ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯಲೋಕ, ಪರಿಸರ ಪ್ರೇಮವನ್ನು ಒಳಗೊಂಡ ‘ತೇಜಸ್ವಿ ವಿಸ್ಮಯ’ ಲಾಲ್‌ಬಾಗ್‌ನಲ್ಲಿ ಅನಾವರಣ

37

ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಹಾಗೂ ಓದುಗರ ದೊಡ್ಡ ಬಳಗವನ್ನೇ ಹೊಂದಿರುವ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯಲೋಕ, ಪರಿಸರ ಪ್ರೇಮವನ್ನು ಒಳಗೊಂಡ ‘ತೇಜಸ್ವಿ ವಿಸ್ಮಯ’ ಲಾಲ್‌ಬಾಗ್‌ನಲ್ಲಿ ಅನಾವರಣಗೊಳ್ಳಲಿದೆ !

ತೋಟಗಾರಿಕೆ ಇಲಾಖೆಯು ಲಾಲ್‌ಬಾಗ್‌ನಲ್ಲಿಈ ಬಾರಿ ಗಣರಾಜ್ಯೋತ್ಸವ ಅಂಗವಾಗಿ ನಡೆಯುವ ಫಲಪುಷ್ಪ ಪ್ರದರ್ಶನದಲ್ಲಿಹಿರಿಯ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕುರಿತ ವಸ್ತು ವಿಷಯ (ಥೀಮ್‌) ಆಧರಿಸಿ ಹತ್ತು ದಿನಗಳ ಪ್ರದರ್ಶನ ನಡೆಸಲು ನಿರ್ಧರಿಸಲಾಗಿದೆ.

‘ಪೂಚಂತೇ’ ಎಂದೇ ಹೆಸರಾದ ಪೂರ್ಣಚಂದ್ರ ತೇಜಸ್ವಿ ಅವರು ನಿಸರ್ಗದ ಒಂದು ಭಾಗವಾಗಿ ಬದುಕಿದವರು. ಹೀಗಾಗಿ, ಗಾಜಿನ ಮನೆಯಲ್ಲಿ ಬೆಟ್ಟದ ಮಾದರಿಯಲ್ಲಿ ನಿಸರ್ಗದ ಪ್ರತಿರೂಪ ನಿರ್ಮಿಸಲಾಗುವುದು. ನಿಸರ್ಗದತ್ತವಾಗಿ ತೇಜಸ್ವಿಯವರ ಮುಖ ಕಾಣುವಂತೆ ಮಾಡಿ, ಅದರ ಮಧ್ಯೆ ಜಲಪಾತ, ಝರಿಗಳನ್ನು ನಿರ್ಮಿಸಲಾಗುವುದು.

ತೇಜಸ್ವಿಯವರ ನೆಚ್ಚಿನ ಚಟುವಟಿಕೆಗಳಲ್ಲೊಂದಾದ ಮೀನು ಹಿಡಿಯುವುದು, ಜೇನುಗೂಡಿನ ಬಗ್ಗೆ ಅವರಿಗಿದ್ದ ಅಭಿರುಚಿಯ ಕುರಿತು ವಿಶೇಷ ಆಕರ್ಷಣೆಗಳಿರಲಿವೆ. ಜತೆಗೆ, ತೇಜಸ್ವಿಯವರ ನೆಚ್ಚಿನ ಶ್ವಾನ, ಪ್ರಾಣಿ, ಪಕ್ಷಿಗಳು, ಕೀಟಗಳನ್ನು ಹೂವುಗಳಲ್ಲಿ ಮೂಡಿಸಲು ಇಲಾಖೆ ಉದ್ದೇಶಿಸಿದೆ.

ಅಲ್ಲಲ್ಲಿ ಸೆಲ್ಫಿ ಪಾಯಿಂಟ್‌ಗಳು: ಉದ್ಯಾನದ ಆಯ್ದ ಜಾಗಗಳಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಭಿನ್ನ ಕ್ಯಾರಿಕೇಚರ್‌ಗಳ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ಮಿಸಲಾಗುತ್ತಧಿದೆ. ಅವರ ವ್ಯಕ್ತಿತ್ವದ ಚಿತ್ರಣವೇ ಹೂವುಗಳಲ್ಲಿಅರಳಿ ನಿಲ್ಲಲಿದೆ. ಜತೆಗೆ ತೇಜಸ್ವಿಯವರ ಕಾದಂಬರಿಗಳಲ್ಲಿಬರುವ ಪಾತ್ರಗಳನ್ನು ಪರಿಚಯ ಮಾಡಿಕೊಡಲಾಗುವುದು.

ತೇಜಸ್ವಿ ಅವರ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. 11 ದಿನಗಳ ಕಾಲ ತೇಜಸ್ವಿ ಅವರ ಬಗ್ಗೆ ನಾಟಕಗಳು, ಸಂವಾದ ನಡೆಯಲಿದೆ. ಜನವರಿ 15 ರಿಂದ 26ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಬಗೆ ಬಗೆಯ ಹೂವುಗಳ ಆಕರ್ಷಣೆ ರೆಡ್‌ಹಾಟ್‌ ಪೋಕರ್‌, ಆಲ್‌ಸ್ಟೊ್ರೕಮೇರಿಯನ್‌ ಲಿಲ್ಲಿ, ಪೂಷಿಯಾ, ಅಗಪಾಂಥಸ್‌, ಸೈಕ್ಲೋಮನ್‌, ಕ್ಯಾಲಾಲಿಲ್ಲಿ, ಟ್ಯೊಬಿರಸ್‌ ರೂಟೆಡ್‌ ಸೇರಿದಂತೆ ಹಲವು ಶೀತ ವಲಯದ ವಿಶೇಷ ಹೂಗಳು ಪ್ರದರ್ಶನದಲ್ಲಿಇರಲಿವೆ.

ಈ ಬಾರಿಯ ಫಲಪುಷ್ಪ ಪ್ರದರ್ಶನವನ್ನು ‘ತೇಜಸ್ವಿ ವಿಸ್ಮಯ’ ಶೀರ್ಷಿಕೆಯಡಿ ಆಯೋಜಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಪೂರ್ಣಚಂದ್ರ ತೇಜಸ್ವಿಯವರೊಂದಿಗೆ ಒಡನಾಟ ಹೊಂದಿರುವ ವ್ಯಕ್ತಿಗಳು, ಸಂಸ್ಥೆಗಳು/ಟ್ರಸ್ಟ್‌ಗಳನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದಿದ್ದಾರೆ ಡಾ. ಎಂ. ಜಗದೀಶ್‌, ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ”

Leave a comment

Leave a Reply

Your email address will not be published. Required fields are marked *

Related Articles

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಉಪ ಚುನಾವಣೆ ರಣಾಂಗಣ ದಿನಕಳೆದಂತೆ ತೀವ್ರ ಕುತೂಹಲ ಕೆರಳಿಸುತ್ತಿದ್ದು ಪ್ರಮುಖವಾಗಿ ದಾವಣಗೆರೆ ದಕ್ಷಿಣ...

ದಾವಣಗೆರೆ ಚುನಾವಣೆ ಬಂಡಾಯ ಕಾರ್ಯನಿರ್ವಹಿಸಿದ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಸಿದ್ಧತೆ

“ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ...

ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ ಅಧಿಕಾರಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅವಕಾಶ ನೀಡುವುದಿಲ್ಲ :: ಗೃಹ ಸಚಿವ ಡಾ.ಜಿ.ಪರಮೇಶ್ವರ್

“ಬೆಂಗಳೂರು: ಪೊಲೀಸ್ ಸೇವೆಯಲ್ಲಿ ನೈತಿಕತೆ ಮುಖ್ಯ. ಯಾವುದೇ ಅಧಿಕಾರಿಗೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಲು ಅವಕಾಶ...

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಕರಪತ್ರ ಹಂಚಿಕೆ ಆರೋಪ ಇಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯುತ್ತಿದ್ದು ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿಯಾಗಿ ಚುನಾವಣಾ ಪ್ರಚಾರ...