ಉಡುಪಿ ಸಾಸ್ತಾನ ಟೋಲ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ

13

ಉಡುಪಿ ಬ್ರಹ್ಮಾವರ:ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿಯು ನಿವೃತ್ತ ಯೋಧರೊಂದಿಗೆ ಟೋಲ್ ವಸೂಲು ಮಾಡುವಾಗ ಅನುಚಿತವಾಗಿ ನಡೆದುಕೊಂಡಿರುವುದು ಅತ್ಯಂತ ಖೇದಕರವಾಗಿದೆ. ದೇಶದ ಘನತೆಯನ್ನು ಎತ್ತಿ ಹಿಡಿಯುವ ಯೋಧರೊಂದಿಗೆ ಟೋಲ್ ವಿನಾಯಿತಿ ಪತ್ರ ತೋರಿಸಿದರೂ ಬಲವಂತವಾಗಿ ಟೋಲ್ ವಸೂಲು ಮಾಡಲು ಹೊರಟಿರುವುದು ಎಲ್ಲ ದೇಶಪ್ರೇಮಿಗಳಿಗೂ ಮಾಡಿರುವ ಅವಮಾನವಾಗಿದೆ.

ಟೋಲ್ ಸಿಬ್ಬಂದಿಗೆ ಯಾರೊಂದಿಗೆ ಹೇಗೆ ನಡೆದುಕೊಳ್ಳಬೇಕೆಂಬ ಕನಿಷ್ಠ ಜ್ಞಾನವೂ ಇಲ್ಲದಿರುವುದು ಬಾರಿ ವಿಷಾದದ ಸಂಗತಿಯಾಗಿದೆ. ಇನ್ನೂ ಮುಂದಾದರೂ ಟೋಲ್ ಸಿಬ್ಬಂದಿಗಳಿಗೆ ಗೌರವಾನ್ವಿತ ಸೈನಿಕರು ಹಾಗೂ ಇತರ ನಾಗರಿಕರೊಂದಿಗೆ ಹೇಗೆ ಮಾದರಿಯಾಗಿ ನಡೆದುಕೊಳ್ಳಬೇಕು ಎಂಬ ಬಗ್ಗೆ ಸೂಕ್ತ ಅರಿವು ಮೂಡಿಸುವುದು ಅಗತ್ಯವಾಗಿದೆ.

ಮಾನ್ಯ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿಯನ್ನು ನೀಡಲಾಯಿತು.
ತಾವು ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ನೀಡಿರುವ ದೂರನ್ನು ಪರಿಶೀಲಿಸಿ ಸದ್ರಿ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುತ್ತೇವೆ.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಗೌರವಾಧ್ಯಕ್ಷರಾದ ಅನ್ಸರ್ ಅಹ್ಮದ್ ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ ಸೇರಿಗಾರ್ತಿ, ಉಪಾಧ್ಯಕ್ಷೆ ದೇವಕಿ ಬಾರ್ಕೂರು, ಜಯಪ್ರಕಾಶ್ ಶೆಟ್ಟಿ, ನಾಗರಾಜ್, ಸಿದ್ದಣ್ಣ ಎಸ್ ಪೂಜಾರಿ , ಸವಿತಾ, ಆಶಾ. ಅನುಷ ಪಳ್ಳಿ. ಆನಂದ್ ಶೆಟ್ಟಿ. ಶಬೀರ್. ಉಮೇಶ್. ಮೊದಲಾದವರು ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ರಾಷ್ಟ್ರೀಯ ಹೆದ್ದಾರಿ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ ಬಳಿ ಇರುವ ರಸ್ತೆ ವಿಭಾಜಕವನ್ನು ತೆರೆದು ಕೊಟ್ಟಿರುವುದನ್ನು ಪ್ರಶ್ನಿಸಿ ಹೋರಾಟಕ್ಕೆ ಸಿದ್ಧತೆ

ಬಹುದಿನಗಳಿಂದ ಸುದ್ದಿಯಲ್ಲಿರುವ ಉಡುಪಿಯಹೆದ್ದಾರಿ ವಿಭಾಜಕಒಡೆದ ಪ್ರಕರಣದಉಡುಪಿ ಸಾರ್ವಾಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿರುವವಿಚಾರದಲ್ಲಿ ನೆಡೆದ ಪತ್ರಿಕಾಗೋಷ್ಠಿ ಉಡುಪಿ...

ಲೋಕಾಯುಕ್ತರ ಹೆಸರಿನಲ್ಲಿ ನಗರಸಭೆ ಕಂದಾಯ ಅಧಿಕಾರಿಗೆ ಫೋನ್ ಕರೆ ಮಾಡಿ ಬೆದರಿಕೆ ಪ್ರಕರಣ ದಾಖಲು

ಲೋಕಾಯುಕ್ತರ ಹೆಸರಿನಲ್ಲಿ ನಗರ ಸಭೆ ಅಧಿಕಾರಿಗೆ ಫೋನ್ ಕರೆ ಮಾಡಿ ಬೆದರಿಕೆ ಪ್ರಕರಣ ದಾಖಲು ಕಪಿಲ್‌...

ಹೆಲ್ಪಿಂಗ್ ಹ್ಯಾಂಡ್ಸ್ ಚಾರೀಟೇಬಲ್ ಟೃಸ್ಟ್ (ರಿ.) ಕುಂದಾಪುರ ವತಿಯಿಂದ ವೀರ ಯೋಧ ಅನೂಪ್ ಪೂಜಾರಿ ಇವರ ಸವಿ‌ ನೆನಪಿನಲ್ಲಿ “ನೆತ್ತರ ನೆರವು”ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೆಲ್ಪಿಂಗ್ ಹ್ಯಾಂಡ್ಸ್ ಚಾರೀಟೇಬಲ್ ಟೃಸ್ಟ್ (ರಿ.) ಕುಂದಾಪುರ (ನೊಂದ ಹೃದಯಗಳಿಗೆ ನೆರವಿನ ಹಸ್ತ) ಇವರ ಆಯೋಜನೆಯಲ್ಲಿ,...

ಅಶಕ್ತರಿಗೆ, ಕ್ಷಯ ರೋಗದಿಂದ ಬಳಲುತ್ತಿರುವವರಿಗೆ ದಿವ್ಯಾ0ಗ ರಕ್ಷಣಾ ಸಮಿತಿಯಿಂದ  ಆಹಾರ ಕಿಟ್ ವಿತರಣೆ:: ವಿಜಯ ಕೊಡವೂರು

*ಆಶಕ್ತರು, ಕ್ಷಯ ರೋಗಸ್ತರಿಗೆ ಆಹಾರ ಕಿಟ್ ವಿತರಣೆ – ಕೊಡವೂರು* ಕೊಡವೂರು ವಾರ್ಡ್ ನಲ್ಲಿ ಆಶಕ್ತರು,...