ಕೋಗಿಲೆ ಕ್ರಾಸ್ ಪ್ರಕರಣ ಶೆಡ್ ಹಾಕಿಕೊಂಡವರಿಗೆಲ್ಲ ಮನೆ ಕೊಟ್ರೆ ತಪ್ಪು ಸಂದೇಶ:ಸಚಿವ ಕೃಷ್ಣಭೈರೇಗೌಡ

22

ಕೋಗಿಲು ಕ್ರಾಸ್ ಪ್ರದೇಶದ ನಿರಾಶ್ರಿತರಿಗೆ ಮನೆ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕಾನೂನುಬದ್ಧ ಹಾಗೂ ಮಾನವೀಯ ಕ್ರಮ ಅನುಸರಿಸಲು ತೀರ್ಮಾನಿಸಿದೆ. ಈ ಸಂಬಂಧ ವಿಕಾಸಸೌಧದಲ್ಲಿರುವ ಸಚಿವ ಕೃಷ್ಣ ಭೈರೇಗೌಡ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ವಿಚಾರವಾಗಿ ಸ್ಪಷ್ಟ ನಿಲುವು ಕೈಗೊಳ್ಳಲಾಗಿದೆ. ಸರ್ಕಾರಿ ಜಮೀನಿನಲ್ಲಿ ಯಾರಿಗಾದರೂ ಹಣ ನೀಡಿ ಒತ್ತುವರಿ ಮಾಡಿಸಿಕೊಂಡಿದ್ದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಅಲೆಮಾರಿಗಳು ತಾತ್ಕಾಲಿಕವಾಗಿ ಬಂದು ಹೋಗುತ್ತಾರೆ. ಅವರಿಗೆ ಭೂ ಒತ್ತುವರಿ ಅಗತ್ಯವಿಲ್ಲ.
ಆದರೆ, ಉದ್ದೇಶಪೂರ್ವಕವಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ಸರ್ಕಾರಿ ಜಮೀನಿನಲ್ಲಿ ಶೆಡ್ ಹಾಕಿದ ತಕ್ಷಣ ಮನೆ ನೀಡುವುದು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತದೆ. ಇದರಿಂದ ಸರ್ಕಾರವೇ ಪರೋಕ್ಷವಾಗಿ ಭೂ ಒತ್ತುವರಿಗೆ ಕುಮ್ಮಕ್ಕು ನೀಡಿದಂತಾಗುತ್ತದೆ.
ಈಗಾಗಲೇ ಸಾವಿರಾರು ಜನ ಸರ್ಕಾರಿ ಮನೆಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವಾಗ, ಒತ್ತುವರಿದಾರರಿಗೆ ಏಕಾಏಕಿ ಮನೆ ನೀಡುವುದು ನ್ಯಾಯಸಮ್ಮತವಲ್ಲ ಎಂದು ಕೃಷ್ಣ ಭೈರೇಗೌಡ ಹೇಳಿದರು. ಕೋಗಿಲುನಲ್ಲಿ ನಡೆದ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆಗಳನ್ನು ಒದಗಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಇಂದು ಪ್ರತಿಭಟನೆ ನಡೆಸಿತ್ತು

Leave a comment

Leave a Reply

Your email address will not be published. Required fields are marked *

Related Articles

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ  ಇಂದು ಯುಗಾದಿ ಹಬ್ಬದಂದೇ...

ಕರ್ನಾಟಕ ಉಪಚುನಾವಣಾ ಕಣ  ಏಪ್ರಿಲ್ 9 ಚುನಾವಣೆ ಮೇ 4ಕ್ಕೆ ಫಲಿತಾಂಶ ಪ್ರಕಟ

“ಬೆಂಗಳೂರು: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಉಭಯ...

ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ಬಂದಿಲ್ಲ ಭ್ರಷ್ಟ ಬಿವೈ ಯಡಿಯೂರಪ್ಪ ವಿಜೇಂದ್ರ ಯಡಿಯೂರಪ್ಪ ಇರುವ ತನಕ ಬಿಜೆಪಿ ಸೇರಲ್ಲ ::ಬಸನಗೌಡ ಪಾಟೀಲ್ ಯತ್ನಾಲ್

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ,ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ...

ಕರ್ನಾಟಕ ಬಜೆಟ್ ರಾಜ್ಯದಲ್ಲಿ ಹೊಸದಾಗಿ 12ಪೊಲೀಸ್ ಠಾಣೆಗಳ ಸ್ಥಾಪನೆ ಘೋಷಣೆ

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಿದ್ದು, ಪೊಲೀಸ್ ಇಲಾಖೆ ಸೇರಿದಂತೆ...