ಮುಂಬೈ ಮಹಾನಗರಪಾಲಿಕೆಯ ಮೇಯರ್ ಚುನಾವಣೆ ಬಿಜೆಪಿ ಅಭ್ಯರ್ಥಿ ಯಾಗಿ ರಿತು ತಾವಡೆ ಆಯ್ಕೆ

18

“ಮುಂಬೈ: ಮುಂಬೈ ಮಹಾನಗರಪಾಲಿಕೆಯ (ಬಿಎಂಸಿ) ಮೇಯರ್ ಚುನಾವಣೆಗೆ ರಿತು ತಾವಡೆ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾಗಿ ಶನಿವಾರ ಆಯ್ಕೆ ಮಾಡಿದೆ. ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ.
ರಿತು ತಾವಡೆ ವಾರ್ಡ್‌ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ. ಸಂಜಯ್ ಘಾಡಿ ವಾರ್ಡ್‌ ಸಂಖ್ಯೆ 5ರಿಂದ ಆಯ್ಕೆಯಾಗಿದ್ದಾರೆ. ಸಂಜಯ್‌ ಈ ಹಿಂದೆ 15 ತಿಂಗಳ ಕಾಲ ಉಪಮೇಯರ್ ಆಗಿ ಕೆಲಸ ಮಾಡಿದ್ದರು. 227 ಸದಸ್ಯ ಬಲದ ಪಾಲಿಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು. ಬಿಜೆಪಿ 89 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿವಸೇನೆ 29 ಸ್ಥಾನಗಳನ್ನು ಗೆದ್ದುಕೊಂಡಿದೆ.
ಒಟ್ಟಾರೆ 118 ಸದಸ್ಯ ಬಲ ಹೊಂದಿರುವ ಈ ಮೈತ್ರಿಕೂಟ ಸರಳ ಬಹುಮತ ಪಡೆದುಕೊಂಡಿದೆ. 25 ವರ್ಷಗಳ ಕಾಲ ಪಾಲಿಕೆ ಆಡಳಿತ ನಡೆಸಿದ್ದ ಶಿವಸೇನೆ (ಯುಬಿಟಿ) ಈ ಬಾರಿ 65 ಸ್ಥಾನಗಳನ್ನು ಗೆದ್ದು ಅಧಿಕಾರದಿಂದ ಕೆಳಗಿಳಿದಿದೆ.
ಅದರ ಮೈತ್ರಿ ಪಕ್ಷಗಳಾದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) 6, ಎನ್‌ಸಿಪಿ (ಶರದ್) 1 ಸ್ಥಾನ ಪಡೆದಿತ್ತು. ಇತರೆ ಪಕ್ಷಗಳಾದ ಕಾಂಗ್ರೆಸ್ 24, ಎಐಎಂಐಎಂ 8, ಎನ್‌ಸಿಪಿ (ಅಜಿತ್) 3, ಸಮಾಜವಾದಿ ಪಕ್ಷ 2 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಬಳಕೆಯಾಗದೆ ಉಳಿದ ಮೊಬೈಲ್ ಇಂಟರ್ನೆಟ್ ಡೇಟಾ ಮರುದಿನ ಬಳಕೆಗೆ ರೋಲ್ ಓವರ್ ಮಾಡಿ: ಟೆಲಿಕಾಂ ಕಂಪನಿಗಳಿಗೆ ರಾಘವ್ ಚಡ್ಡಾ ಆಗ್ರಹ

ನವದೆಹಲಿ: ಬಳಕೆಯಾಗದೆ ಉಳಿಯುವ ಇಂಟರ್ನೆಟ್ ಡೇಟಾವನ್ನು ಮರುದಿನ ಬಳಸಲು ಟೆಲಿಕಾಂ ಕಂಪನಿಗಳು ಅನುಮತಿ ನೀಡಬೇಕು, ಆ...

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ...

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ  ಸೇರಿದಂತೆ 40ಪ್ರಮುಖರು ಬಿಜೆಪಿಗೆ ಸೇರ್ಪಡೆ

“ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ....