ಡಿ.15 ಬೆಳಗಾವಿ : ರಾಜ್ಯದಾದ್ಯಂತ ಕುರುಬರನ್ನು ಪರಿಶಿಷ್ಟ ಪಂಗಡ ಎಂದು ವರ್ಗೀಕರಿಸಲು ಬೃಹತ್ ಪ್ರತಿಭಟನೆ

38

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರದೇಶ ಕುರುಬ ಎಸ್‌ಟಿ ಹೋರಾಟ ಸಮಿತಿ ಸೇರಿದಂತೆ ಇದರೆ ಹಲವಾರು ಕುರುಬ ಸಮುದಾಯದ ಸಂಘಟನೆಗಳು ತಿಳಿಸಿವೆ.

ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಅವರು ಮಾತನಾಡಿ, ರಾಜ್ಯದ ಎಲ್ಲಾ 30 ಜಿಲ್ಲೆಗಳಿಂದ ಸುಮಾರು 20,000 ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗಾವಿಯೊಂದರಲ್ಲೇ 5 ಲಕ್ಷಕ್ಕೂ ಹೆಚ್ಚು ಕುರುಬರು ಇದ್ದಾರೆ.

ರಾಜ್ಯದಾದ್ಯಂತ ಕುರುಬರನ್ನು ಪರಿಶಿಷ್ಟ ಪಂಗಡ ಎಂದು ವರ್ಗೀಕರಿಸಬೇಕೆಂಬುದು ನಮ್ಮ ಏಕೈಕ ಬೇಡಿಕೆಯಾಗಿದೆ” ಎಂದು ಹೇಳಿದರು. ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ.

ಕೊಡಗು ಮತ್ತು ಬೀದರ್ ಜಿಲ್ಲೆಗಳಲ್ಲಿ, ಕುರುಬರು ಎಸ್‌ಟಿ ಸ್ಥಾನಮಾನ ಮತ್ತು ಮೀಸಲಾತಿ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ, ಆದರೆ ಉಳಿದ ಭಾಗಗಳಲ್ಲಿ 2A, ಒಬಿಸಿ ವರ್ಗದಲ್ಲಿಯೇ ಉಳಿದಿದ್ದೇವೆ.

ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಸಮುದಾಯವನ್ನು ಎಸ್‌ಟಿ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಎಸ್‌ಸಿ ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.”

Leave a comment

Leave a Reply

Your email address will not be published. Required fields are marked *

Related Articles

ಮೂರು ವರ್ಷಗಳ ಬಳಿಕ ಇಂದು ಶೃಂಗೇರಿ ನೂತನ ಶಾಸಕರಾಗಿ ಡಿ ಎನ್ ಜೀವರಾಜ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕೊನೆಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಇಂದು ಡಿ ಎನ್ ಜೀವರಾಜ್ ಪ್ರಮಾಣ ವಚನ...

ಶೃಂಗೇರಿ ಮರುಮತ ಎಣಿಕೆ ಪ್ರಕರಣ ಅಂಚೆ ಮತಗಳಲ್ಲಿ ಅಕ್ರಮ ಆರೋಪ ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ  ಎಫ್ಐಆರ್ ದಾಖಲು

“ಚಿಕ್ಕಮಗಳೂರು ಶೃಂಗೇರಿ ಮತ ಎಣಿಕೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಅಂಚೆ ಮತಗಳಲ್ಲಿ ಅಕ್ರಮ ಆರೋಪದ...

52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು, ನೂತನ ಶಾಸಕರಾಗಿ ಘೋಷಣೆ..

ಬೆಂಗಳೂರು: ಹೈಕೋರ್ಟ್‌ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು, ಅಧಿಕೃತ ಆದೇಶ ಯೋಗೇಶ್ ಗೌಡ ಕೊಲೆ ಪ್ರಕರಣ ಶಿಕ್ಷೆ ಹಿನ್ನಲೆ

ಬೆಂಗಳೂರು: ಧಾರವಾಡದ ಬಿಜೆಪಿ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ...