ಜಮ್ಮು-ಕಾಶ್ಮೀರ: ಭಾರತದ ಗಡಿಗೆ ನುಗ್ಗಲು ‘ಪಾಕ್ ಡ್ರೋನ್’ ಗಳು ಯತ್ನ! ವಿಫಲಗೊಳಿಸಿದ ಸೇನೆ

24
ನವದೆಹಲಿ: ಸಾವಿರಕ್ಕೂ ಹೆಚ್ಚು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧರಿದ್ದಾರೆ ಮತ್ತು ಭಾರತಕ್ಕೆ ನುಸುಳಲು ಅವಕಾಶ ನೀಡುವಂತೆ ತನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ಗೆ ಸೇರಿದ ಆಡಿಯೋ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಇದರ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (LOC )ಬಳಿ ಭಾನುವಾರ ಸಂಜೆ ಪಾಕಿಸ್ತಾನದ ಡ್ರೋನ್ ಗಳ ಹಾರಾಟ ಪತ್ತೆಯಾಗಿದೆ.


ಭಾರತೀಯ ಸೇನಾ ಯೋಧರು ಈ ಡ್ರೋನ್‌ಗಳನ್ನು ಗುಂಡು ಹಾರಿಸಿ ಹೊಡೆದುರುಳಿಸಿದ್ದು, ಇನ್ನೂ ಹಲವಾರು ಡ್ರೋನ್‌ಗಳು ಗಡಿ ದಾಟಿ ಬಂದಿವೆ ಎನ್ನಲಾಗಿದೆ. ಕಳೆದ ವರ್ಷ ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಬರುತ್ತಿದ್ದ ಡ್ರೋನ್ ನಂತೆ ಆಕಾಶದಲ್ಲಿ ಮಿನುಗುತ್ತಾ ಡ್ರೋನ್ ಗಳು ಡ್ರೋನ್‌ಗಳು ಪಾಕ್‌ ಆಕ್ರಮಿತ ಕಾಶ್ಮೀರ ಭಾರತದ ಗಡಿಭಾಗದೊಳಕ್ಕ ನುಗ್ಗಲು ಯತ್ನಿಸಿವೆ. ಆದರೆ ಭಾರತೀಯ ಸೇನಾ ಯೋಧರು ಎಲ್ಲಾ ಡ್ರೋನ್‌ಗಳನ್ನು ಆಗಸದಲ್ಲೇ ಯಶಸ್ವಿಯಾಗಿ ಹೊಡೆದುರುಳಿಸಿದ್ದು, ಅವು ಹೊತ್ತು ತಂದಿರಬಹುದಾದ ಶಸ್ತ್ರಾಸ್ತ್ರಗಳು ಅಥವಾ ಮಾದಕವಸ್ತುಗಳ ಹುಡುಕಾಟದಲ್ಲಿ ನಿರತವಾಗಿದೆ.
ನಿನ್ನೆ, ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಿಕ್ಕಿನಿಂದ ಬಂದ ಡ್ರೋನ್ ಸಾಂಬಾ ಸೆಕ್ಟರ್‌ನಲ್ಲಿ ಶಸ್ತ್ರಾಸ್ತ್ರಗಳ ರವಾನೆಯನ್ನು ಬೀಳಿಸಿತು. ಮೆಷಿನ್ ಗನ್‌ಗಳು ಡ್ರೋನ್‌ಗಳಲ್ಲಿ ಇತ್ತು ಎಂದು ಸೇನೆ ಹೇಳಿದೆ. ರಾಜೌರಿ ಜಿಲ್ಲೆಯಲ್ಲಿ ಸಂಜೆ 6.35ಕ್ಕೆ ಮತ್ತೊಂದು ಡ್ರೋನ್ ಕಾಣಿಸಿಕೊಂಡಿದ್ದು, ಮಿನುಗುವ ಬೆಳಕನ್ನು ಹೊಂದಿರುವ ಹಾರುವ ವಸ್ತು ಕಲಕೋಟ್‌ನ ಧರ್ಮಸಾಲ್ ಗ್ರಾಮದಿಂದ ಬಂದು ಭರಖ್ ಕಡೆಗೆ ಚಲಿಸಿದೆ. ಮತ್ತೊಂದು ಡ್ರೋನ್‌ 7:15ರ ಸುಮಾರಿಗೆ ಸಾಂಬಾದ ರಾಮಗಢ ಸೆಕ್ಟರ್‌ನಲ್ಲಿ ಚಕ್‌ ಬಾಬ್ರಾಲ್‌ ಗ್ರಾಮದ ಮೇಲೆ ಕೆಲವು ನಿಮಿಷಗಳ ಕಾಲ ಹಾರಾಟ ನಡೆಸಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.
ಅಷ್ಟೇ ಅಲ್ಲದೇ ಸಂಜೆ 6.25ಕ್ಕೆ ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್‌ನ ಟೋಪಾ ಕಡೆಗೆ ಮತ್ತೊಂದು ಪಾಕ್‌ ಡ್ರೋನ್‌ ಚಲನೆ ಕಂಡುಬಂದಿದೆ. ಆದರೆ ಈ ಎಲ್ಲಾ ಡ್ರೋನ್‌ಗಳನ್ನು ಮಷಿನ್‌ ಗನ್‌ಗಳಿಂದ ಹೊಡೆದುರುಳಿಸಲಾಗಿದ್ದು, ಅವು ಹೊತ್ತು ತಂದಿರಬಹುದಾದ ವಸ್ತುಗಳ ಶೋಧ ಕಾರ್ಯ ಮುಂದುವರೆದಿದೆ” ಎಂದು ಸೇನಾ ಮೂಲಗಳು ತಿಳಿಸಿವೆ.
ಕಳೆದ ವರ್ಷ ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿತ್ತು. ಅದರ ನಂತರ ಡ್ರೋನ್ ನುಗ್ಗುವಿಕೆ ತೀವ್ರವಾಗಿ ಕಡಿಮೆಯಾಗಿತ್ತು. ಆದಾಗ್ಯೂ ಭಾನುವಾರ ಸಂಜೆ ಒಂದೇ ದಿನದಲ್ಲಿ ಐದು ಪಾಕಿಸ್ತಾನಿ ಡ್ರೋನ್ ಗಡಿಯೊಳಗೆ ನುಗ್ಗಲು ಯತ್ನಿಸಿರುವುದಾಗಿ ವರದಿಯಾಗಿದೆ.

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ...

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ  ಸೇರಿದಂತೆ 40ಪ್ರಮುಖರು ಬಿಜೆಪಿಗೆ ಸೇರ್ಪಡೆ

“ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ....

ಮಹಿಳೆಯರ ಬಗ್ಗೆ ಅಶ್ಲೀಲ ಹಾಡು ಹಾಡಿದ ರ‍್ಯಾಪರ್ ಬಾದ್‌ಶಾ ಹಣೆಗೆ ನೇರವಾಗಿ ‘ಗುಂಡು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ

“ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈಗ ಗಾಯಕ-ರ‍್ಯಾಪರ್ ಬಾದ್‌ಶಾ ಅವರ ಹರಿಯಾಣ ಭಾಷೆಯ ಹಾಡು ‘ಟಟೀರಿ’ ಸುತ್ತಲಿನ...