ನ್ಯಾಷನಲ್ ಹೆರಾಲ್ಡ್‌ ಕೇಸ್: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಪರ ದೆಹಲಿ ನ್ಯಾಯಾಲಯ ತೀರ್ಪು ಸ್ವಾಗತಾರ್ಹ -ಮಂಜುನಾಥ ಭಂಡಾರಿ

36

ಮಂಗಳೂರು: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ನಿರಾಕರಿಸಿರುವುದನ್ನು ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದಾರೆ. ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಅವರು ಪತ್ರಿಕಾ ಹೇಳಿಕೆ ನೀಡಿದರು

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಮೂರ್ತಿ ವಿಶಾಲ್ ಗೋಗಾನೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇಡಿ ಸಲ್ಲಿಸಿರುವ ಆರೋಪಪಟ್ಟಿ ವಿಚಾರಣೆಗೆ ಅರ್ಹವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇದರಿಂದ ಜನರಿಗೆ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವುಗಳ ಮೇಲೆ ವಿಶ್ವಾಸ ಹೆಚ್ಚಿದೆ. ಕಾಂಗ್ರೆಸ್ ಪಕ್ಷ ನ್ಯಾಯಪರ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಸದಾ ಸತ್ಯ ಮತ್ತು ನ್ಯಾಯದ ಹಾದಿಯಲ್ಲಿ ಮುನ್ನಡೆಯಲಿದೆ ಎಂದು ಭಂಡಾರಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಹೈದರಾಬಾದ್‌: ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂ ವಂಚನೆ ಆರೋಪ ಪ್ರಕರಣ ದಾಖಲು

ಹೈದರಾಬಾದ್: ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ತನ್ನದೇ ಜನಪದ ಮತ್ತು ಸಿನಿಮಾ ಹಾಡುಗಳಿಂದ ಖ್ಯಾತಿಗಳಿಸಿರುವ ಗಾಯಕಿ...

ಪಶ್ಚಿಮ ಬಂಗಾಳ: 1 ಕೋಟಿ ಉದ್ಯೋಗ, ಮಹಿಳೆಯರಿಗೆ 3,000 ರೂ. ಸೇರಿದಂತೆ 6 ಗ್ಯಾರಂಟಿಗಳ ಘೋಷಣೆಗಳೊಂದಿಗೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಕೋಲ್ಕತ್ತಾ: 2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ...

ಮಣಿಪುರದಲ್ಲಿ ಮತ್ತೆ ಹಿಂಸಾಚಾರ 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ ಪೊಲೀಸ್ ಠಾಣೆಗೆ ಬೆಂಕಿ ಪ್ರತಿಭಟನೆ ಸಿಆರ್ ಪಿಎಫ್ ಫೈರಿಂಗ್

ಇಂಫಾlಲ್: ಮಣಿಪುರ ಸರ್ಕಾರ ಐದು ಕಣಿವೆ ಜಿಲ್ಲೆಗಳಲ್ಲಿ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿ ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್...

ಅಸ್ಸಾಂ ಚುನಾವಣೆ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

ಕರ್ನಾಟಕದ ನಂತರ ಕಾಂಗ್ರೆಸ್ ಇದೀಗ ಅಸ್ಸಾಂ ಚುನಾವಣೆಗೂ ಐದು ಗ್ಯಾರಂಟಿಗಳನ್ನು ಘೋಷಿಸಿದ್ದು, ಮಹಿಳೆಯರಿಗೆ ಮಾಸಿಕ ನಗದು...