ಲೋಕಾಯುಕ್ತರ ಹೆಸರಿನಲ್ಲಿ ನಗರಸಭೆ ಕಂದಾಯ ಅಧಿಕಾರಿಗೆ ಫೋನ್ ಕರೆ ಮಾಡಿ ಬೆದರಿಕೆ ಪ್ರಕರಣ ದಾಖಲು

7

ಲೋಕಾಯುಕ್ತರ ಹೆಸರಿನಲ್ಲಿ ನಗರ ಸಭೆ ಅಧಿಕಾರಿಗೆ ಫೋನ್ ಕರೆ ಮಾಡಿ ಬೆದರಿಕೆ ಪ್ರಕರಣ ದಾಖಲು ಕಪಿಲ್‌ ದೇವ್‌ ಎಸ್‌ ಗೋಡೆಮನೆ, ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು, ನಗರ ಸಭೆ, ಉಡುಪಿ ಇವರು ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಉಡುಪಿ ನಗರ ಸಭೆಯಲ್ಲಿ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರಾಗಿ ಕರ್ತವ್ಯವನ್ನು ನಿರ್ವಹಿಸಿಕೊಂಡಿರುತ್ತಾರೆ.

ದಿನಾಂಕ : 19/01/2026 ರಂದು ಮಧ್ಯಾಹ್ನ 12:02 ಗಂಟೆಗೆ ವಾಟ್ಸಪ್‌ ಮುಖಾಂತರ ದೂರುದಾರರ ಮೊಬೈಲ್‌ ಗೆ ಯಾರೋ ಅಪರಿಚಿತ ವ್ಯಕ್ತಿಯು  ಮೊಬೈಲ್‌ ನಿಂದ  ಫೋನ್‌ ಕರೆ ಮಾಡಿ ತನ್ನ ಹೆಸರು ಚೆಲುವರಾಜ್‌ ಲೋಕಾಯುಕ್ತ ಇನ್ಸಪೆಕ್ಟರ್‌ ಮಂಗಳೂರು ಡಿವಿಜನ್‌ ನಿಂದ ಮಾತನಾಡುತ್ತಿದ್ದು “ನಿಮ್ಮ ಮೇಲೆ ಈ ಮೇಲ್‌ ಮುಖಾಂತರ ದೂರು ಬಂದಿದ್ದು, ಸದರಿ ದೂರನ್ನು ಬಗೆಹರಿಸಿಕೊಳ್ಳಿ, ನಿರಾಕರಿಸಿದರೇ ನಿಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತದೆ ಹಾಗೂ ಇಲಾಖಾ ವಿಚಾರಣೆ ಮಾಡುವುದಾಗಿ ಹೇಳಿರುತ್ತಾನೆ.‌

ತದನಂತರ ಇನ್ನೊಬ್ಬ ವ್ಯಕ್ತಿಗೆ ಫೋನ್‌ ಕರೆ ಕೊಟ್ಟಿದ್ದು, ಆತನು ನಾನು ಇಲ್ಲಿ ಹಿರಿಯ ಅಧಿಕಾರಿಯಾಗಿದ್ದು, ಈಗಾಗಲೇ ನಮ್ಮ ಅಧಿಕಾರಿಯು ತಿಳಿಸಿದಂತೆ ನಡೆದುಕೊಳ್ಳಿ ಇಲ್ಲವಾದಲ್ಲಿ ನಿಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತದೆ” ಎಂದು ಹೇಳಿರುತ್ತಾನೆ.

ದೂರುದುದಾರರು ಈ ಬಗ್ಗೆ ಖಚಿತಪಡಿಸಿಕೊಳ್ಳಲು ಉಡುಪಿ ಲೋಕಯುಕ್ತ ಕಛೇರಿಗೆ ಹೋಗಿ “ವಾಟ್ಸಾಪ್‌ ಮುಖಾಂತರ ಫೋನ್‌ ಕರೆ ಮಾಡಿದ್ದ ವ್ಯಕ್ತಿಗಳ ಬಗ್ಗೆ ವಿಚಾರಿಸಿದಾಗ, ಆ ಹೆಸರಿನ ವ್ಯಕ್ತಿಗಳು ನಮ್ಮ ಕಚೇರಿಯಲಿಲ್ಲ ಹಾಗೂ ನಿಮಗೆ ಬಂದಂತಹ ಕರೆ ನಮ್ಮ ಕಚೇರಿಯಿಂದಲ್ಲ ಎಂದು ಹೇಳಿರುತ್ತಾರೆ.

ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ವಂಚನೆ ಮಾಡಲು ಯತ್ನಿಸಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.”

Leave a comment

Leave a Reply

Your email address will not be published. Required fields are marked *

Related Articles

ರಾಷ್ಟ್ರೀಯ ಹೆದ್ದಾರಿ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ ಬಳಿ ಇರುವ ರಸ್ತೆ ವಿಭಾಜಕವನ್ನು ತೆರೆದು ಕೊಟ್ಟಿರುವುದನ್ನು ಪ್ರಶ್ನಿಸಿ ಹೋರಾಟಕ್ಕೆ ಸಿದ್ಧತೆ

ಬಹುದಿನಗಳಿಂದ ಸುದ್ದಿಯಲ್ಲಿರುವ ಉಡುಪಿಯಹೆದ್ದಾರಿ ವಿಭಾಜಕಒಡೆದ ಪ್ರಕರಣದಉಡುಪಿ ಸಾರ್ವಾಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿರುವವಿಚಾರದಲ್ಲಿ ನೆಡೆದ ಪತ್ರಿಕಾಗೋಷ್ಠಿ ಉಡುಪಿ...

ಉಡುಪಿ ಸಾಸ್ತಾನ ಟೋಲ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ

ಉಡುಪಿ ಬ್ರಹ್ಮಾವರ:ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿಯು ನಿವೃತ್ತ ಯೋಧರೊಂದಿಗೆ ಟೋಲ್ ವಸೂಲು ಮಾಡುವಾಗ ಅನುಚಿತವಾಗಿ ನಡೆದುಕೊಂಡಿರುವುದು...

ಹೆಲ್ಪಿಂಗ್ ಹ್ಯಾಂಡ್ಸ್ ಚಾರೀಟೇಬಲ್ ಟೃಸ್ಟ್ (ರಿ.) ಕುಂದಾಪುರ ವತಿಯಿಂದ ವೀರ ಯೋಧ ಅನೂಪ್ ಪೂಜಾರಿ ಇವರ ಸವಿ‌ ನೆನಪಿನಲ್ಲಿ “ನೆತ್ತರ ನೆರವು”ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೆಲ್ಪಿಂಗ್ ಹ್ಯಾಂಡ್ಸ್ ಚಾರೀಟೇಬಲ್ ಟೃಸ್ಟ್ (ರಿ.) ಕುಂದಾಪುರ (ನೊಂದ ಹೃದಯಗಳಿಗೆ ನೆರವಿನ ಹಸ್ತ) ಇವರ ಆಯೋಜನೆಯಲ್ಲಿ,...

ಅಶಕ್ತರಿಗೆ, ಕ್ಷಯ ರೋಗದಿಂದ ಬಳಲುತ್ತಿರುವವರಿಗೆ ದಿವ್ಯಾ0ಗ ರಕ್ಷಣಾ ಸಮಿತಿಯಿಂದ  ಆಹಾರ ಕಿಟ್ ವಿತರಣೆ:: ವಿಜಯ ಕೊಡವೂರು

*ಆಶಕ್ತರು, ಕ್ಷಯ ರೋಗಸ್ತರಿಗೆ ಆಹಾರ ಕಿಟ್ ವಿತರಣೆ – ಕೊಡವೂರು* ಕೊಡವೂರು ವಾರ್ಡ್ ನಲ್ಲಿ ಆಶಕ್ತರು,...