ಸರಕಾರಿ ಅಧಿಕಾರಿಗಳು ಶಾಸಕರು ಸಾರ್ವಜನಿಕರ ದೂರವಾಣಿ ಕರೆಗೆ ಸ್ಪಂದಿಸುವುದು ಅಗತ್ಯ ಸುತ್ತೋಲೆ ಹೊರಡಿಸಿದ ರಾಜ್ಯ ಸರಕಾರ

36

ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆ ರಿಸೀವ್ ಮಾಡಲೇಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಹೌದು.. ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಶಾಸಕರು, ಪರಿಷತ್ ಸದಸ್ಯರ, ಸಂಸದರ ಫೋನ್ ಕರೆ ಸ್ವೀಕರಿಸುವ ಸಂಬಂಧ ಸರ್ಕಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸರ್ಕಾರಿ ಅಧಿಕಾರಿಗಳು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ದೂರವಾಣಿ ಕರೆಗಳನ್ನು ಸ್ವೀಕರಿಸದೆ ಇರುವುದು, ಮರಳಿ ಕರೆ ಮಾಡದೇ ಇರುವ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಈ ವಿಚಾರವಾಗಿ ಸುತ್ತೋಲೆ ಹೊರಡಿಸಿರುವ ಅವರು, ಇನ್ನು ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಎಂಎಲ್ಎಗಳ ತ್ತು ಎಂಎಲ್‌ಸಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಲೇಬೇಕು.
ಒಂದು ವೇಳೆ ಕರೆ ಬಂದಾಗ ಇತರ ಕೆಲಸಗಳಲ್ಲಿ ವ್ಯಸ್ತರಾಗಿದ್ದಲ್ಲಿ, ಮರಳಿ ಕರೆ ಮಾಡಿ ಮಾತನಾಡಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ವಿಧಾನಸಭಾ ಹಾಗೂ ಪರಿಷತ್ತಿನ ಸದಸ್ಯರಿಗೆ ವಿನಂತಿಸಿಕೊಂಡಾಗ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಬೇಕಾಗುತ್ತದೆ.

ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಇನ್ಮುಂದೆ ಎಲ್ಲ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ, ಪರಿಷತ್ತಿನ ಸದಸ್ಯರು, ಸಂಸದರ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಎಂದು ಸೂಚಿಸಲಾಗಿದೆ.


ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸುತ್ತೋಲೆ ಹೊರಡಿಸಿದ್ದಾರೆ.


Leave a comment

Leave a Reply

Your email address will not be published. Required fields are marked *

Related Articles

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ  ಇಂದು ಯುಗಾದಿ ಹಬ್ಬದಂದೇ...

ಕರ್ನಾಟಕ ಉಪಚುನಾವಣಾ ಕಣ  ಏಪ್ರಿಲ್ 9 ಚುನಾವಣೆ ಮೇ 4ಕ್ಕೆ ಫಲಿತಾಂಶ ಪ್ರಕಟ

“ಬೆಂಗಳೂರು: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಉಭಯ...

ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ಬಂದಿಲ್ಲ ಭ್ರಷ್ಟ ಬಿವೈ ಯಡಿಯೂರಪ್ಪ ವಿಜೇಂದ್ರ ಯಡಿಯೂರಪ್ಪ ಇರುವ ತನಕ ಬಿಜೆಪಿ ಸೇರಲ್ಲ ::ಬಸನಗೌಡ ಪಾಟೀಲ್ ಯತ್ನಾಲ್

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ,ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ...

ಕರ್ನಾಟಕ ಬಜೆಟ್ ರಾಜ್ಯದಲ್ಲಿ ಹೊಸದಾಗಿ 12ಪೊಲೀಸ್ ಠಾಣೆಗಳ ಸ್ಥಾಪನೆ ಘೋಷಣೆ

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಿದ್ದು, ಪೊಲೀಸ್ ಇಲಾಖೆ ಸೇರಿದಂತೆ...