ಮೈಲಾರ ಲಿಂಗೇಶ್ವರನ ಐತಿಹಾಸಿಕ ಕಾರ್ಣಿಕೋತ್ಸವ – 2026 18 ಅಡಿ ಎತ್ತರದ ಬಿಲ್ಲೇರಿ ನುಡಿದ ದೈವವಾಣಿ

4

“ವಿಜಯನಗರ: ಉತ್ತರ ಕರ್ನಾಟಕದ ಹಾಗೂ ಕೋಟಿ ಕೋಟಿ ಭಕ್ತರ ನಂಬಿಕೆಯ ಕೇಂದ್ರವಾಗಿರುವ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರದಲ್ಲಿ ಬುಧವಾರ ಐತಿಹಾಸಿಕ ಕಾರ್ಣಿಕೋತ್ಸವ ಅದ್ಧೂರಿಯಾಗಿ ನೆರವೇರಿದೆ. ಮೈಲಾರ ಲಿಂಗೇಶ್ವರನ ಸನ್ನಿಧಿಯಲ್ಲಿ ಗೊರವಯ್ಯ ರಾಮಪ್ಪ ಅವರು 18 ಅಡಿ ಎತ್ತರದ ಬಿಲ್ಲೇರಿ ನುಡಿದ ದೈವವಾಣಿ ಅಲ್ಲಿ ಸೇರಿದ್ದ ಲಕ್ಷಾಂತರ ಭಕ್ತರಲ್ಲಿ ರೋಮಾಂಚನ ಉಂಟುಮಾಡಿದೆ.
ಸಂಪಾಯಿತಲೇ ಪರಾಕ್ ಎಂದು ಗೊರವಯ್ಯ ಗಟ್ಟಿಯಾಗಿ ಭವಿಷ್ಯ ನುಡಿದಿದ್ದು, ಇದರ ಬೆನ್ನಲ್ಲೇ ಭಕ್ತರು ಜಯಘೋಷ ಹಾಕಿದ್ದಾರೆ. ಸಂಪಾಯಿತಲೇ ಪರಾಕ್ ಎಂದರೇನು..? ಸಾಮಾನ್ಯವಾಗಿ ‘ಸಂಪಾಯಿತಲೇ ಪರಾಕ್’ ಎಂದರೆ ಎಲ್ಲವೂ ಸಂಪೂರ್ಣವಾಯಿತು ಅಥವಾ ಸಮೃದ್ಧವಾಯಿತು ಎಂದು ಅರ್ಥೈಸಲಾಗುತ್ತದೆ


ನಾಡಿನಲ್ಲಿ ಮಳೆ-ಬೆಳೆ ಚೆನ್ನಾಗಿ ಆಗಿ, ರೈತರ ಬದುಕು ಹಸನಾಗುತ್ತೆ, ಸುಖ ಶಾಂತಿ ನೆಲೆಸುತ್ತೆ ಎನ್ನುವ ಅರ್ಥವನ್ನು ಈ ಪದ ನೀಡುತ್ತದೆ. ಗೊರವಯ್ಯನ ಭವಿಷ್ಯವಾಣಿಯಿಂದ ಭಕ್ತರು ಸಂತಸಗೊಂಡಿದ್ದು, ಕಷ್ಟಗಳೆಲ್ಲ ಕಳೆದು ಒಳ್ಳೆ ದಿನಗಳು ಬರುತ್ತೆ ಎಂದು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಏತನ್ಮಧ್ಯೆ ಪ್ರತಿ ವರ್ಷ ಕಾರ್ಣಿಕ ಆದ ತಕ್ಷಣ, ಅಲ್ಲಿನ ಧರ್ಮದರ್ಶಿಗಳಾದ ವೆಂಕಪ್ಪಯ್ಯ ಒಡೆಯರ್ ಅವರು ಆ ಸಾಲಿನ ಅರ್ಥವನ್ನ ಬಿಡಿಸಿ ಹೇಳುತ್ತಿದ್ದರು.
ರಾಜಕೀಯದಲ್ಲಿ ಏನಾಗುತ್ತೆ, ಮಳೆ ಹೇಗಾಗುತ್ತೆ ಎಂದು ವಿಶ್ಲೇಷಣೆ ಮಾಡುತ್ತಿದ್ದರು, ಆದರೆ, ಆದ್ರೆ ಈ ಬಾರಿ ವಿಜಯನಗರ ಡಿಸಿ ಕವಿತಾ ಮನ್ನಿಕೇರಿ ಅವರು ಇದಕ್ಕೆ ತಡೆ ಹಾಕಿದ್ದಾರೆ. ಕಾರ್ಣಿಕವನ್ನ ಧರ್ಮದರ್ಶಿಗಳು ಅಥವಾ ಯಾರೂ ಅಧಿಕೃತವಾಗಿ ವಿಶ್ಲೇಷಣೆ ಮಾಡುವ ಹಾಗಿಲ್ಲ, ಅದು ಅವರವರ ಭಕ್ತಿಗೆ ಬಿಟ್ಟಿದ್ದು ಎಂದು ಖಡಕ್ ಸೂಚನೆ ನೀಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಬೇಲಿಕೇರಿ ಕಬ್ಬಿಣದ ಅದಿರು ಅಕ್ರಮ ಸಾಗಾಟ ಪ್ರಕರಣ ತಂದೆ ಮಗನಿಗೆ ಮೂರು ವರ್ಷ ಜೈಲು ಶಿಕ್ಷೆ, 52.55ಲಕ್ಷ ದಂಡ ವಿಧಿಸಿದ  ನ್ಯಾಯಾಲಯ

“ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು...

ಇಂಧನ ಖಾತೆ ಕೆಲಸಗಳಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ರಾಜೀನಾಮೆಗೆ ಮುಂದಾದರೆ ಇಂಧನ ಸಚಿವ ಕೆ ಜೆ ಜಾರ್ಜ್

“ಇಂಧನ ಸಚಿವ ಕೆ.ಜೆ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೇ, ಈ ವಿಚಾರ ಮಾಧ್ಯಮಗಳಲ್ಲಿ...

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ  ಹೈಕೋರ್ಟ್

“ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್...

ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್ ಜನರಲ್  ಎಂ.ಎ. ಸಲೀಂ  ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪ  ಪುನೀತ್ ಕೆರೆಹಳ್ಳಿ ವಿರುದ್ಧ  ಪ್ರಕರಣ ದಾಖಲು

ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್ ಜನರಲ್ (ಡಿಜಿ ಮತ್ತು ಐಜಿಪಿ) ಎಂ.ಎ. ಸಲೀಂ ವಿರುದ್ಧ ಸುಳ್ಳು...