ಉಡುಪಿ ಪರ್ಯಾಯ ಮೂಲಸೌಕರ್ಯಕ್ಕೆ 6 ಕೋಟಿ ರೂಪಾಯಿ : ಉಸ್ತುವಾರಿ ಸಚಿವೆ – ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ನವೀನ್ ಸಾಲಿಯಾನ್ ಕೃತಜ್ಞತೆ

35

ಉಡುಪಿ: ಪರ್ಯಾಯದ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿಶೇಷ ಮುತುವರ್ಜಿಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದು ಶ್ಲಾಘನೀಯ ಕಾರ್ಯ ಎಂದು ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲಿಯಾನ್ ಹೇಳಿದ್ದಾರೆ.

ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಕಾಂಗ್ರೆಸ್ ಹಾಗು ಬಿಜೆಪಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪರ್ಯಾಯ ಮಹೋತ್ಸವದ ಯಶಸ್ಸಿಗೆ 6 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲು ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ತುಂಬು ಹೃದಯದ ಧನ್ಯವಾದಗಳು.

ಈ ನಿಟ್ಟಿನಲ್ಲಿ ವಿಶೇಷ ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಉಡುಪಿ ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲಿಯಾನ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ನಿಟ್ಟೂರಿನ ಶ್ರೀ ಧೂಮಾವತಿ ಯುವಕ ಮಂಡಲಕ್ಕೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ಕಿಟ್ ವಿತರಣೆ

ನಿಟ್ಟೂರು: ವಿಷ್ಣುಮೂರ್ತಿ ನಗರದಲ್ಲಿರುವ ಶ್ರೀ ಧೂಮಾವತಿ ಯುವಕ ಮಂಡಲ(ರಿ)ಕ್ಕೆ ಉಡುಪಿ ಜಿಲ್ಲೆಯ ಯುವ ಸಬಲೀಕರಣ ಮತ್ತು...

ಅಕ್ರಮವಾಗಿ ಮರಳು ಕದ್ದು ಸಾಗಾಟ ಮಾಡಿದ ಲಘು ಸಂಘಟನೆ ಅಪರಾಧ ಪ್ರಕರಣ; ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು

ಉಡುಪಿಟಿಪ್ಪರ್ ಲಾರಿಯಲ್ಲಿ ಅಂಪಾರಿನ ದಕ್ಕೆಯಿಂದ ಬ್ರಹ್ಮಾವರ ಕಡೆಗೆ ಆಕ್ರಮವಾಗಿ ಮರಳನ್ನು ಕದ್ದು ತುಂಬಿಸಿಕೊoಡು ಸಾಗಾಟ ಮಾಡಿ...

ರಾಷ್ಟ್ರೀಯ ಹೆದ್ದಾರಿ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ ಬಳಿ ಇರುವ ರಸ್ತೆ ವಿಭಾಜಕವನ್ನು ತೆರೆದು ಕೊಟ್ಟಿರುವುದನ್ನು ಪ್ರಶ್ನಿಸಿ ಹೋರಾಟಕ್ಕೆ ಸಿದ್ಧತೆ

ಬಹುದಿನಗಳಿಂದ ಸುದ್ದಿಯಲ್ಲಿರುವ ಉಡುಪಿಯಹೆದ್ದಾರಿ ವಿಭಾಜಕಒಡೆದ ಪ್ರಕರಣದಉಡುಪಿ ಸಾರ್ವಾಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿರುವವಿಚಾರದಲ್ಲಿ ನೆಡೆದ ಪತ್ರಿಕಾಗೋಷ್ಠಿ ಉಡುಪಿ...

ಉಡುಪಿ ಸಾಸ್ತಾನ ಟೋಲ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ

ಉಡುಪಿ ಬ್ರಹ್ಮಾವರ:ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿಯು ನಿವೃತ್ತ ಯೋಧರೊಂದಿಗೆ ಟೋಲ್ ವಸೂಲು ಮಾಡುವಾಗ ಅನುಚಿತವಾಗಿ ನಡೆದುಕೊಂಡಿರುವುದು...