave a Reply

Your email address will not be published. Required fields are marked *

Related Articles

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು....

ಆರು ವರ್ಷಗಳಲ್ಲಿ ಖಾಸಗಿ ಬಸ್ ಅಪಘಾತ ಹೆಚ್ಚುತ್ತಿರುವ ಪ್ರಕರಣ  ಖಾಸಗಿ ಬಸ್‌ಗಳಿಂದ ಒಟ್ಟು 3,823 ಅಪಘಾತ

“ಮೈಸೂರು: ಕಳೆದ ಆರು ವರ್ಷಗಳಲ್ಲಿ ಖಾಸಗಿ ಬಸ್ ಅಪಘಾತಗಳ ಪ್ರಮಾಣ ಹೆಚ್ಚುತ್ತಿರುವುದು ಕರ್ನಾಟಕದಲ್ಲಿ ರಸ್ತೆ ಸುರಕ್ಷತೆ...

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ  ಇಂದು ಯುಗಾದಿ ಹಬ್ಬದಂದೇ...

ಕರ್ನಾಟಕ ಉಪಚುನಾವಣಾ ಕಣ  ಏಪ್ರಿಲ್ 9 ಚುನಾವಣೆ ಮೇ 4ಕ್ಕೆ ಫಲಿತಾಂಶ ಪ್ರಕಟ

“ಬೆಂಗಳೂರು: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಉಭಯ...