ಮುಂಬೈ ಮಹಾನಗರಪಾಲಿಕೆಯ ಮೇಯರ್ ಚುನಾವಣೆ ಬಿಜೆಪಿ ಅಭ್ಯರ್ಥಿ ಯಾಗಿ ರಿತು ತಾವಡೆ ಆಯ್ಕೆ

3

“ಮುಂಬೈ: ಮುಂಬೈ ಮಹಾನಗರಪಾಲಿಕೆಯ (ಬಿಎಂಸಿ) ಮೇಯರ್ ಚುನಾವಣೆಗೆ ರಿತು ತಾವಡೆ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾಗಿ ಶನಿವಾರ ಆಯ್ಕೆ ಮಾಡಿದೆ. ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ.
ರಿತು ತಾವಡೆ ವಾರ್ಡ್‌ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ. ಸಂಜಯ್ ಘಾಡಿ ವಾರ್ಡ್‌ ಸಂಖ್ಯೆ 5ರಿಂದ ಆಯ್ಕೆಯಾಗಿದ್ದಾರೆ. ಸಂಜಯ್‌ ಈ ಹಿಂದೆ 15 ತಿಂಗಳ ಕಾಲ ಉಪಮೇಯರ್ ಆಗಿ ಕೆಲಸ ಮಾಡಿದ್ದರು. 227 ಸದಸ್ಯ ಬಲದ ಪಾಲಿಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು. ಬಿಜೆಪಿ 89 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿವಸೇನೆ 29 ಸ್ಥಾನಗಳನ್ನು ಗೆದ್ದುಕೊಂಡಿದೆ.
ಒಟ್ಟಾರೆ 118 ಸದಸ್ಯ ಬಲ ಹೊಂದಿರುವ ಈ ಮೈತ್ರಿಕೂಟ ಸರಳ ಬಹುಮತ ಪಡೆದುಕೊಂಡಿದೆ. 25 ವರ್ಷಗಳ ಕಾಲ ಪಾಲಿಕೆ ಆಡಳಿತ ನಡೆಸಿದ್ದ ಶಿವಸೇನೆ (ಯುಬಿಟಿ) ಈ ಬಾರಿ 65 ಸ್ಥಾನಗಳನ್ನು ಗೆದ್ದು ಅಧಿಕಾರದಿಂದ ಕೆಳಗಿಳಿದಿದೆ.
ಅದರ ಮೈತ್ರಿ ಪಕ್ಷಗಳಾದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) 6, ಎನ್‌ಸಿಪಿ (ಶರದ್) 1 ಸ್ಥಾನ ಪಡೆದಿತ್ತು. ಇತರೆ ಪಕ್ಷಗಳಾದ ಕಾಂಗ್ರೆಸ್ 24, ಎಐಎಂಐಎಂ 8, ಎನ್‌ಸಿಪಿ (ಅಜಿತ್) 3, ಸಮಾಜವಾದಿ ಪಕ್ಷ 2 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಮಣಿಪುರ ಬಿಜೆಪಿ ನೂತನ ಸರಕಾರ ರಚನೆಗೆ ಸಿದ್ಧತೆ ಶಾಸಕಾಂಗ ಪಕ್ಷದ ನಾಯಕಮುಖ್ಯ ಮಂತ್ರಿಯಾಗಿ ವೈ ಖೇಮ್ ಚಂದ್ ಸಿಂಗ್ ಆಯ್ಕೆ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಹತ್ವದ ಬೆಳವಣಿಗೆಯಲ್ಲಿ ಒಂದು ವರ್ಷದ ರಾಷ್ಟ್ರಪತಿ ಆಡಳಿತ ಅಂತ್ಯವಾಗಿದ್ದು, ಮತ್ತೆ ಬಿಜೆಪಿ...

ಅಮೆರಿಕದ ಸುಂಕ ಬೆದರಿಕೆ ಚಬಹಾರ್ ಬಂದರು ನಿರ್ಮಾಣಕ್ಕೆ ಯಾವುದೇ ಅನುದಾನ ಈ ವರ್ಷದ ಬಜೆಟ್ ನಲ್ಲಿ ಇಲ್ಲ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿದ ಬಜೆಟ್ ನಲ್ಲಿ ಇರಾನ್ ನ...

ಪ್ರಖ್ಯಾತ ಯೂಟ್ಯೂಬರ್ ಗೆ ಕುರಿ ಮಾಂಸದ ಬದಲಿಗೆ ಗೋಮಾಂಸ ನೀಡಿದ  ರೆಸ್ಟೋರೆಂಟ್ ಸಿಬ್ಬಂದಿ ಬಂಧನ

ಕೋಲ್ಕತ್ತಾದ ಪಾರ್ಕ್ ಸ್ಟ್ರೀಟ್‌ನಲ್ಲಿರುವ ಪ್ರಸಿದ್ಧ ಬಾರ್-ಕಮ್-ರೆಸ್ಟೋರೆಂಟ್‌ವೊಂದರಲ್ಲಿ ಒಬ್ಬ ವೇಟರ್‌ ಕುರಿಮರಿ ಬದಲಿಗೆ ಗೋಮಾಂಸವನ್ನು ಬಡಿಸಿದ ಎಂಬ...

ಮಹಾರಾಷ್ಟ್ರ ಪ್ರಥಮ ಮಹಿಳಾಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ

ಇತ್ತೀಚಿಗೆ ವಿಮಾನ ಪತನದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ...