ರಾಮಲೀಲಾ ಮೈದಾನ ಪ್ರದೇಶದ ಮಸೀದಿ  ಅತಿಕ್ರಮಣ ತೆರವು ಕಾರ್ಯಾಚರಣೆವಿರುದ್ಧ ಹಿಂಸಾಚಾರ ಕಲ್ಲು ತೂರಾಟ

22

“ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ರಾಮಲೀಲಾ ಮೈದಾನ ಪ್ರದೇಶದ ಮಸೀದಿ ಬಳಿ ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆ ಹಿಂಸಾಚಾರಕ್ಕೆ ತಿರುಗಿದ್ದು, ಈ ವೇಳೆ ನಡೆದ ಕಲ್ಲು ತೂರಾಟದಲ್ಲಿ ಐವರು ಪೊಲೀಸರಿಗೆ ಗಾಯವಾಗಿರುವ ಘಟನೆ ಬುಧವಾರ ನಡೆದಿದೆ.

ದೆಹಲಿ ಹೈಕೋರ್ಟ್‌ ಆದೇಶದಂತೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಅಧಿಕಾರಿಗಳು ಸೈಯದ್ ಫೈಜ್ ಇಲಾಹಿ ಮಸೀದಿ ಮತ್ತು ತುರ್ಕಮನ್ ಗೇಟ್‌ನಲ್ಲಿರುವ ಹತ್ತಿರದ ಸ್ಮಶಾನಕ್ಕೆ ಹೊಂದಿಕೊಂಡಿರುವ ಭೂಮಿಯನ್ನು ಕೆಡವಲು ಕಾರ್ಯಾಚರಣೆ ಆರಂಭಿಸಿದ್ದರು.

ಈ ವೇಳೆ ಘರ್ಷಣೆಗಳು ಭುಗಿಲೆದ್ದಿದೆ. ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದು, ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಾರ್ಯಾಚರಣೆಗೆ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಜಮಾಯಿಸಿ ಕಟ್ಟಡ ಕೆಡವುವುದನ್ನು ವಿರೋಧಿಸಿ ಪ್ರತಿಭಟಿಸಿದರು.

ಪರಿಸ್ಥಿತಿ ನಿಯಂತ್ರಣ ತಪ್ಪದಂತೆ ತಡೆಯಲು ಆ ಪ್ರದೇಶದಲ್ಲಿ ಮತ್ತು ಸುತ್ತಮುತ್ತ ಸಾಕಷ್ಟು ಬಲಪ್ರಯೋಗ ಮಾಡಲಾಯಿತು. ಸ್ಥಳೀಯರೊಂದಿಗೆ ಸಮನ್ವಯ ಸಭೆಗಳನ್ನು ನಡೆಸಲಾಯಿತು. ಸ್ವಲ್ಪ ಸಮಯದ ನಂತರ ಪರಿಸ್ಥಿತಿ ತಿಳಿಗೊಂಡಿದು. ತೆರವು ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಭದ್ರತೆಗಾಗಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕಾರ್ಯಾಚರಣೆ ಪ್ರಾರಂಭವಾಯಿತು.

ಹೈಕೋರ್ಟ್ ಆದೇಶದಂತೆ ಅತಿಕ್ರಮಣಗೊಂಡ ಭೂಮಿಯನ್ನು ಎಂಸಿಡಿ ಧ್ವಂಸಗೊಳಿಸಿತು. ರಾತ್ರಿಯಲ್ಲಿ ಪೊಲೀಸರ ಮೇಲೆ ಕಲ್ಲುಗಳನ್ನು ಎಸೆಯಲಾಗಿದೆ ಎಂದು ಹೇಳಿದ್ದಾರೆ. ಘಟನೆಯಲ್ಲಿ 4-5 ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ಮತ್ತು ಬಾಡಿ ಕ್ಯಾಮೆರಾ ದೃಶ್ಯಗಳನ್ನು ಪಡೆದ ತಕ್ಷಣ, ನಾವು ದುಷ್ಕರ್ಮಿಗಳನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ...

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ  ಸೇರಿದಂತೆ 40ಪ್ರಮುಖರು ಬಿಜೆಪಿಗೆ ಸೇರ್ಪಡೆ

“ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ....

ಮಹಿಳೆಯರ ಬಗ್ಗೆ ಅಶ್ಲೀಲ ಹಾಡು ಹಾಡಿದ ರ‍್ಯಾಪರ್ ಬಾದ್‌ಶಾ ಹಣೆಗೆ ನೇರವಾಗಿ ‘ಗುಂಡು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ

“ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈಗ ಗಾಯಕ-ರ‍್ಯಾಪರ್ ಬಾದ್‌ಶಾ ಅವರ ಹರಿಯಾಣ ಭಾಷೆಯ ಹಾಡು ‘ಟಟೀರಿ’ ಸುತ್ತಲಿನ...