ಹೊಸ ತಲೆಮಾರಿನ ಆಕಾಶ್–ಎನ್ ಜಿ ಕ್ಷಿಪಣಿ; ಯಶಸ್ವಿ ಪರೀಕ್ಷಾರ್ಥ ಹಾರಾಟ!

32

ನವದೆಹಲಿ: ಮುಂದಿನ ತಲೆಮಾರಿನ ಆಕಾಶ್ -ಎನ್ ಜಿ ಕ್ಷಿಪಣಿ ವ್ಯವಸ್ಥೆಯ ಪರೀಕ್ಷೆಯನ್ನು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯಶಸ್ವಿಯಾಗಿ ನಡೆಸಿದ್ದು, ಭಾರತೀಯ ಸಶಸ್ತ್ರ ಪಡೆಗೆ ಮತ್ತಷ್ಟು ಬಲ ಬಂದಿದೆ.

ಈ ಸಂಬಂಧ ವಿಡಿಯೋವೊಂದನ್ನು DRDO ಹಂಚಿಕೊಂಡಿದ್ದು, ಹೆಚ್ಚಿನ ವೇಗದಲ್ಲಿ, ಕಡಿಮೆ ಎತ್ತರ ಹಾಗೂ ದೀರ್ಘ ಶ್ರೇಣಿ ಸೇರಿದಂತೆ ವಿವಿಧ ವೈಮಾನಿಕ ಗುರಿಗಳನ್ನು ಅತ್ಯಂತ ನಿಖರತೆಯಿಂದ ನಾಶಪಡಿಸಲಾಗಿದೆ ಎಂದು ಹೇಳಿದೆ. ಈ ಕ್ಷಿಪಣಿ ವ್ಯವಸ್ಥೆಯನ್ನು ದೇಶಿಯವಾಗಿ ಅಭಿವೃದ್ಧಿಪಡಿಸಲಾಗಿದೆ.

ದೇಶೀಯವಾಗಿ ಅಭಿವೃದ್ಧಿಪಡಿಸಿದ ರೇಡಿಯೊ ಫ್ರೀಕ್ವೆನ್ಸಿ ಅನ್ವೇಷಕ, ಡ್ಯುಯಲ್ ಪಲ್ಸ್ ಸಾಲಿಡ್ ರಾಕೆಟ್ ಮೋಟಾರ್, ಸ್ವದೇಶಿ ರಾಡಾರ್ ಮತ್ತು ಸಿ2 ವ್ಯವಸ್ಥೆಯನ್ನು ಹೊಂದಿರುವ ಆಕಾಶ್ ಎನ್ ಜಿ ಕ್ಷಿಪಣಿ ವಿವಿಧ ಶ್ರೇಣಿಯ ವೈಮಾನಿಕ ಬೆದರಿಕೆಗಳ ವಿರುದ್ಧ ವಾಯು ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಪ್ರಬಲ ವ್ಯವಸ್ಥೆಯಾಗಿದೆ ಎಂದು ತಿಳಿಸಿದೆ.

 ಈ ಯಶಸ್ವಿ ಪರೀಕ್ಷೆಗೆ DRDO ಹಿರಿಯ ವಿಜ್ಞಾನಿಗಳು ಮತ್ತು ಭಾರತೀಯ ವಾಯುಪಡೆಯ ಅಧಿಕಾರಿಗಳು ಸಾಕ್ಷಿಯಾದರು.

ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಡಿಆರ್‌ಡಿಒ, ಐಎಎಫ್ ಮತ್ತು ರಕ್ಷಣಾ ಉದ್ಯಮವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದ್ದಾರೆ. ಅತ್ಯಾಧುನಿಕ ಆಕಾಶ್-ಎನ್‌ಜಿ ವ್ಯವಸ್ಥೆಯು ಐಎಎಫ್‌ನ ವಾಯು ರಕ್ಷಣಾ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಬಂಗಾಳ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ನಾಳೆ ಪ್ರಮಾಣವಚನ ಸ್ವೀಕಾರ

“ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ...

ವೀಟೋ ಅಧಿಕಾರ ಬಳಸಿ ಮಮತಾ ಬ್ಯಾನರ್ಜಿ ಮಂತ್ರಿಮಂಡಲ ವಿಸರ್ಜಿಸಿದ ರಾಜ್ಯಪಾಲ ಆರ್‌ಎನ್ ರವಿ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ...

ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಎರಡು ಬಾಂಬ್ ಸ್ಫೋಟ ಕಚ್ ಜಿಲ್ಲೆಯ ತೊರೆ ಪ್ರದೇಶದಲ್ಲಿ ಶಂಕಿತ ಪಾಕಿಸ್ತಾನಿ ದೋಣಿ ಪತ್ತೆ

“ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಸತತ ಎರಡು ಬಾಂಬ್ ಸ್ಫೋಟಗಳು ಸಂಭವಿಸಿದ...

ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ...