ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಬಡಜನರ ಸೇವೆ ಸಹಾಯಾರ್ಥ ಆಂಬುಲೆನ್ಸ್ ಲೋಕಾರ್ಪಣೆ

19

ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ಮಂಗಳೂರು ವತಿಯಿಂದ ಚಿತ್ರಾಪುರ ದುರ್ಗಪರಮೇಶ್ವರಿ ದೇವಸ್ಥಾನದಿಂದ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಪರಮಪಾದದಿಂದ ಮೂಲ ಪಾದದೆಡೆಗೆ ಭಕ್ತಿ ಧರ್ಮದ ನಡೆ ಪಾದಯಾತ್ರೆ ಕಾರ್ಯಕ್ರಮ ನಡೆಯಿತು

ಸಹಸ್ರಾರು ಭಕ್ತರು ಪಾದಯಾತ್ರೆ ಮೂಲಕ ನಡೆಸಿದ ಕೈಂಕರ್ಯ ಸಹಸ್ರಾರು ಮನಸ್ಸು ಗಳನ್ನು ಒಂದು ಗೂಡಿಸುವ ಕ್ಲಾಘನೀಯ ಕಾರ್ಯವಾಗಿದೆ. ಸಮಾಜದ ಅವಶ್ಯಕತೆಗೆ ಅನುಗುಣವಾಗಿ ಆಂಬುಲೆನ್ಸ್ ಸೇವೆ ಸಮಾಜ ಕಟ್ಟುವ ಕೆಲಸವಾಗಿದೆ ಎಂದು ಕೇಮಾರು ಸಾಧನಾಶ್ರಮದ ಶ್ರೀ ಈಶ ವಿಠಲದಾಸ ವಿಠಲ ದಾಸ ಸ್ವಾಮೀಜಿ ಹೇಳಿದರು.

ನಿರಂತರ ಸಮಾಜ ಸೇವೆ ಮಾಡುವ ಮೂಲಕ ಮಂಜಣ್ಣ ಬ್ರಿಗೇಡ್ ಅನುಕರಣೀಯ ಸೇವೆ ಮಾಡಿದೆ. ಸಮಾಜ ಕಟ್ಟುನ ಕಾರ್ಯದೊಂದಿಗೆ ಅಶಕ್ತರಿಗೆ ನೆರವು, ಆಂಬುಲೆನ್ಸ್ ಕೊಡುಗೆ ಶ್ರೇಷ್ಠವಾದುದು.ಎಂದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.

ಶ್ರೀಕ್ಷೇತ್ರ ಬಪ್ಪನಾಡು ದೇವಳದ ಹೊರಾಂಗಣದಲ್ಲಿ ಭಾನುವಾರ ಮಂಜಣ್ಣ ಬ್ರಿಗೇಡ್ ವತಿಯಿಂದ ನಡೆದ ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ ದಿಂದ ಬಪ್ಪನಾಡು ದೇವಳದವರೆಗೆ ಸಾಗಿ ಬಂದ ಸಹಸ್ರಾರು ಭಕ್ತರ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿಅವರು ಮಾತನಾಡಿದರು
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಭಕ್ತಿ ಪ್ರೇಮದ ಸಂಕೀರ್ತನೆಗೆ ಭಗವಂತ ಒಲಿಯುತ್ತಾನೆ.ಧಾರ್ಮಿಕ ಧರ್ಮ, ನಂಬಿಕೆಯ ಕಾರ್ಯ ಶ್ಲಾಘನೀಯ ಎಂದರು.

ಬಪ್ಪನಾಡು ಕ್ಷೇತ್ರದ ಆನುವಂಶಿಕ
. ಮೊಕ್ಷೇಸರ ಹಾಗೂ ಮೂಲ್ಕಿ ಸೀಮೆ ಅರಸರಾದ ಎಂ.ದುಗ್ಗಣ್ಣ ಸಾವಂತರು ಅಧ್ಯಕ್ಷತೆ ವಹಿಸಿ ಶುಭ ಹಾರೈಕೆ ನುಡಿದರು.

ಬಿಜೆಪಿ ಜಿಲ್ಲಾ ಬಿಜೆಪಿ ಪೂರ್ವಾಧ್ಯಕ್ಷ ಸುದರ್ಶನ್, ಗೀತಾ ವೇಣುಗೋಪಾಲ್ ಇಡ್ಕ, ಕಸ್ತೂರಿ ಪಂಜ, ಗಣೇಶ್ ಹೊಸಬೆಟ್ಟು, ಬಾಲಕೃಷ್ಣ ಶೆಟ್ಟಿ ಹೊಸಬೆಟ್ಟುಗುತ್ತು,ಉಡುಪಿ ಶಿವಕುಮಾರ್ ಕರ್ಜೆ
ರತನ್, ಜಯಪ್ರಕಾಶ್ ವಾಮಂಜೂರು, ನಯನಾ ಕೋಟ್ಯಾನ್, ಧರ್ಮೇಂದ್ರ ಗಣೇಶ್ ಪುರ, ಕೇಶವ ಹೊಸಬೆಟ್ಟು ಲೋಕೇಶ್, ಮಂಜಣ್ಣ ಬ್ರಿಗೇಡ್ ಅಧ್ಯಕ್ಷ ರಂಜಿತ್ ಜೆ.ಶೆಟ್ಟಿ ವಸಂತ ಕುಲಾಲ್ ಉಪಸ್ಥಿತರಿದ್ದರು

ಶಾಸಕ ಉಮಾನಾಥ ಕೋಟ್ಯಾನ್ ಪಾದಯಾತ್ರೆಯಲ್ಲಿ ಭಾಗವಹಿಸಿ, ಶುಭಹಾರೈಸಿದರು. ಅನುರಾಗ್ ಕಾರ್ಯಕ್ರಮ ನಿರ್ವಹಿಸಿದರು.ಈ ಸಂದರ್ಭದಲ್ಲಿ
ದಿ.ವೇಣುಗೋಪಾಲ್ಇಡ್ಯ ಸ್ಮರಣಾರ್ಥ ಮಂಜಣ್ಣ ಬ್ರಿಗೇಡ್ ವತಿಯಿಂದ ಸಾರ್ವಜನಿಕ ಸೇವೆಗಾಗಿ ಆಂಬ್ಯುಲೆನ್ಸ್ ಕೊಡುಗೆ ನೀಡಲಾಯಿತು

Leave a comment

Leave a Reply

Your email address will not be published. Required fields are marked *

Related Articles

ಮೈಲಾರ ಲಿಂಗೇಶ್ವರನ ಐತಿಹಾಸಿಕ ಕಾರ್ಣಿಕೋತ್ಸವ – 2026 18 ಅಡಿ ಎತ್ತರದ ಬಿಲ್ಲೇರಿ ನುಡಿದ ದೈವವಾಣಿ

“ವಿಜಯನಗರ: ಉತ್ತರ ಕರ್ನಾಟಕದ ಹಾಗೂ ಕೋಟಿ ಕೋಟಿ ಭಕ್ತರ ನಂಬಿಕೆಯ ಕೇಂದ್ರವಾಗಿರುವ ವಿಜಯನಗರ ಜಿಲ್ಲೆಯ ಹೂವಿನ...

ಬೇಲಿಕೇರಿ ಕಬ್ಬಿಣದ ಅದಿರು ಅಕ್ರಮ ಸಾಗಾಟ ಪ್ರಕರಣ ತಂದೆ ಮಗನಿಗೆ ಮೂರು ವರ್ಷ ಜೈಲು ಶಿಕ್ಷೆ, 52.55ಲಕ್ಷ ದಂಡ ವಿಧಿಸಿದ  ನ್ಯಾಯಾಲಯ

“ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು...

ಇಂಧನ ಖಾತೆ ಕೆಲಸಗಳಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ರಾಜೀನಾಮೆಗೆ ಮುಂದಾದರೆ ಇಂಧನ ಸಚಿವ ಕೆ ಜೆ ಜಾರ್ಜ್

“ಇಂಧನ ಸಚಿವ ಕೆ.ಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೇ, ಈ ವಿಚಾರ ಮಾಧ್ಯಮಗಳಲ್ಲಿ...

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ  ಹೈಕೋರ್ಟ್

“ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್...