ರಾಜ್ಯಪಾಲರಿಗೆ ಅಪಮಾನ; ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

19

ಬೆಂಗಳೂರು: ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನದ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ‘ಅವಮಾನಿಸಿದ ಮತ್ತು ಅಗೌರವಿಸಿದ’ ಆರೋಪದ ಮೇಲೆ ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಮಂಗಳವಾರ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು
ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ನ್ಯಾಯಕ್ಕಾಗಿ ಒತ್ತಾಯಿಸಿದರು. ಅಬಕಾರಿ ಇಲಾಖೆಯ ಹಗರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದ ಅವರು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯಗಳು ಮತ್ತು ಮಹಿಳೆಯರಿಗೆ ಅಸಮರ್ಪಕ ಭದ್ರತೆ ಕುರಿತು ರಾಜ್ಯ ಸರ್ಕಾರವನ್ನು ದೂಷಿಸಿದರು.

ವಿಧಾನಸಭೆ ಮತ್ತು ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ ಮತ್ತು ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ಎಂಎಲ್‌ಸಿ ಸಿಟಿ ರವಿ, ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬಿವೈ ವಿಜಯೇಂದ್ರ ಮಾತನಾಡಿ, ‘ಅಬಕಾರಿ ಸಚಿವರು ಮತ್ತು ಅವರ ಕುಟುಂಬ ಸದಸ್ಯರು ಭಾಗಿಯಾಗಿರುವ ₹6,000 ಕೋಟಿ ಹಗರಣದ ಬಗ್ಗೆ ಈಗಾಗಲೇ ಪುರಾವೆಗಳು ಹೊರಬಿದ್ದಿವೆ. ಆದರೆ, ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲಿ ಈ ಬಗ್ಗೆ ಚರ್ಚಿಸಲು ಇಚ್ಛಿಸುತ್ತಿಲ್ಲ… ಸಿಬಿಐ ಅಥವಾ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸುವುದು ಇಡೀ ಹಗರಣಕ್ಕೆ ಏಕೈಕ ಉತ್ತರ. ಸಿದ್ದರಾಮಯ್ಯ ಸರ್ಕಾರ ಇಡೀ ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ,

ನಾಟಕ ಸೃಷ್ಟಿಸುತ್ತಿದೆ. ಸದನದ ಹೊರಗೆ ಮತ್ತು ಸದನದ ಒಳಗೆ, ನಾವು ಅಬಕಾರಿ ಸಚಿವರ ರಾಜೀನಾಮೆಗೆ ಒತ್ತಾಯಿಸಲಿದ್ದೇವೆ’ ಎಂದು ಹೇಳಿದ್ದಾರೆ. ‘ಎರಡು ವರ್ಷಗಳಲ್ಲಿ ₹6,000 ಕೋಟಿ ಸಂಗ್ರಹಿಸಿ ಈ ಸರ್ಕಾರಕ್ಕೆ ನೀಡಲಾಗಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹೇಳಿದ್ದಾರೆ.
ಇದಕ್ಕೆ ಮುಖ್ಯಮಂತ್ರಿ ಅಥವಾ ಅಬಕಾರಿ ಸಚಿವರು ಏನು ಉತ್ತರ ನೀಡುತ್ತಾರೆ? ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷರಿಗೆ ಈ ಬಗ್ಗೆ ಪತ್ರ ಬರೆಯುತ್ತೇವೆ… ತಕ್ಷಣವೇ, ಸಚಿವ ತಿಮ್ಮಾಪುರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು.’ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು. ಕರ್ನಾಟಕ ವಿಧಾನಸಭೆಯಲ್ಲಿ ಜನವರಿ 22 ರಂದು ರಾಜ್ಯಪಾಲರು ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದಲು ನಿರಾಕರಿಸಿದರು ಮತ್ತು ತಮ್ಮ ಸಾಂಪ್ರದಾಯಿಕ ಭಾಷಣವನ್ನು ಕೇವಲ ಎರಡೇ ಸಾಲುಗಳಲ್ಲಿ ಓದಿ ಮುಕ್ತಾಯಗೊಳಿಸಿ, ಅಲ್ಲಿಂದ ತೆರಳಿದರು.

ಇದರಿಂದ ರಾಜ್ಯ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿತು. ರಾಜ್ಯಪಾಲರು ತಮ್ಮ ಮೂರು ಸಾಲಿನ ಭಾಷಣ ಮುಗಿಸಿ ನಿರ್ಗಮನ ದ್ವಾರದ ಕಡೆಗೆ ಸಾಗುತ್ತಿದ್ದಂತೆ, ಎಂಎಲ್‌ಸಿ ಹರಿಪ್ರಸಾದ್ ಸೇರಿದಂತೆ ಕೆಲವು ಆಡಳಿತ ಪಕ್ಷದ ಶಾಸಕರು ಘೋಷಣೆಗಳನ್ನು ಕೂಗುವ ಮೂಲಕ ಅವರನ್ನು ಗೇರಾವ್ ಮಾಡಲು ಪ್ರಯತ್ನಿಸಿದರು.
ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಕೊಲೆಯನ್ನು ಸಣ್ಣ ಘಟನೆ ಎಂದು ಕರೆದ ಕೊಪ್ಪಳ ಕಾಂಗ್ರೆಸ್ ಸಂಸದ ರಾಜಶೇಖರ್ ಬಸವರಾಜ್ ಹಿಟ್ನಾಳ್ ಅವರ ಹೇಳಿಕೆ, ಕಾಂಗ್ರೆಸ್‌ನ ಸುಳ್ಳು ಪ್ರಚಾರ ಮತ್ತು ಕೇಂದ್ರ ಸರ್ಕಾರದ ಹೊಸ ಉದ್ಯೋಗ ಖಾತರಿ ಕಾನೂನಿಗೆ ವಿರೋಧವನ್ನು ಪ್ರತಿಭಟನೆಯಲ್ಲಿ ಖಂಡಿಸಲಾಯಿತು.

Leave a comment

Leave a Reply

Your email address will not be published. Required fields are marked *

Related Articles

ನಾಯಕತ್ವ ಬದಲಾವಣೆ ಸದ್ಯದ ಮಟ್ಟಿಗೆ ಯತೀಂದ್ರ ಹೈಕಮಾಂಡ್ ಯತೀಂದ್ರಗೆ ಟಾಂಗ್ ನೀಡಿದ ಡಿಕೆ ಶಿವಕುಮಾರ್

“ಮಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿದ್ದರಾಮಯ್ಯನವರೇ ಐದು ವರ್ಷ...

ಬಿಜೆಪಿ ಆರು ಚುನಾವಣಾ  ಕ್ಷೇತ್ರಗಳ  ಪ್ರವಾಸ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ

“ಕೊಯಮತ್ತೂರು: 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು...

ಮುಂಬೈ ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕಾಗಿ ಚುನಾವಣೆ ಗರಿಗೆದರಿದ ರಾಜಕೀಯ ಪಕ್ಷಗಳ ಮೈತ್ರಿ

“: ಬೃಹನ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಚ್ಚರಿ ರೀತಿಯಲ್ಲಿ ಬದ್ಧ ವೈರಿಗಳಾದ ಬಿಜೆಪಿ ಹಾಗೂ ಶಿವಸೇನಾ...

ಕೇಂದ್ರ ಸಚಿವ ಸೋಮಣ್ಣ ಅವರತ್ತ ಕುರ್ಚಿ ಎಸೆದು ಮುತ್ತಿಗೆ ಹಾಕಿ ಕೈ ಕಾರ್ಯಕರ್ತರ ಆಕ್ರೋಶ

ಕೇಂದ್ರ ಸಚಿವ ಸೋಮಣ್ಣ ಅವರತ್ತ ಕುರ್ಚಿ ಎಸೆದು ಕೈ ಕಾರ್ಯಕರ್ತರ ಆಕ್ರೋಶ ಕೊಪ್ಪಳದ ಹಿಟ್ನಾಳ ಗ್ರಾಮದಲ್ಲಿ...